AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಪೆರೋಲ್ ಅವಧಿಯಲ್ಲಿ ಓಡಿ ಹೋಗಿ ತಲೆ ಮರೆಸಿಕೊಂಡಿದ್ದ ಮೋಸ್ಟ್​ ವಾಂಟೆಡ್ ಕ್ರಿಮಿನಲ್ 5 ವರ್ಷಗಳ ಬಳಿಕ ಸೆರೆ

ಪೆರೋಲ್ ಅವಧಿಯಲ್ಲಿ ಓಡಿ ಹೋಗಿ ತಲೆ ಮರೆಸಿಕೊಂಡಿದ್ದ ಮೋಸ್ಟ್​ ವಾಂಟೆಡ್ ಕ್ರಿಮಿನಲ್ ವಿಜಯ್ ಪಹಲ್ವಾನ್​ನಲ್ಲಿ ದೆಹಲಿ ಪೊಲೀಸರು ಐದು ವರ್ಷಗಳ ಬಳಿಕ ಬಂಧಿಸಿದ್ದಾರೆ. ಮಧ್ಯಪ್ರದೇಶದ ಜಬಲ್​ಪುರದಲ್ಲಿ ಆತನನ್ನು ಬಂಧಿಸಲಾಗಿದೆ, ದೆಹಲಿ, ಹರಿಯಾಣ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಕೊಲೆ, ಕೊಲೆ ಯತ್ನ ಮತ್ತು ಲೈಂಗಿಕ ಕಿರುಕುಳ ಸೇರಿದಂತೆ 24 ಪ್ರಕರಣಗಳಲ್ಲಿ ಆತ ಬೇಕಾಗಿದ್ದ, ಆತನ ಬಗ್ಗೆ ಸುಳಿವು ಕೊಟ್ಟವರಿಗೆ 2 ಲಕ್ಷ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದರು.

ದೆಹಲಿ: ಪೆರೋಲ್ ಅವಧಿಯಲ್ಲಿ ಓಡಿ ಹೋಗಿ ತಲೆ ಮರೆಸಿಕೊಂಡಿದ್ದ ಮೋಸ್ಟ್​ ವಾಂಟೆಡ್ ಕ್ರಿಮಿನಲ್ 5 ವರ್ಷಗಳ ಬಳಿಕ ಸೆರೆ
ಬಂಧನImage Credit source: ipleaders
ನಯನಾ ರಾಜೀವ್
|

Updated on: Nov 20, 2023 | 8:34 AM

Share

ಪೆರೋಲ್ ಅವಧಿಯಲ್ಲಿ ಓಡಿ ಹೋಗಿ ತಲೆ ಮರೆಸಿಕೊಂಡಿದ್ದ ಮೋಸ್ಟ್​ ವಾಂಟೆಡ್ ಕ್ರಿಮಿನಲ್ ವಿಜಯ್ ಪಹಲ್ವಾನ್​ನಲ್ಲಿ ದೆಹಲಿ ಪೊಲೀಸರು ಐದು ವರ್ಷಗಳ ಬಳಿಕ ಬಂಧಿಸಿದ್ದಾರೆ. ಮಧ್ಯಪ್ರದೇಶದ ಜಬಲ್​ಪುರದಲ್ಲಿ ಆತನನ್ನು ಬಂಧಿಸಲಾಗಿದೆ, ದೆಹಲಿ, ಹರಿಯಾಣ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಕೊಲೆ, ಕೊಲೆ ಯತ್ನ ಮತ್ತು ಲೈಂಗಿಕ ಕಿರುಕುಳ ಸೇರಿದಂತೆ 24 ಪ್ರಕರಣಗಳಲ್ಲಿ ಆತ ಬೇಕಾಗಿದ್ದ, ಆತನ ಬಗ್ಗೆ ಸುಳಿವು ಕೊಟ್ಟವರಿಗೆ 2 ಲಕ್ಷ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದರು.

ಪೊಲೀಸ್ ಮತ್ತು ನ್ಯಾಯಾಂಗ ದಾಖಲೆಗಳಿಂದ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಹಲವಾರು ಪೊಲೀಸ್ ಫೈಲ್‌ಗಳು, ಎಸ್‌ಸಿಆರ್‌ಬಿ ದಾಖಲೆಗಳು ಮತ್ತು ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯಗಳಲ್ಲಿ ನಿರ್ವಹಿಸಲಾದ ಆರೋಪಿಗಳ ಸಂಪೂರ್ಣ ಕ್ರಿಮಿನಲ್ ದಾಖಲೆಗಳನ್ನು ವಿಶ್ಲೇಷಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಘೋಷಿತ ಅಪರಾಧಿ ಎಂಬುದು ಕಂಡುಬಂದಿದೆ.

ಮತ್ತಷ್ಟು ಓದಿ:ಬೆಂಗಳೂರಿನಲ್ಲಿ ಅಂತಾರಾಷ್ಟ ಮಟ್ಟದ ಮೋಸ್ಟ್ ವಾಂಟೆಡ್​ ಕ್ರಿಮಿನಲ್​ಗಳ ಬಂಧನ, ಭಾರತಕ್ಕೆ ನುಸುಳಿದ್ದೇ ರೋಚಕ

ಪಹಲ್ವಾನ್‌ನ ಸ್ಥಳವನ್ನು ಪತ್ತೆಹಚ್ಚಿದ ನಂತರ, ವಿಶೇಷ ತಂಡವನ್ನು ರಚಿಸಲಾಯಿತು ಮತ್ತು ಜಬಲ್‌ಪುರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 2011ರಲ್ಲಿ ಪಹಲ್ವಾನ್, ರಘುವೀರ್​ ಸಿಂಗ್ ಎಂಬುವವರನ್ನು ದೆಹಲಿಯ ಕಿಶನ್​ಗಢ ಪ್ರದೇಶದಿಂದ ಅಪಹರಿಸಿ ನಂತರ ಕೊಲೆ ಮಾಡಿದ್ದರು.

ದೆಹಲಿಯ ಅಂಧೇರಿ ಮೋರ್ ಪ್ರದೇಶಕ್ಕೆ ಕರೆದೊಯ್ದು ಗುಂಡು ಹಾರಿಸಿ ಹತ್ಯೆ ಮಾಡಿದ್ದ, ಬಳಿಕ ಗುರುಗ್ರಾಮದ ಅರಣ್ಯ ಪ್ರದೇಶದಲ್ಲಿ ಎಸೆದಿದ್ದ. ಬಳಿಕ ಪಹಲ್ವಾನ್​ನನ್ನು ಬಂಧಿಸಲಾಗಿತ್ತು, 2018ರಲ್ಲಿ ಪೆರೋಲ್ ಪಡೆದಿದ್ದ, ಬಳಿಕ ಓಡಿ ಹೋಗಿದ್ದ. ವಿಕ್ರಮ್ ಸಿಂಗ್ ಹೆಸರನ್ನು ಬಳಸಿಕೊಂಡು ಆರೋಪಿಗಳು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕೆಲಸ ಶುರು ಮಾಡಿದ್ದ. ಪಹಲ್ವಾನ್ ತನ್ನ ಸುರಕ್ಷತೆಗಾಗಿ ನಾಲ್ಕು ಶಸ್ತ್ರಸಜ್ಜಿತ ಅಂಗರಕ್ಷಕರನ್ನು ನೇಮಿಸಿಕೊಂಡಿದ್ದ. ಆತನಿಗೆ ಇಬ್ಬರು ಮಕ್ಕಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ