AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಚಾಣಕ್ಯ ಮಾಲ್, ಸೆಲೆಕ್ಟ್ ಸಿಟಿವಾಕ್ ಮುಂತಾದ ಮಾಲ್‌ಗಳಿಗೆ ಬಾಂಬ್ ಬೆದರಿಕೆ

ನವದೆಹಲಿಯ ಸೆಲೆಕ್ಟ್ ಸಿಟಿವಾಕ್ ಮತ್ತು ಆಂಬಿಯೆನ್ಸ್ ಮಾಲ್ ಸೇರಿದಂತೆ ದೆಹಲಿಯ ಹಲವಾರು ಪ್ರಮುಖ ಶಾಪಿಂಗ್ ಮಾಲ್‌ಗಳಿಗೆ ಇಂದು ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಕೆಲವೇ ಗಂಟೆಗಳಲ್ಲಿ ಸ್ಫೋಟಕಗಳನ್ನು ಸ್ಫೋಟಿಸಲು ಸಿದ್ಧವಾಗಿದೆ ಎಂದು ಹೇಳಿಕೊಂಡಿದೆ. ದೆಹಲಿ ಪೊಲೀಸರು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ಟೆಂಡರ್‌ಗಳನ್ನು ನಿಯೋಜಿಸಿದ್ದಾರೆ.

ದೆಹಲಿಯ ಚಾಣಕ್ಯ ಮಾಲ್, ಸೆಲೆಕ್ಟ್ ಸಿಟಿವಾಕ್ ಮುಂತಾದ ಮಾಲ್‌ಗಳಿಗೆ ಬಾಂಬ್ ಬೆದರಿಕೆ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 20, 2024 | 3:30 PM

Share

ನವದೆಹಲಿ: ದೆಹಲಿಯಾದ್ಯಂತ ಚಾಣಕ್ಯ ಮಾಲ್, ಸೆಲೆಕ್ಟ್ ಸಿಟಿವಾಕ್, ಆಂಬಿಯೆನ್ಸ್ ಮಾಲ್ ಮತ್ತು ಇತರ ಹಲವು ಶಾಪಿಂಗ್ ಮಾಲ್‌ಗಳಿಗೆ ಇಂದು (ಮಂಗಳವಾರ) ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಕೆಲವೇ ಗಂಟೆಗಳಲ್ಲಿ ಸ್ಫೋಟಕಗಳು ಸ್ಫೋಟಗೊಳ್ಳುತ್ತವೆ ಎಂದು ಬೆದರಿಕೆ ಕರೆ ಮಾಡಿದ ವ್ಯಕ್ತಿ ತಿಳಿಸಿದ್ದಾರೆ. ಈ ಹಿನನ್ನೆಲೆಯಲ್ಲಿ ದೆಹಲಿ ಪೊಲೀಸರು ತಕ್ಷಣ ಪ್ರತಿಕ್ರಿಯಿಸಿ, ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಗಳಿಗೆ ನಿಯೋಜಿಸಿದರು. ಆದರೆ, ಯಾವುದೇ ಬಾಂಬ್‌ಗಳು ಇನ್ನೂ ಪತ್ತೆಯಾಗಿಲ್ಲ. ಅಧಿಕಾರಿಗಳು ತನಿಖೆಯನ್ನು ಮುಂದುವರೆಸಲಾಗಿದೆ.

ಕೆಲವೇ ಗಂಟೆಗಳಲ್ಲಿ ಸ್ಫೋಟಕಗಳು ಸ್ಫೋಟಗೊಳ್ಳುತ್ತವೆ ಎಂಬ ಎಚ್ಚರಿಕೆಯನ್ನು ಸ್ವೀಕರಿಸಿದ ನಂತರ, ದೆಹಲಿ ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ಟೆಂಡರ್‌ಗಳನ್ನು ಪೀಡಿತ ಸ್ಥಳಗಳಿಗೆ ರವಾನಿಸಿದರು. ಸದ್ಯಕ್ಕೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಯಾವುದೇ ನಿರ್ದಿಷ್ಟ ಟೈಮ್‌ಲೈನ್‌ಗಳನ್ನು ಉಲ್ಲೇಖಿಸದೆ ಬೆದರಿಕೆ ಇಮೇಲ್‌ಗಳು ಬಂದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೂಚಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ನನ್ನ ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದ ಏರ್ ಇಂಡಿಯಾ ವಿಮಾನದ ಪ್ರಯಾಣಿಕನ ಬಂಧನ

ಇದೇ ರೀತಿ ಆಗಸ್ಟ್ 17ರಂದು ಗುರುಗ್ರಾಮ್‌ನ ಆಂಬಿಯೆನ್ಸ್ ಮಾಲ್‌ಗೆ ಬೆದರಿಕೆ ಹಾಕಲಾಗಿತ್ತು. ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರು ವ್ಯಾಪಕ ಶೋಧ ನಡೆಸಿದರೂ ಯಾವುದೇ ವಸ್ತು ಅನುಮಾನಾಸ್ಪದವಾಗಿ ಪತ್ತೆಯಾಗಿಲ್ಲ. ಪೊಲೀಸರು ಇದೀಗ ಈ ಇಮೇಲ್‌ಗಳ ಮೂಲವನ್ನು ಪತ್ತೆಹಚ್ಚುತ್ತಿದ್ದು, ಸುಳ್ಳು ಬೆದರಿಕೆ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

“ಆಂಬಿಯನ್ಸ್ ಮಾಲ್ ಆಡಳಿತವು ಮಾಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳುವ ಇಮೇಲ್ ಅನ್ನು ಸ್ವೀಕರಿಸಿದೆ. ನಮಗೆ ಮಾಹಿತಿ ಬಂದಾಗ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ, ಶ್ವಾನ ದಳ, ಮತ್ತು ಸ್ವಾಟ್ ತಂಡ ಸೇರಿದಂತೆ ಎಲ್ಲಾ ತಂಡಗಳು ಸ್ಥಳಕ್ಕೆ ಬಂದವು.” ಎಸಿಪಿ ವಿಕಾಸ್ ಕೌಶಿಕ್ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: 4 ದಿನದ ಅವಳಿ ಶಿಶುಗಳ ಜನನ ಪ್ರಮಾಣಪತ್ರ ಮಾಡಿಸಲು ಹೋದಾಗ ಬಾಂಬ್​ ಸ್ಫೋಟ, ಮಕ್ಕಳು ಸಾವು

“ನಾವು ಮಾಲ್ ಅನ್ನು ಸ್ಯಾನಿಟೈಜ್ ಮಾಡಲು ಪ್ರಾರಂಭಿಸಿದ್ದೇವೆ. ಇಲ್ಲಿಯವರೆಗೆ, ಮಾಲ್‌ನಲ್ಲಿ ನಮಗೆ ಯಾವುದೇ ಅನುಮಾನಾಸ್ಪದ ವಿಷಯ ಕಂಡುಬಂದಿಲ್ಲ. ನಮ್ಮ ಸೈಬರ್ ತಂಡಗಳು ಇಮೇಲ್ ಕಳುಹಿಸುವವರನ್ನು ಟ್ರ್ಯಾಕ್ ಮಾಡುತ್ತಿವೆ. ನಮಗೆ ಬೆಳಿಗ್ಗೆ 10 ಗಂಟೆಗೆ ಮಾಹಿತಿ ಸಿಕ್ಕಿತು” ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ