ಏರ್ ಇಂಡಿಯಾದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ಶಂಕರ್ ಮಿಶ್ರಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್

ಮಹಿಳೆ ಏರ್ ಇಂಡಿಯಾಗೆ ನೀಡಿದ ದೂರಿನ ಮೇರೆಗೆ ಜನವರಿ 4 ರಂದು ದೆಹಲಿ ಪೊಲೀಸರು ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿ ಶನಿವಾರ ಬೆಂಗಳೂರಿನಿಂದ ಬಂಧಿಸಿದ್ದರು. ಮತ್ತೊಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ...

ಏರ್ ಇಂಡಿಯಾದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ಶಂಕರ್ ಮಿಶ್ರಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್
ಶಂಕರ್ ಮಿಶ್ರಾ
Updated By: ರಶ್ಮಿ ಕಲ್ಲಕಟ್ಟ

Updated on: Jan 11, 2023 | 5:36 PM

ಕಳೆದ ವರ್ಷ ನವೆಂಬರ್‌ನಲ್ಲಿ ಏರ್ ಇಂಡಿಯಾ  (Air India) ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ದೆಹಲಿ ಪಟಿಯಾಲ ಹೌಸ್ ಕೋರ್ಟ್  (Delhi Patiala House Court) ಬುಧವಾರ ಕಾಯ್ದಿರಿಸಿದೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್ ಗಾರ್ಗ್ ಅವರು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದಾರೆ, ಇದು ಲೈಂಗಿಕ ಬಯಕೆಯಿಂದ ನಡೆಸಲ್ಪಟ್ಟಿಲ್ಲ. ಇದು ದೂರುದಾರರ ನಮ್ರತೆಯನ್ನು ಆಕ್ರೋಶಗೊಳಿಸುವ ಗುರಿಯನ್ನು ಹೊಂದಿಲ್ಲ ಎಂದು ಗಾರ್ಗ್ ಹೇಳಿದ್ದಾರೆ. ಕಳೆದ ವರ್ಷ ನವೆಂಬರ್ 26 ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ ಶಂಕರ್ ಮಿಶ್ರಾ ಅವರು ಮದ್ಯದ ಅಮಲಿನಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು.

ಮಹಿಳೆ ಏರ್ ಇಂಡಿಯಾಗೆ ನೀಡಿದ ದೂರಿನ ಮೇರೆಗೆ ಜನವರಿ 4 ರಂದು ದೆಹಲಿ ಪೊಲೀಸರು ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿ ಶನಿವಾರ ಬೆಂಗಳೂರಿನಿಂದ ಬಂಧಿಸಿದ್ದರು. ಮತ್ತೊಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು, ಆದರೆ ಆತನ ಕಸ್ಟಡಿಗಾಗಿ ಪೊಲೀಸರು ಮಾಡಿದ ಮನವಿಯನ್ನು ತಿರಸ್ಕರಿಸಿತು.

ಇದನ್ನೂ ಓದಿ: ದೆಹಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕರ ಮುಂದೆ ಮೂತ್ರ ವಿಸರ್ಜನೆ ಮಾಡಿದ ಕುಡುಕ

ವಿಚಾರಣೆ ವೇಳೆ ಮಿಶ್ರಾ ಪೊಲೀಸರಿಗೆ ನಿದ್ದೆ ಬಂದಿದ್ದರಿಂದ ಘಟನೆಯ ಬಗ್ಗೆ ಏನೂ ನೆನಪಿಲ್ಲ ಎಂದು ಹೇಳಿದ್ದಾರೆ. ವಿಮಾನದಲ್ಲಿದ್ದ ಇತರ ಪ್ರಯಾಣಿಕರು ಆತನ ಕೃತ್ಯದ ಬಗ್ಗೆ ತಿಳಿಸಿದಾಗ ಮಾತ್ರ, ಅವರು ಸಂತ್ರಸ್ತರಲ್ಲಿ ಕ್ಷಮೆಯಾಚಿಸಿದರು ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ