AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅಂಗಾಂಗ ಕಸಿ ದಂಧೆಯಲ್ಲಿ 6 ಮಂದಿ ಬಂಧನ; ಬಾಂಗ್ಲಾದೇಶಿಯೇ ಮಾಸ್ಟರ್ ಮೈಂಡ್

ದೆಹಲಿಯಲ್ಲಿ ನಡೆದಿರುವ ಅಂಗಾಂಗ ಕಸಿ ದಂಧೆಯನ್ನು ಬಯಲಿಗೆಳೆದ ಪೊಲೀಸರು ವೈದ್ಯರು ಸೇರಿದಂತೆ 7 ಮಂದಿಯನ್ನು ಬಂಧಿಸಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ಅವರು 2019ರಿಂದ ಅಂಗಾಂಗ ದಂಧೆ ನಡೆಸುತ್ತಿದ್ದಾರೆ. ತಮಗೆ ಸಿಕ್ಕ ಸುಳಿವಿನ ಮೇರೆಗೆ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ 2 ತಿಂಗಳ ಕಾಲ ಈ ಪ್ರಕರಣದ ಕೆಲಸ ಮಾಡುತ್ತಿದೆ.

ದೆಹಲಿ ಅಂಗಾಂಗ ಕಸಿ ದಂಧೆಯಲ್ಲಿ 6 ಮಂದಿ ಬಂಧನ; ಬಾಂಗ್ಲಾದೇಶಿಯೇ ಮಾಸ್ಟರ್ ಮೈಂಡ್
ದೆಹಲಿ ಅಂಗಾಂಗ ಕಸಿ ದಂಧೆ; ವೈದ್ಯರು ಸೇರಿ 6 ಮಂದಿಯ ಬಂಧನ
ಸುಷ್ಮಾ ಚಕ್ರೆ
|

Updated on: Jul 09, 2024 | 3:16 PM

Share

ನವದೆಹಲಿ: ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಬಹಿರಂಗಪಡಿಸಿದ ಅಂಗಾಂಗ ಕಸಿ ದಂಧೆಗೆ ಸಂಬಂಧಿಸಿದಂತೆ ವೈದ್ಯರು ಸೇರಿದಂತೆ ಸುಮಾರು 7 ಜನರನ್ನು ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಇಂದು (ಮಂಗಳವಾರ) ಬಂಧಿಸಿದೆ. ಈ ದಂಧೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಬಾಂಗ್ಲಾದೇಶದೊಂದಿಗೆ ಸಂಪರ್ಕ ಹೊಂದಿದ್ದರು. ಪ್ರತಿ ಕಸಿ ಮಾಡಲು 25ರಿಂದ 30 ಲಕ್ಷ ರೂ. ಪಡೆಯುತ್ತಿದ್ದರು. ದಾನಿಗಳು ಮತ್ತು ಸ್ವೀಕರಿಸುವವರು ಇಬ್ಬರೂ ಬಾಂಗ್ಲಾದೇಶದವರು. ದೆಹಲಿ ಪೊಲೀಸರ ಪ್ರಕಾರ, ಅವರು 2019ರಿಂದ ಅಂಗಾಂಗ ಕಸಿ ದಂಧೆ ನಡೆಸುತ್ತಿದ್ದಾರೆ.

ತಮಗೆ ಸಿಕ್ಕ ಸುಳಿವಿನ ಮೇರೆಗೆ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ 2 ತಿಂಗಳ ಕಾಲ ಪ್ರಕರಣದ ತನಿಖೆ ನಡೆಸುತ್ತಿದೆ. ದಾನಿಗಳು ಮತ್ತು ಸ್ವೀಕರಿಸುವವರಲ್ಲಿ ಹೆಚ್ಚಿನವರು ಬಾಂಗ್ಲಾದೇಶದಿಂದ ಶಸ್ತ್ರಚಿಕಿತ್ಸೆಗಾಗಿ ನಕಲಿ ದಾಖಲೆಗಳ ಆಧಾರದ ಮೇಲೆ ಭಾರತಕ್ಕೆ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳಾ ವೈದ್ಯೆ ಈಗ ಆಗ್ನೇಯ ದೆಹಲಿಯ ಪ್ರಸಿದ್ಧ ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸಕರಾಗಿ ಕೆಲಸ ಮಾಡುತ್ತಿದ್ದಾರೆ. 2021 ಮತ್ತು 2023ರ ನಡುವೆ ಬಾಂಗ್ಲಾದೇಶದ ಕೆಲವು ಜನರ ಶಸ್ತ್ರಚಿಕಿತ್ಸೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಧರ್ಮದೇಟು; ವಿಡಿಯೋ ವೈರಲ್

ಸಂದರ್ಶಕ ಸಲಹೆಗಾರರಾಗಿದ್ದ ಅವರು ನೋಯ್ಡಾ ಮೂಲದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದರು. ವೈದ್ಯರ ಸಹಾಯಕ ಮತ್ತು ಮೂವರು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ನಾಲ್ವರು ಸಹ ಬಂಧಿತರಾಗಿದ್ದಾರೆ. ಕಳೆದ 2 ವಾರಗಳಲ್ಲಿ ಬಂಧನಗಳು ನಡೆದಿವೆ.

‘ಅಂತಾರಾಷ್ಟ್ರೀಯ ಅಂಗಾಂಗ ಕಸಿ ದಂಧೆಗೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಲಾಗಿದೆ. ಈ ದಂಧೆಯ ಮಾಸ್ಟರ್ ಮೈಂಡ್ ಬಾಂಗ್ಲಾದೇಶಿ, ದಾನಿ ಮತ್ತು ಸ್ವೀಕರಿಸುವವರು ಬಾಂಗ್ಲಾದೇಶದವರು, ರಸೆಲ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದೇವೆ’ ಎಂದು ಡಿಸಿಪಿ ಕ್ರೈಂ ಬ್ರಾಂಚ್ ಅಮಿತ್ ಗೋಯೆಲ್ ಹೇಳಿದ್ದಾರೆ.

ಇದನ್ನೂ ಓದಿ: ಹೆರಿಗೆ ವೇಳೆ ಮಗುವಿನ ಮರ್ಮಾಂಗವನ್ನೇ ಕಟ್ ಮಾಡಿದ ವೈದ್ಯ: ಕುಟುಂಬಸ್ಥರಿಂದ ಪ್ರತಿಭಟನೆ

ದೆಹಲಿ ಪೊಲೀಸ್ ಕಮಿಷನರ್ ಅಮಿತ್ ಗೋಯೆಲ್ ಪ್ರಕಾರ, ಪ್ರಕರಣದ ಹಿಂದಿನ ‘ಮಾಸ್ಟರ್ ಮೈಂಡ್’ ಬಾಂಗ್ಲಾದೇಶಿ ಮತ್ತು ಪ್ರಕರಣದಲ್ಲಿ ದಾನಿಗಳು ಮತ್ತು ಸ್ವೀಕರಿಸುವವರು ಬಾಂಗ್ಲಾದೇಶದವರಾಗಿದ್ದಾರೆ. ದರೋಡೆಕೋರರೆಲ್ಲರೂ ಬಾಂಗ್ಲಾದೇಶದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಶಂಕಿಸಲಾಗಿದೆ.

ಈ ಪ್ರಕರಣದಲ್ಲಿ ಬಂಧಿತ 7 ಮಂದಿಯ ವಿಚಾರಣೆ ಇನ್ನೂ ಮುಂದುವರಿದಿದೆ. ಭಾರತದ ಮಾನವನ ಅಂಗಗಳ ಕಸಿ ಕಾಯಿದೆ (2014) ಪ್ರಕಾರ, ಅಂಗಾಂಗ ದಾನವನ್ನು ಪೋಷಕರು ಮತ್ತು ಒಡಹುಟ್ಟಿದವರಂತಹ ತಕ್ಷಣದ ರಕ್ತ ಸಂಬಂಧಗಳಿಂದ ಮಾತ್ರ ಅನುಮತಿಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್