AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ತಾತನ ಮಡಿಲಿನಲ್ಲಿದ್ದ ಮಗುವಿಗೆ ಕಚ್ಚಿ ಗಾಯಗೊಳಿಸಿದ ಪಿಟ್ ಬುಲ್ ನಾಯಿ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಜನವರಿ 2 ರಂದು ದೆಹಲಿಯ ಬುರಾರಿಯಿಂದ ಈ ಘಟನೆ ವರದಿಯಾಗಿದೆ. ಬಾಲಕಿ 17 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದಳು, ಅಲ್ಲಿ ವೈದ್ಯರು 18 ಹೊಲಿಗೆಗಳನ್ನು ಹಾಕಿದರು. ಆಕೆ ಇವತ್ತು(ಶುಕ್ರವಾರ) ಮನೆಗೆ ಬಂದಿದ್ದಾಳೆ. ನಾಯಿಯ ಮಾಲೀಕರು ಮತ್ತು ಆರೇಳು ವ್ಯಕ್ತಿಗಳು ಪಿಟ್ ಬುಲ್ ಅನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿ ತೋರಿಸುತ್ತದೆ

ದೆಹಲಿ: ತಾತನ ಮಡಿಲಿನಲ್ಲಿದ್ದ ಮಗುವಿಗೆ ಕಚ್ಚಿ ಗಾಯಗೊಳಿಸಿದ ಪಿಟ್ ಬುಲ್ ನಾಯಿ; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದಾಳಿಯ ದೃಶ್ಯ
ರಶ್ಮಿ ಕಲ್ಲಕಟ್ಟ
|

Updated on:Jan 19, 2024 | 9:00 PM

Share

ದೆಹಲಿ ಜನವರಿ 19: ದೆಹಲಿಯ (Delhi) ಬುರಾರಿಯಲ್ಲಿ  ತಾತನ ಮಡಿಲಲ್ಲಿದ್ದ ಹೆಣ್ಣು ಮಗುವಿಗೆ ಪಿಟ್ ಬುಲ್ (Pit Bull) ನಾಯಿ ಹಾರಿ ಕಚ್ಚಿದ್ದು ಆಕೆಯ ಕಾಲಿಗೆ ಗಾಯಗಳಾಗಿವೆ. ಪಿಟ್ ಬುಲ್ ಮಗುವಿನ ಮೇಲೆ ದಾಳಿ ನಡೆಸುತ್ತಿರುವುದು ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ. ಈ ದೃಶ್ಯಗಳನ್ನು ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಒಂದೂವರೆ ವರ್ಷದ ಮಗುವಿನ ಕಾಲಿನ ಹಲವು ಭಾಗಗಳಲ್ಲಿ ಹೊಲಿಗೆ ಹಾಕಲಾಗಿದ್ದು, ಮೂರು ಫ್ರಾಕ್ಚರ್ ಆಗಿದೆ ಎಂದು ಆಕೆಯ ಪೋಷಕರು ತಿಳಿಸಿದ್ದಾರೆ.

ಜನವರಿ 2 ರಂದು ದೆಹಲಿಯ ಬುರಾರಿಯಿಂದ ಈ ಘಟನೆ ವರದಿಯಾಗಿದೆ. ಬಾಲಕಿ 17 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದಳು, ಅಲ್ಲಿ ವೈದ್ಯರು 18 ಹೊಲಿಗೆಗಳನ್ನು ಹಾಕಿದರು. ಆಕೆ ಇವತ್ತು(ಶುಕ್ರವಾರ) ಮನೆಗೆ ಬಂದಿದ್ದಾಳೆ. ನಾಯಿಯ ಮಾಲೀಕರು ಮತ್ತು ಆರೇಳು ವ್ಯಕ್ತಿಗಳು ಪಿಟ್ ಬುಲ್ ಅನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿ ತೋರಿಸುತ್ತದೆ. ಮಗುವನ್ನು ಎಳೆಯಲು ಸುಮಾರು ಒಂದು ನಿಮಿಷ ಬೇಕಾಯಿತು.

ವಿಡಿಯೊದಲ್ಲಿ, ಹೆಣ್ಣು ಮಗು ತನ್ನ ತಾಯಿಯ ಮಡಿಲಲ್ಲಿ ಅಳುತ್ತಿರುವುದನ್ನು ಕಾಣಬಹುದು, ಆಕೆಯ ಕಾಲಿಗೆ ಸಂಪೂರ್ಣವಾಗಿ ಪ್ಲಾಸ್ಟರ್ ಮತ್ತು ಬ್ಯಾಂಡೇಜ್ ಸುತ್ತಲಾಗಿತ್ತು.

ಅಕ್ಕಪಕ್ಕದಲ್ಲಿ ಅನಾಹುತ ತಡೆಯಲು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: 6 ನಾಯಿಮರಿಗಳ ಸಾವಿಗೆ ಕಾರಣ ಆರೋಪ: ದಂಡ ಹೆಚ್ಚಳಕ್ಕೆ ಹೈಕೋರ್ಟ್ ನಕಾರ

ಭಾರತದಲ್ಲಿ ಪಿಟ್ ಬುಲ್ ನಾಯಿಗಳನ್ನು ನಿಷೇಧಿಸಲಾಗಿದೆ, ಆದರೂ ಅನೇಕ ಜನರು ಈ ತಳಿಯನ್ನು ಸಾಕುಪ್ರಾಣಿಯಾಗಿ ಇಟ್ಟುಕೊಳ್ಳುತ್ತಾರೆ. ಬುರಾರಿ ಪೊಲೀಸ್ ಠಾಣೆಯ ಕೆಲವು ಪೊಲೀಸರು ನಾಯಿಯ ಮಾಲೀಕರೊಂದಿಗೆ ವಿಷಯವನ್ನು ಬಗೆಹರಿಸುವಂತೆ ಒತ್ತಾಯಿಸಿದರು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ, ನಾಯಿಯ ಮಾಲೀಕರು ಇನ್ನೂ ಸ್ವಚ್ಛಂದವಾಗಿ ತಿರುಗಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Fri, 19 January 24

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ