AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಬೆಂಕಿ ದುರಂತ; ಹೋಟೆಲ್ ಮಾಲೀಕ ಬಂಧನ, ನ್ಯಾಯಾಂಗ ತನಿಖೆಗೆ ಆದೇಶ

ದಕ್ಷಿಣ ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿ ನಡೆದ ಭೀಕರ ಅಗ್ನಿ ಅವಘಡದ ತನಿಖೆಯನ್ನು ಚುರುಕುಗೊಳಿಸಿರುವ ದೆಹಲಿ ಪೊಲೀಸರು, ತಲೆಮರೆಸಿಕೊಂಡಿದ್ದ ಹೋಟೆಲ್ ಮಾಲೀಕ ಲವಕೇಶ್ ಬಜಾಜ್ ಎಂಬುವವರನ್ನು ಬಂಧಿಸಿದ್ದಾರೆ. ಈ ದುರಂತದಲ್ಲಿ 18 ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 21 ಜನರು ಜೀವಂತವಾಗಿ ದಹನವಾಗಿದ್ದರು. ಈ ಪ್ರಕರಣದ ನ್ಯಾಯಾಂಗ ತನಿಖೆಗೂ ಲೆಫ್ಟಿನೆಂಟ್ ಗವರ್ನರ್ ಆದೇಶಿಸಿದ್ದಾರೆ.

ದೆಹಲಿ ಬೆಂಕಿ ದುರಂತ; ಹೋಟೆಲ್ ಮಾಲೀಕ ಬಂಧನ, ನ್ಯಾಯಾಂಗ ತನಿಖೆಗೆ ಆದೇಶ
Delhi Hotel Owner ArrestedImage Credit source: ANI
ಸುಷ್ಮಾ ಚಕ್ರೆ
|

Updated on: Jun 03, 2026 | 11:09 PM

Share

ನವದೆಹಲಿ, ಜೂನ್ 3: ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ (Fire Accident) 21 ಜನರು ಸಾವನ್ನಪ್ಪಿದ ನಂತರ ಲೆಫ್ಟಿನೆಂಟ್ ಗವರ್ನರ್ ಇಂದು ತುರ್ತು ಸಭೆ ಕರೆದಿದ್ದರು. ಈ ವೇಳೆ ಅವರು ದೆಹಲಿಯಲ್ಲಿ ಒಂದು ತಿಂಗಳ ವಿಶೇಷ ಅಗ್ನಿ ಸುರಕ್ಷತಾ ಅಭಿಯಾನವನ್ನು ನಡೆಸಲು ಆದೇಶಿಸಿದ್ದಾರೆ. ಇದರಲ್ಲಿ ಎಲ್ಲಾ ಹೋಟೆಲ್‌ಗಳು, ಅತಿಥಿ ಗೃಹಗಳು ಮತ್ತು ಸೂಕ್ಷ್ಮ ಕಟ್ಟಡಗಳ ತಪಾಸಣೆ ಸೇರಿದೆ. ಈ ಬೆಂಕಿ ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೂ ಆದೇಶಿಸಲಾಗಿದೆ. ಪರಾರಿಯಾಗಿದ್ದ ಹೋಟೆಲ್ ಮಾಲೀಕರನ್ನು ಕೂಡ ಬಂಧಿಸಲಾಗಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರು ದೆಹಲಿ ಸರ್ಕಾರ ಮತ್ತು ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ, ಅಗ್ನಿಶಾಮಕ ನಿಯಮಗಳನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಸೀಲಿಂಗ್‌ನಂತಹ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದರು. ದೆಹಲಿಯ ಬೆಂಕಿ ದುರಂತದ ನಂತರ, ದೆಹಲಿ ಗೃಹ ಸಚಿವ ಆಶಿಶ್ ಸೂದ್ ಅವರೊಂದಿಗೆ ಲೆಫ್ಟಿನೆಂಟ್ ಗವರ್ನರ್ ತರಣ್‌ಜಿತ್ ಸಿಂಗ್ ಸಂಧು ಈ ತುರ್ತು ಪರಿಶೀಲನಾ ಸಭೆಯನ್ನು ನಡೆಸಿದರು. ಇದರಲ್ಲಿ ಅಗ್ನಿಶಾಮಕ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.

ಇದನ್ನೂ ಓದಿ: ದೆಹಲಿಯ ಬೆಂಕಿ ದುರಂತದಲ್ಲಿ ಬಾಂಗ್ಲಾ, ಅಫ್ಘಾನ್, ಆಫ್ರಿಕಾದ ಪ್ರವಾಸಿಗರೂ ಸಾವು; ಹೋಟೆಲ್ ಮಾಲೀಕ ಪರಾರಿ

ಹೋಟೆಲ್ ಮಾಲೀಕ ಬಂಧನ:

ದುರಂತ ಸಂಭವಿಸಿ ಎಫ್‌ಐಆರ್ (FIR) ದಾಖಲಾಗುತ್ತಿದ್ದಂತೆ ಹೋಟೆಲ್ ಮಾಲೀಕ ಲವಕೇಶ್ ಬಜಾಜ್ ತಲೆಮರೆಸಿಕೊಂಡಿದ್ದರು. ಅವರು ದೇಶ ಬಿಟ್ಟು ಓಡಿಹೋಗದಂತೆ ಪೊಲೀಸರು ಲುಕೌಟ್ ನೋಟಿಸ್ ಜಾರಿ ಮಾಡಿದ್ದರು. ತೀವ್ರ ಶೋಧದ ಬಳಿಕ ಕೊನೆಗೂ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

5 ಅಂತಸ್ತಿನ ಈ ಬೆಡ್ ಆ್ಯಂಡ್ ಬ್ರೇಕ್‌ಫಾಸ್ಟ್ (B&B) ಕಟ್ಟಡದಲ್ಲಿ ಯಾವುದೇ ಅಗ್ನಿಶಾಮಕ ಮುನ್ನೆಚ್ಚರಿಕಾ ಕ್ರಮಗಳು ಅಥವಾ ಕಡ್ಡಾಯ ಸುರಕ್ಷತಾ ಪರವಾನಗಿಗಳು ಇರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ನಿರ್ಲಕ್ಷ್ಯದ ಮೂಲಕ ಸಾವು ಉಂಟುಮಾಡಿದ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಮೃತಪಟ್ಟ 21 ಜನರಲ್ಲಿ 18 ಮಂದಿ ನೈಜೀರಿಯಾ, ಮೊಜಾಂಬಿಕ್, ಬಾಂಗ್ಲಾದೇಶ, ಸೊಮಾಲಿಯಾ, ಲೈಬೀರಿಯಾ ಮತ್ತು ಅಫ್ಘಾನಿಸ್ತಾನದ ಪ್ರಜೆಗಳಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ವೇಳೆ 10 ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?