AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ತಾತನ ಮಡಿಲಿನಲ್ಲಿದ್ದ ಮಗುವಿಗೆ ಕಚ್ಚಿ ಗಾಯಗೊಳಿಸಿದ ಪಿಟ್ ಬುಲ್ ನಾಯಿ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಜನವರಿ 2 ರಂದು ದೆಹಲಿಯ ಬುರಾರಿಯಿಂದ ಈ ಘಟನೆ ವರದಿಯಾಗಿದೆ. ಬಾಲಕಿ 17 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದಳು, ಅಲ್ಲಿ ವೈದ್ಯರು 18 ಹೊಲಿಗೆಗಳನ್ನು ಹಾಕಿದರು. ಆಕೆ ಇವತ್ತು(ಶುಕ್ರವಾರ) ಮನೆಗೆ ಬಂದಿದ್ದಾಳೆ. ನಾಯಿಯ ಮಾಲೀಕರು ಮತ್ತು ಆರೇಳು ವ್ಯಕ್ತಿಗಳು ಪಿಟ್ ಬುಲ್ ಅನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿ ತೋರಿಸುತ್ತದೆ

ದೆಹಲಿ: ತಾತನ ಮಡಿಲಿನಲ್ಲಿದ್ದ ಮಗುವಿಗೆ ಕಚ್ಚಿ ಗಾಯಗೊಳಿಸಿದ ಪಿಟ್ ಬುಲ್ ನಾಯಿ; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದಾಳಿಯ ದೃಶ್ಯ
ರಶ್ಮಿ ಕಲ್ಲಕಟ್ಟ
|

Updated on:Jan 19, 2024 | 9:00 PM

Share

ದೆಹಲಿ ಜನವರಿ 19: ದೆಹಲಿಯ (Delhi) ಬುರಾರಿಯಲ್ಲಿ  ತಾತನ ಮಡಿಲಲ್ಲಿದ್ದ ಹೆಣ್ಣು ಮಗುವಿಗೆ ಪಿಟ್ ಬುಲ್ (Pit Bull) ನಾಯಿ ಹಾರಿ ಕಚ್ಚಿದ್ದು ಆಕೆಯ ಕಾಲಿಗೆ ಗಾಯಗಳಾಗಿವೆ. ಪಿಟ್ ಬುಲ್ ಮಗುವಿನ ಮೇಲೆ ದಾಳಿ ನಡೆಸುತ್ತಿರುವುದು ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ. ಈ ದೃಶ್ಯಗಳನ್ನು ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಒಂದೂವರೆ ವರ್ಷದ ಮಗುವಿನ ಕಾಲಿನ ಹಲವು ಭಾಗಗಳಲ್ಲಿ ಹೊಲಿಗೆ ಹಾಕಲಾಗಿದ್ದು, ಮೂರು ಫ್ರಾಕ್ಚರ್ ಆಗಿದೆ ಎಂದು ಆಕೆಯ ಪೋಷಕರು ತಿಳಿಸಿದ್ದಾರೆ.

ಜನವರಿ 2 ರಂದು ದೆಹಲಿಯ ಬುರಾರಿಯಿಂದ ಈ ಘಟನೆ ವರದಿಯಾಗಿದೆ. ಬಾಲಕಿ 17 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದಳು, ಅಲ್ಲಿ ವೈದ್ಯರು 18 ಹೊಲಿಗೆಗಳನ್ನು ಹಾಕಿದರು. ಆಕೆ ಇವತ್ತು(ಶುಕ್ರವಾರ) ಮನೆಗೆ ಬಂದಿದ್ದಾಳೆ. ನಾಯಿಯ ಮಾಲೀಕರು ಮತ್ತು ಆರೇಳು ವ್ಯಕ್ತಿಗಳು ಪಿಟ್ ಬುಲ್ ಅನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿ ತೋರಿಸುತ್ತದೆ. ಮಗುವನ್ನು ಎಳೆಯಲು ಸುಮಾರು ಒಂದು ನಿಮಿಷ ಬೇಕಾಯಿತು.

ವಿಡಿಯೊದಲ್ಲಿ, ಹೆಣ್ಣು ಮಗು ತನ್ನ ತಾಯಿಯ ಮಡಿಲಲ್ಲಿ ಅಳುತ್ತಿರುವುದನ್ನು ಕಾಣಬಹುದು, ಆಕೆಯ ಕಾಲಿಗೆ ಸಂಪೂರ್ಣವಾಗಿ ಪ್ಲಾಸ್ಟರ್ ಮತ್ತು ಬ್ಯಾಂಡೇಜ್ ಸುತ್ತಲಾಗಿತ್ತು.

ಅಕ್ಕಪಕ್ಕದಲ್ಲಿ ಅನಾಹುತ ತಡೆಯಲು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: 6 ನಾಯಿಮರಿಗಳ ಸಾವಿಗೆ ಕಾರಣ ಆರೋಪ: ದಂಡ ಹೆಚ್ಚಳಕ್ಕೆ ಹೈಕೋರ್ಟ್ ನಕಾರ

ಭಾರತದಲ್ಲಿ ಪಿಟ್ ಬುಲ್ ನಾಯಿಗಳನ್ನು ನಿಷೇಧಿಸಲಾಗಿದೆ, ಆದರೂ ಅನೇಕ ಜನರು ಈ ತಳಿಯನ್ನು ಸಾಕುಪ್ರಾಣಿಯಾಗಿ ಇಟ್ಟುಕೊಳ್ಳುತ್ತಾರೆ. ಬುರಾರಿ ಪೊಲೀಸ್ ಠಾಣೆಯ ಕೆಲವು ಪೊಲೀಸರು ನಾಯಿಯ ಮಾಲೀಕರೊಂದಿಗೆ ವಿಷಯವನ್ನು ಬಗೆಹರಿಸುವಂತೆ ಒತ್ತಾಯಿಸಿದರು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ, ನಾಯಿಯ ಮಾಲೀಕರು ಇನ್ನೂ ಸ್ವಚ್ಛಂದವಾಗಿ ತಿರುಗಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Fri, 19 January 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು