AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅಂಗಾಂಗ ಕಸಿ ದಂಧೆಯಲ್ಲಿ 6 ಮಂದಿ ಬಂಧನ; ಬಾಂಗ್ಲಾದೇಶಿಯೇ ಮಾಸ್ಟರ್ ಮೈಂಡ್

ದೆಹಲಿಯಲ್ಲಿ ನಡೆದಿರುವ ಅಂಗಾಂಗ ಕಸಿ ದಂಧೆಯನ್ನು ಬಯಲಿಗೆಳೆದ ಪೊಲೀಸರು ವೈದ್ಯರು ಸೇರಿದಂತೆ 7 ಮಂದಿಯನ್ನು ಬಂಧಿಸಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ಅವರು 2019ರಿಂದ ಅಂಗಾಂಗ ದಂಧೆ ನಡೆಸುತ್ತಿದ್ದಾರೆ. ತಮಗೆ ಸಿಕ್ಕ ಸುಳಿವಿನ ಮೇರೆಗೆ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ 2 ತಿಂಗಳ ಕಾಲ ಈ ಪ್ರಕರಣದ ಕೆಲಸ ಮಾಡುತ್ತಿದೆ.

ದೆಹಲಿ ಅಂಗಾಂಗ ಕಸಿ ದಂಧೆಯಲ್ಲಿ 6 ಮಂದಿ ಬಂಧನ; ಬಾಂಗ್ಲಾದೇಶಿಯೇ ಮಾಸ್ಟರ್ ಮೈಂಡ್
ದೆಹಲಿ ಅಂಗಾಂಗ ಕಸಿ ದಂಧೆ; ವೈದ್ಯರು ಸೇರಿ 6 ಮಂದಿಯ ಬಂಧನ
ಸುಷ್ಮಾ ಚಕ್ರೆ
|

Updated on: Jul 09, 2024 | 3:16 PM

Share

ನವದೆಹಲಿ: ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಬಹಿರಂಗಪಡಿಸಿದ ಅಂಗಾಂಗ ಕಸಿ ದಂಧೆಗೆ ಸಂಬಂಧಿಸಿದಂತೆ ವೈದ್ಯರು ಸೇರಿದಂತೆ ಸುಮಾರು 7 ಜನರನ್ನು ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಇಂದು (ಮಂಗಳವಾರ) ಬಂಧಿಸಿದೆ. ಈ ದಂಧೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಬಾಂಗ್ಲಾದೇಶದೊಂದಿಗೆ ಸಂಪರ್ಕ ಹೊಂದಿದ್ದರು. ಪ್ರತಿ ಕಸಿ ಮಾಡಲು 25ರಿಂದ 30 ಲಕ್ಷ ರೂ. ಪಡೆಯುತ್ತಿದ್ದರು. ದಾನಿಗಳು ಮತ್ತು ಸ್ವೀಕರಿಸುವವರು ಇಬ್ಬರೂ ಬಾಂಗ್ಲಾದೇಶದವರು. ದೆಹಲಿ ಪೊಲೀಸರ ಪ್ರಕಾರ, ಅವರು 2019ರಿಂದ ಅಂಗಾಂಗ ಕಸಿ ದಂಧೆ ನಡೆಸುತ್ತಿದ್ದಾರೆ.

ತಮಗೆ ಸಿಕ್ಕ ಸುಳಿವಿನ ಮೇರೆಗೆ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ 2 ತಿಂಗಳ ಕಾಲ ಪ್ರಕರಣದ ತನಿಖೆ ನಡೆಸುತ್ತಿದೆ. ದಾನಿಗಳು ಮತ್ತು ಸ್ವೀಕರಿಸುವವರಲ್ಲಿ ಹೆಚ್ಚಿನವರು ಬಾಂಗ್ಲಾದೇಶದಿಂದ ಶಸ್ತ್ರಚಿಕಿತ್ಸೆಗಾಗಿ ನಕಲಿ ದಾಖಲೆಗಳ ಆಧಾರದ ಮೇಲೆ ಭಾರತಕ್ಕೆ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳಾ ವೈದ್ಯೆ ಈಗ ಆಗ್ನೇಯ ದೆಹಲಿಯ ಪ್ರಸಿದ್ಧ ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸಕರಾಗಿ ಕೆಲಸ ಮಾಡುತ್ತಿದ್ದಾರೆ. 2021 ಮತ್ತು 2023ರ ನಡುವೆ ಬಾಂಗ್ಲಾದೇಶದ ಕೆಲವು ಜನರ ಶಸ್ತ್ರಚಿಕಿತ್ಸೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಧರ್ಮದೇಟು; ವಿಡಿಯೋ ವೈರಲ್

ಸಂದರ್ಶಕ ಸಲಹೆಗಾರರಾಗಿದ್ದ ಅವರು ನೋಯ್ಡಾ ಮೂಲದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದರು. ವೈದ್ಯರ ಸಹಾಯಕ ಮತ್ತು ಮೂವರು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ನಾಲ್ವರು ಸಹ ಬಂಧಿತರಾಗಿದ್ದಾರೆ. ಕಳೆದ 2 ವಾರಗಳಲ್ಲಿ ಬಂಧನಗಳು ನಡೆದಿವೆ.

‘ಅಂತಾರಾಷ್ಟ್ರೀಯ ಅಂಗಾಂಗ ಕಸಿ ದಂಧೆಗೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಲಾಗಿದೆ. ಈ ದಂಧೆಯ ಮಾಸ್ಟರ್ ಮೈಂಡ್ ಬಾಂಗ್ಲಾದೇಶಿ, ದಾನಿ ಮತ್ತು ಸ್ವೀಕರಿಸುವವರು ಬಾಂಗ್ಲಾದೇಶದವರು, ರಸೆಲ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದೇವೆ’ ಎಂದು ಡಿಸಿಪಿ ಕ್ರೈಂ ಬ್ರಾಂಚ್ ಅಮಿತ್ ಗೋಯೆಲ್ ಹೇಳಿದ್ದಾರೆ.

ಇದನ್ನೂ ಓದಿ: ಹೆರಿಗೆ ವೇಳೆ ಮಗುವಿನ ಮರ್ಮಾಂಗವನ್ನೇ ಕಟ್ ಮಾಡಿದ ವೈದ್ಯ: ಕುಟುಂಬಸ್ಥರಿಂದ ಪ್ರತಿಭಟನೆ

ದೆಹಲಿ ಪೊಲೀಸ್ ಕಮಿಷನರ್ ಅಮಿತ್ ಗೋಯೆಲ್ ಪ್ರಕಾರ, ಪ್ರಕರಣದ ಹಿಂದಿನ ‘ಮಾಸ್ಟರ್ ಮೈಂಡ್’ ಬಾಂಗ್ಲಾದೇಶಿ ಮತ್ತು ಪ್ರಕರಣದಲ್ಲಿ ದಾನಿಗಳು ಮತ್ತು ಸ್ವೀಕರಿಸುವವರು ಬಾಂಗ್ಲಾದೇಶದವರಾಗಿದ್ದಾರೆ. ದರೋಡೆಕೋರರೆಲ್ಲರೂ ಬಾಂಗ್ಲಾದೇಶದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಶಂಕಿಸಲಾಗಿದೆ.

ಈ ಪ್ರಕರಣದಲ್ಲಿ ಬಂಧಿತ 7 ಮಂದಿಯ ವಿಚಾರಣೆ ಇನ್ನೂ ಮುಂದುವರಿದಿದೆ. ಭಾರತದ ಮಾನವನ ಅಂಗಗಳ ಕಸಿ ಕಾಯಿದೆ (2014) ಪ್ರಕಾರ, ಅಂಗಾಂಗ ದಾನವನ್ನು ಪೋಷಕರು ಮತ್ತು ಒಡಹುಟ್ಟಿದವರಂತಹ ತಕ್ಷಣದ ರಕ್ತ ಸಂಬಂಧಗಳಿಂದ ಮಾತ್ರ ಅನುಮತಿಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​