AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Excise Policy case: ಇ.ಡಿ ವಿಚಾರಣೆಗೆ ಹಾಜರಾದ ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್

ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಮತ್ತು ಅವರಿಗೆ ಏಪ್ರಿಲ್ 1 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ ನಂತರ ಕೈಲಾಶ್ ಗಹ್ಲೋಟ್ ಅವರಿಗೆ ಸಮನ್ಸ್ ನೀಡಲಾಗಿದೆ. ಮನೀಶ್ ಸಿಸೋಡಿಯಾ ಮತ್ತು ಅರವಿಂದ್ ಕೇಜ್ರಿವಾಲ್ ನಂತರ ಈ ಪ್ರಕರಣದಲ್ಲಿ ಸಮನ್ಸ್ ಪಡೆದ ಮೂರನೇ ದೆಹಲಿ ಸಚಿವ ಗಹ್ಲೋಟ್ ಆಗಿದ್ದಾರೆ.

Excise Policy case: ಇ.ಡಿ ವಿಚಾರಣೆಗೆ ಹಾಜರಾದ ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್
ಕೈಲಾಶ್ ಗೆಹ್ಲೋಟ್
Ganapathi Sharma
|

Updated on: Mar 30, 2024 | 12:19 PM

Share

ನವದೆಹಲಿ, ಮಾರ್ಚ್​ 30: ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ (Arvind Kejriwal) ಜಾರಿ ನಿರ್ದೇಶನಾಲಯ ಕಸ್ಟಡಿ ವಿಸ್ತರಣೆ ಬೆನ್ನಲ್ಲೇ ಇದೀಗ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ (Kailash Gahlot) ಇ.ಡಿ (ED) ವಿಚಾರಣೆಗೆ ಹಾಜರಾದರು. ಕೈಲಾಶ್ ಗಹ್ಲೋಟ್​ ದೆಹಲಿ ಸರ್ಕಾರದಲ್ಲಿ ಸಾರಿಗೆ ಮಾತ್ರವಲ್ಲದೆ ಗೃಹ, ಕಾನೂನು ಮತ್ತು ಸುವ್ಯವಸ್ಥೆ ಖಾತೆಗಳ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ.

49 ವರ್ಷದ ಗಹ್ಲೋಟ್ ನಜಾಫ್‌ಗಢದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರಾಗಿದ್ದಾರೆ. ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಎಎಪಿಯ ಹಲವು ನಾಯಕರು ಜೈಲು ಪಾಲಾಗುತ್ತಿರುವ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21 ರಂದು ಇ.ಡಿ ಕೇಜ್ರಿವಾಲ್​ರನ್ನು ಬಂಧಿಸಿತ್ತು.

ವರದಿಯ ಪ್ರಕಾರ, ಗಹ್ಲೋಟ್​ಗೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲು ಬರುವಂತೆ ಸೂಚಿಸಲಾಗಿತ್ತು. ಇದರಂತೆ ಅವರು ಇಂದು ವಿಚಾರಣೆಗೆ ಹಾಜರಾದರು.

2021-22 ಕ್ಕೆ ಹೊಸ ಮದ್ಯ ನೀತಿಯನ್ನು ಸಿದ್ಧಪಡಿಸುವ ಮತ್ತು ಅನುಷ್ಠಾನಗೊಳಿಸುವಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿದ್ದ ಸಚಿವರ ಗುಂಪಿನ ಭಾಗವಾಗಿರುವುದರಿಂದ ನೀತಿ ರಚನೆಗೆ ಸಂಬಂಧಿಸಿದಂತೆ ಗೆಹ್ಲೋಟ್​​ರನ್ನು ಇ.ಡಿ ಪ್ರಶ್ನಿಸಿರುವ ಸಾಧ್ಯತೆ ಇದೆ.

ಇ.ಡಿ ಚಾರ್ಜ್‌ಶೀಟ್‌ನಲ್ಲಿ ಗಹ್ಲೋಟ್ ಹೆಸರನ್ನು ಉಲ್ಲೇಖಿಸಿದೆ ಮತ್ತು ಪ್ರಕರಣದಲ್ಲಿ ಈ ಹಿಂದೆ ಬಂಧಿಸಲಾದ ಎಎಪಿ ಸಂವಹನ ಉಸ್ತುವಾರಿ ವಿಜಯ್ ನಾಯರ್ ಬಗ್ಗೆಯೂ ಉಲ್ಲೇಖಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ, ಅಕ್ರಮ ಹಣಕಾಸು ವರ್ಗಾವಣೆ ಮಾಡಿದ ಆರೋಪಗಳಿಗೆ ಸಂಬಂಧಿಸಿದೆ. ನಂತರ ಸರ್ಕಾರದ ಅಬಕಾರಿ ನೀತಿಯನ್ನು ರದ್ದುಗೊಳಿಸಲಾಯಿತು. ಈ ಪ್ರಕರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಈ ಹಿಂದೆಯೇ ಇಡಿ ಬಂಧಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ನಂತರ ಇ.ಡಿ ಪಿಎಂಎಲ್‌ಎ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.

ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​​ ಮತ್ತೆ 4 ದಿನ ಇಡಿ ಕಸ್ಟಡಿಗೆ

ಮತ್ತೊಂದೆಡೆ, ಅಕ್ರಮ ಹಣ ವರ್ಗಾವಣೆ ಆರೋಪಿ ಸುಕೇಶ್ ಚಂದ್ರಶೇಖರ್ ಅವರಿಂದ 10 ಕೋಟಿ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ಜೈಲು ಪಾಲಾದ ಎಎಪಿ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ