ಸುಳ್ಳು ಹೇಳಿ ತಪ್ಪಿಸಿಕೊಳ್ಳಲಾಗದು, ಅತಿಶಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಬಿಜೆಪಿ

ದೆಹಲಿ ಸಚಿವೆ ಅತಿಶಿ ಒಂದು ಹೇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ, ಬಿಜೆಪಿಯು ಮಾನನಷ್ಟ ಮೊಕದ್ದಮೆ ಹೂಡಿದೆ. ದೆಹಲಿಯಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂದು ಆರೋಪಿಸಿದ್ದರು. ಈ ಸೂಚನೆಗೆ ಸಂಬಂಧಿಸಿದಂತೆ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಮಂಗಳವಾರ ದೆಹಲಿ ಸರ್ಕಾರದ ಸಚಿವ ಅತಿಶಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸುಳ್ಳು ಹೇಳಿ ತಪ್ಪಿಸಿಕೊಳ್ಳಲಾಗದು, ಅತಿಶಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಬಿಜೆಪಿ
ಅತಿಶಿ

Updated on: Apr 03, 2024 | 2:44 PM

ದೆಹಲಿ ಸಚಿವೆ ಅತಿಶಿ(Atishi) ಒಂದು ಹೇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ, ಬಿಜೆಪಿಯು ಮಾನನಷ್ಟ ಮೊಕದ್ದಮೆ ಹೂಡಿದೆ. ದೆಹಲಿಯಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂದು ಆರೋಪಿಸಿದ್ದರು. ಈ ಸೂಚನೆಗೆ ಸಂಬಂಧಿಸಿದಂತೆ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಮಂಗಳವಾರ ದೆಹಲಿ ಸರ್ಕಾರದ ಸಚಿವ ಅತಿಶಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿಗೆ ಸೇರದಿದ್ದರೆ ಬಂಧಿಸುವುದಾಗಿ ಆಪ್ತ ವ್ಯಕ್ತಿಗಳ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಅತಿಶಿ ಆರೋಪಿಸಿದ್ದರು. ಇವರೊಂದಿಗೆ ಸೌರಭ್ ಭಾರದ್ವಾಜ್, ರಾಘವ್ ಚಡ್ಡಾ ಮತ್ತು ದುರ್ಗೇಶ್ ಪಾಠಕ್ ಅವರನ್ನು ಬಂಧಿಸಲಾಗುವುದು ಎನ್ನುವ ಬೆದರಿಕೆ ಬಂದಿರುವುದಾಗಿ ಹೇಳಿಕೊಂಡಿದ್ದರು.

ಈ ಆರೋಪಕ್ಕೆ ಪುರಾವೆ ನೀಡುವಂತೆ ಬಿಜೆಪಿ ಕೇಳಿತ್ತು. ಅವರು ಯಾವುದೇ ಸಾಕ್ಷ್ಯವನ್ನು ನೀಡಿಲ್ಲ. ಇಂತಹ ಸುಳ್ಳು ಆರೋಪಗಳು ಬಿಜೆಪಿ ಮತ್ತು ಅದರ ಕಾರ್ಯಕರ್ತರ ರಾಜಕೀಯ ಮತ್ತು ಸಾಮಾಜಿಕ ಚಿತ್ರಣವನ್ನು ಹಾಳುಮಾಡುತ್ತವೆ, ಆದ್ದರಿಂದ ಮಂಗಳವಾರ ರಾತ್ರಿ ಅತಿಶಿಗೆ ಮಾನನಷ್ಟ ನೋಟಿಸ್ ನೀಡಲಾಗಿದ್ದು, ಆರೋಪಗಳನ್ನು ಹಿಂಪಡೆದು ಸಾರ್ವಜನಿಕ ಕ್ಷಮೆಯಾಚಿಸುವಂತೆ ಕೇಳಿಕೊಳ್ಳಲಾಗಿದೆ.

ಪಕ್ಷದ ಮಾಧ್ಯಮ ಮುಖ್ಯಸ್ಥ ಮತ್ತು ವಕ್ತಾರ ಪ್ರವೀಣ್ ಶಂಕರ್ ಕಪೂರ್ ಅವರು ನೋಟಿಸ್ ನೀಡಿದ್ದಾರೆ. ಅತಿಶಿ ಕೂಡಲೇ ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಲಿದೆ.

ಪ್ರತಿಕ್ರಿಯಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದ್ದು, ಸ್ಪಂದಿಸದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಇನ್ನೂ ನಾಲ್ವರು ಎಎಪಿ ನಾಯಕರನ್ನು ಬಂಧಿಸಲು ಸಿದ್ಧತೆ ನಡೆಸುತ್ತಿದೆ ಎಂದು ಅತಿಶಿ ಹೇಳಿದ್ದರು.

ಮತ್ತಷ್ಟು ಓದಿ: ಬಿಜೆಪಿಗೆ ಸೇರದಿದ್ದರೆ ಇಡಿ ನನ್ನನ್ನು ಮತ್ತು ಇತರ 3 ಎಎಪಿ ನಾಯಕರನ್ನು ಬಂಧಿಸಲಿದೆ: ಅತಿಶಿ

ವೈಯಕ್ತಿಕ ಸಂಪರ್ಕದ ಮೂಲಕ ಬಿಜೆಪಿ ಸೇರಲು ನನ್ನನ್ನು ಸಂಪರ್ಕಿಸಲಾಗಿದೆ. ನಾನು ಬಿಜೆಪಿಗೆ ಸೇರುವ ಮೂಲಕ ನನ್ನ ರಾಜಕೀಯ ಜೀವನವನ್ನು ಉಳಿಸಿಕೊಳ್ಳಬಹುದು. ಇಲ್ಲವೇ ಮುಂದಿನ ಒಂದು ತಿಂಗಳಲ್ಲಿ ಬಂಧಿಸಬಹುದು ಎಂದು ನನಗೆ ತಿಳಿಸಲಾಗಿದೆ.

ಪ್ರತಿಯೊಬ್ಬ ಎಎಪಿ ನಾಯಕನನ್ನು ಜೈಲಿಗೆ ಹಾಕಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ನನಗೆ ತುಂಬಾ ಹತ್ತಿರವಿರುವ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಅವರಿಂದ ಆರಂಭಿಸಿ ಈಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಆದರೆ ಈಗ ಅವರು ಇನ್ನೂ ನಾಲ್ವರು ಉನ್ನತ ನಾಯಕರನ್ನು ಬಂಧಿಸಲು ಬಯಸಿದ್ದಾರೆ. ಅದರಲ್ಲಿ ನಾನು, ರಾಘವ್ ಚಡ್ಡಾ, ದುರ್ಗೇಶ್ ಪಾಠಕ್ ಮತ್ತು ಸೌರಭ್ ಭಾರದ್ವಾಜ್ ಇದ್ದೀವಿ ಎಂದು ಅತಿಶಿ ಹೇಳಿದ್ದರು.

ಮದ್ಯ ನೀತಿ ತನಿಖೆಗೆ ಸಂಬಂಧಿಸಿದಂತೆ ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು, ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು. ಎಎಪಿ ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಮತ್ತು ತಿಹಾರ್ ಜೈಲಿನಿಂದ ಸರ್ಕಾರವನ್ನು ನಡೆಸುತ್ತಾರೆ ಎಂದು ಹೇಳಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us