AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ತ್ರಿವಳಿ ಕೊಲೆ, ದುಷ್ಕೃತ್ಯವೆಸಗಿದ್ದು ಮತ್ಯಾರು ಅಲ್ಲ ಸ್ವಂತ ಮಗ

ದೆಹಲಿಯಲ್ಲಿ ತ್ರಿವಳಿ ಕೊಲೆ ನಡೆದ 24 ಗಂಟೆಗಳಲ್ಲಿ ಪೊಲೀಸರು ಪ್ರಕರಣ ಭೇದಿಸಿದ್ದಾರೆ. ದಂಪತಿ ಹಾಗೂ ಅವರ ಪುತ್ರಿ ಸೇರಿ ಮೂವರನ್ನು ಯಾರೋ ಚಾಕುವಿನಿಂದ ತಿವಿದು ಹತ್ಯೆ ಮಾಡಿದ್ದರು. ಮಗ ಮಾತ್ರ ಜಾಗಿಂಗ್ ಹೋಗಿದ್ದರಿಂದ ಬಚಾವಾಗಿದ್ದ ಎಂದು ಎಲ್ಲರೂ ನಂಬಿದ್ದರು ಆದರೆ ಆಗಿದ್ದೇ ಬೇರೆ.

ದೆಹಲಿ ತ್ರಿವಳಿ ಕೊಲೆ, ದುಷ್ಕೃತ್ಯವೆಸಗಿದ್ದು ಮತ್ಯಾರು ಅಲ್ಲ ಸ್ವಂತ ಮಗ
ಆರೋಪಿImage Credit source: NDTV
ನಯನಾ ರಾಜೀವ್
|

Updated on: Dec 05, 2024 | 8:59 AM

Share

ದೆಹಲಿಯಲ್ಲಿ ತ್ರಿವಳಿ ಕೊಲೆ ನಡೆದ 24 ಗಂಟೆಗಳಲ್ಲಿ ಪೊಲೀಸರು ಪ್ರಕರಣ ಭೇದಿಸಿದ್ದಾರೆ. ದಂಪತಿ ಹಾಗೂ ಅವರ ಪುತ್ರಿ ಸೇರಿ ಮೂವರನ್ನು ಯಾರೋ ಚಾಕುವಿನಿಂದ ತಿವಿದು ಹತ್ಯೆ ಮಾಡಿದ್ದರು. ಮಗ ಮಾತ್ರ ಜಾಗಿಂಗ್ ಹೋಗಿದ್ದರಿಂದ ಬಚಾವಾಗಿದ್ದ ಎಂದು ಎಲ್ಲರೂ ನಂಬಿದ್ದರು ಆದರೆ ಆಗಿದ್ದೇ ಬೇರೆ.

ದಕ್ಷಿಣ ದೆಹಲಿಯ ನೆಬ್ ಸರಾಯ್​ನಲ್ಲಿ ನಡೆದ ಕೊಲೆ ಹಿಂದಿರುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಅದು ಮತ್ಯಾರು ಅಲ್ಲ ಆ ದಂಪತಿಯ ಮಗನೇ ಎಂಬುದು ತಿಳಿದುಬಂದಿದೆ. ತಂದೆ ತನಗೆ ಅವಮಾನ ಮಾಡಿದ್ದರು, ಜತೆಗೆ ಅಷ್ಟೂ ಆಸ್ತಿಯನ್ನು ತನ್ನ ಸಹೋದರಿಗೆ ನೀಡುವುದಾಗಿ ಹೇಳಿದ್ದರು, ಹಾಗಾಗಿ ಅವರ ಮದುವೆ ವಾರ್ಷಿಕೋತ್ಸವದಂದೇ ಅವರನ್ನು ಕೊಲೆ ಮಾಡಲು ನಿರ್ಧರಿಸಿದ್ದೆ ಎಂದು ಆತ ಬಾಯ್ಬಿಟ್ಟಿದ್ದಾನೆ.

ತನ್ನ ಇಡೀ ಕುಟುಂಬವು ಮಲಗಿರುವಾಗ ಕೊಲೆ ಮಾಡಿದ್ದಾನೆ, ರಾಜೇಶ್ ಕುಮಾರ್ (51), ಅವರ ಪತ್ನಿ ಕೋಮಲ್ (46) ಮತ್ತು ಅವರ 23 ವರ್ಷದ ಮಗಳು ಕವಿತಾ ಅವರ ಶವಗಳು ನೆಬ್ ಸರೈನಲ್ಲಿರುವ ಅವರ ಮನೆಯಲ್ಲಿ ಬುಧವಾರ ಬೆಳಗ್ಗೆ ಪತ್ತೆಯಾಗಿವೆ.

ಮತ್ತಷ್ಟು ಓದಿ: ದೆಹಲಿ: ಚೂರಿಯಿಂದ ಇರಿದು ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ

ರಾಜೇಶ್ ಮತ್ತು ಕೋಮಲ್ ಅವರ ಮಗ ಅರ್ಜುನ್, 20, ಅವರು ಬೆಳಿಗ್ಗೆ 5.30 ರ ಸುಮಾರಿಗೆ ಬೆಳಗಿನ ವಾಕಿಂಗ್‌ಗೆ ತೆರಳಿದ್ದರು ಮತ್ತು ಹಿಂದಿರುಗಿದಾಗ ಶವಗಳು ಪತ್ತೆಯಾಗಿತ್ತು ಎಂದು ಹೇಳಿದ್ದರು. ಆದರೆ ಮನೆಯಲ್ಲಿ ಕಳ್ಳತನವಾಗಿಲೀ ಯಾವುದೂ ನಡೆದಿರಲಿಲ್ಲ.

ರಾಜೇಶ್, ಕೋಮಲ್ ಮತ್ತು ಕವಿತಾ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಅಕ್ಕಪಕ್ಕದ ಮನೆಯವರು ಹೇಳಿದ್ದಾರೆ. ಮೃತದೇಹಗಳು ಪತ್ತೆಯಾದ ನಂತರ, ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದರು, ಇದು ಕುಟುಂಬದ ಹೊರಗಿನವರು ಯಾರೂ ಮನೆಗೆ ಪ್ರವೇಶಿಸಿಲ್ಲ ಎಂದು ಅವರಿಗೆ ಮನವರಿಕೆಯಾಯಿತು.

ಅರ್ಜುನ್‌ನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ತನಿಖೆ ಬಳಿಕ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದರು. ಅರ್ಜುನ್ ತಮ್ಮ ಶಾಲಾ ಶಿಕ್ಷಣವನ್ನು ಧೌಲಾ ಕುವಾನ್‌ನ ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿ ಮಾಡಿದ್ದ.ದೆಹಲಿ ವಿಶ್ವವಿದ್ಯಾಲಯದಲ್ಲಿ ಎರಡನೇ ವರ್ಷದ ಬ್ಯಾಚುಲರ್ ಆಫ್ ಆರ್ಟ್ಸ್ ವಿದ್ಯಾರ್ಥಿಯಾಗಿದ್ದಾರೆ.

ತಂದೆ ನಿವೃತ್ತ ಸೈನಿಕರಾಗಿದ್ದು, ಓದಿನ ವಿಚಾರದಲ್ಲಿ ಪದೇ ಪದೆ ಗದರುತ್ತಿದ್ದರು. ಸ್ವಲ್ಪ ದಿನಗಳ ಹಿಂದೆ ಅಕ್ಕಪಕ್ಕದ ಮನೆಯವರ ಮುಂದೆ ಅರ್ಜುನ್​ಗೆ ಥಳಿಸಿದ್ದರು. ಅದಕ್ಕೆ ಕೋಪಗೊಂಡು ಎಲ್ಲರನ್ನೂ ಹತ್ಯೆ ಮಾಡಿದ್ದಾನೆ. ಹರ್ಯಾಣ ಮೂಲದ ಕುಟುಂಬವು 15 ವರ್ಷಗಳ ಹಿಂದೆ ದೆಹಲಿಗೆ ಬಂದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ