ಅಫ್ಘಾನಿಸ್ತಾನದಲ್ಲಿ ಭೂಕಂಪನ: ದೆಹಲಿ, ಜಮ್ಮು ಸೇರಿ ಇಡೀ ಉತ್ತರ ಭಾರತದಲ್ಲೂ ನಡುಗಿದ ಭೂಮಿ!

ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರ ಪರಿಣಾಮವಾಗಿ ದೆಹಲಿ, ಎನ್‌ಸಿಆರ್, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳು ಸೇರಿದಂತೆ ಪಾಕಿಸ್ತಾನ ಮತ್ತು ಚೀನಾದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಜನರು ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಭೂಕಂಪನ: ದೆಹಲಿ, ಜಮ್ಮು ಸೇರಿ ಇಡೀ ಉತ್ತರ ಭಾರತದಲ್ಲೂ ನಡುಗಿದ ಭೂಮಿ!
ಪ್ರಾತಿನಿಧಿಕ ಚಿತ್ರ
Image Credit source: Getty images
ಮಹೇಶ್ ಇ, ಭೂಮನಹಳ್ಳಿ Edited By:

Updated on: Jun 27, 2026 | 8:49 PM

ಮುಖ್ಯಾಂಶಗಳು

  • ದೆಹಲಿ, ಎನ್‌ಸಿಆರ್‌ನಲ್ಲಿ ಕಂಪನದ ಅನುಭವ
  • ಅಫ್ಘಾನಿಸ್ತಾನದ ಹಿಂದೂ ಕುಶ್‌ನಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆ
  • ಮನೆಯಿಂದ ಓಡಿ ಹೊರಬಂದ ಜನರು

ನವದೆಹಲಿ, ಜೂನ್​​ 27: ಈಶಾನ್ಯ ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದ (Earthquake) ಭೀಕರತೆಗೆ ಭಾರತದ ರಾಜಧಾನಿ ದೆಹಲಿ ಸೇರಿದಂತೆ ಇಡೀ ಉತ್ತರ ಭಾರತದಾದ್ಯಂತ ಶನಿವಾರ ಸಂಜೆ ತೀವ್ರ ಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 6.2 ರಷ್ಟು ತೀವ್ರತೆ ದಾಖಲಾಗಿದೆ. ದೆಹಲಿ, ಎನ್‌ಸಿಆರ್ ವ್ಯಾಪ್ತಿ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲ ಸೆಕೆಂಡುಗಳ ಕಾಲ ಭೂಮಿ ತೀವ್ರವಾಗಿ ಕಂಪಿಸಿದೆ. ಇದರಿಂದ ಆತಂಕಗೊಂಡ ಜನರು ತಕ್ಷಣ ಮನೆಯಿಂದ ಆಚೆ ಓಡಿಬಂದಿದ್ದಾರೆ.

ಭೂಮಿಯ 215 ಕಿ.ಮೀ ಆಳದಲ್ಲಿ ಭೂಕಂಪನ

ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರದ (NCS) ಮಾಹಿತಿ ಪ್ರಕಾರ, ಭೂಕಂಪನದ ಕೇಂದ್ರಬಿಂದು ಈಶಾನ್ಯ ಅಫ್ಘಾನಿಸ್ತಾನದ ಕಲಾಫ್ಗನ್‌ನಿಂದ ಸುಮಾರು 81 ಕಿ.ಮೀ ದೂರದಲ್ಲಿದ್ದು, ಭೂಮಿಯ ಆಳದಲ್ಲಿ ಅಂದರೆ ಸುಮಾರು 215 ಕಿ.ಮೀ ಆಳದಲ್ಲಿ ಸೃಷ್ಟಿಯಾಗಿದೆ.

ಎಎನ್​ಐ ಟ್ವೀಟ್​

ಭೂಕಂಪನದ ತೀವ್ರತೆ ಹೆಚ್ಚಿದ್ದು ಮತ್ತು ಭೂಮಿಯ ಆಳದಲ್ಲಿ ಸಂಭವಿಸಿದರ ಪರಿಣಾಮ ಭಾರತ ಮಾತ್ರವಲ್ಲದೆ ನೆರೆಯ ಪಾಕಿಸ್ತಾನ, ಚೀನಾ, ತಜಿಕಿಸ್ತಾನ್, ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್ ಮತ್ತು ತುರ್ಕಮೆನಿಸ್ತಾನ ಸೇರಿದಂತೆ ಒಟ್ಟು ಎಂಟು ದೇಶಗಳ ವ್ಯಾಪ್ತಿಯಲ್ಲಿ ಭೂಕಂಪನದ ತೀವ್ರ ಅನುಭವವಾಗಿದೆ.

ಕಟ್ಟಡಗಳ ಕಂಪನಕ್ಕೆ ಹೆದರಿದ ಜನರು 

ಇನ್ನು ಜಮ್ಮು ಕಾಶ್ಮೀರ ಹಾಗೂ ದೆಹಲಿಯ ಹಲವೆಡೆ ಕಟ್ಟಡಗಳ ಕಂಪನ ಕಂಡು ಜನರು ಗಾಬರಿಗೊಂಡರು. ಸದ್ಯದ ಪ್ರಾಥಮಿಕ ವರದಿಗಳ ಪ್ರಕಾರ, ಉತ್ತರ ಭಾರತದ ಯಾವುದೇ ಭಾಗದಲ್ಲಿ ಪ್ರಾಣಾಪಾಯ ಅಥವಾ ಭಾರೀ ಆಸ್ತಿಪಾಸ್ತಿ ನಷ್ಟ ಸಂಭವಿಸಿದ ಕುರಿತು ವರದಿ ಆಗಿಲ್ಲ. ಆದಾಗ್ಯೂ, ದೆಹಲಿ ಮತ್ತು ಜಮ್ಮು ಕಾಶ್ಮೀರದ ವಿಪತ್ತು ನಿರ್ವಹಣಾ ತಂಡಗಳು ಹಾಗೂ ಸ್ಥಳೀಯ ಆಡಳಿತ ಹೈ ಅಲರ್ಟ್ ಆಗಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಗಣಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us