AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಪರೇಡ್: ದೆಹಲಿ ಪೊಲೀಸರೇ ನಿರ್ಣಯ ಕೈಗೊಳ್ಳಲಿ ಎಂದ ಸುಪ್ರೀಂ ಕೋರ್ಟ್

ಕಾನೂನು ಸುವ್ಯವಸ್ಥೆ ಕಾಪಾಡುವ ತಮ್ಮ ಕೆಲಸ ನಿಭಾಯಿಸಲು ಪೊಲೀಸರು ಸ್ವತಂತ್ರರಾಗಿದ್ದಾರೆ. ಹೀಗಾಗಿ, ನ್ಯಾಯಾಲಯಕ್ಕಿಂತ ಪೊಲೀಸರೇ ಟ್ರ್ಯಾಕ್ಟರ್ ಪರೇಡ್ ಕುರಿತು ನಿರ್ಣಯ ತೆಗೆದುಕೊಳ್ಳುವುದು ಸಮಂಜಸ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಟ್ರ್ಯಾಕ್ಟರ್ ಪರೇಡ್: ದೆಹಲಿ ಪೊಲೀಸರೇ ನಿರ್ಣಯ ಕೈಗೊಳ್ಳಲಿ ಎಂದ ಸುಪ್ರೀಂ ಕೋರ್ಟ್
ಪಂಜಾಬ್​ ರೈತರ ಟ್ರ್ಯಾಕ್ಟರ್​ಗಳಲ್ಲಿ ದೆಹಲಿಗೆ ತೆರಳುತ್ತಿರುವುದು
guruganesh bhat
| Edited By: |

Updated on: Jan 18, 2021 | 1:08 PM

Share

ದೆಹಲಿ: ಜನವರಿ 26ರಂದು ರೈತರ ಟ್ರ್ಯಾಕ್ಟರ್ ಪರೇಡ್‌ಗೆ ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ದೆಹಲಿ ಪೊಲೀಸರೇ ತೀರ್ಮಾನಿಸಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರೈತರ ಟ್ರ್ಯಾಕ್ಟರ್ ಪರೇಡ್​ಗೆ ತಡೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಯಾವುದೇ ಆದೇಶ ನೀಡಲು ನಕಾರ ವ್ಯಕ್ತಪಡಿಸಿದೆ. ಜತೆಗೆ, ವಿಚಾರಣೆಯನ್ನು ಬುಧವಾರ ನಡೆಸುವುದಾಗಿ ತಿಳಿಸಿದೆ.

ಪೊಲೀಸರೇ ನಿರ್ಣಯ ಕೈಗೊಳ್ಳಲಿ ಪೊಲೀಸರು ತಮ್ಮ ಅಧಿಕಾರ ಉಪಯೋಗಿಸಿ ಟ್ರ್ಯಾಕ್ಟರ್​ ಪರೇಡ್ ಕುರಿತು ನಿರ್ಣಯ ತೆಗೆದುಕೊಳ್ಳಬಹುದು. ಕಾನೂನು ಸುವ್ಯವಸ್ಥೆ ಕಾಪಾಡುವ ತಮ್ಮ ಕೆಲಸ ನಿಭಾಯಿಸಲು ಪೊಲೀಸರು ಸ್ವತಂತ್ರರಾಗಿದ್ದಾರೆ. ಹೀಗಾಗಿ, ನ್ಯಾಯಾಲಯಕ್ಕಿಂತ ಪೊಲೀಸರೇ ಟ್ರ್ಯಾಕ್ಟರ್ ಪರೇಡ್ ಕುರಿತು ನಿರ್ಣಯ ತೆಗೆದುಕೊಳ್ಳುವುದು ಸಮಂಜಸ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇಂದಿನ ವಿಚಾರಣೆಯಲ್ಲಿ ಯಾವುದೇ ನಿರ್ಣಯ ಹೊರಡಿಸದೇ, ಬುಧವಾರ ಇನ್ನೊಮ್ಮೆ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

ರೈತರ ಗುಂಪು ಜನವರಿ 26ರಂದು ಟ್ರ್ಯಾಕ್ಟರ್ ಮೆರವಣಿಗೆ ನಡೆಸಲಿದೆ ಎನ್ನುವ ವಿಚಾರ ನಮ್ಮ ಭದ್ರತಾ ಸಿಬ್ಬಂದಿ ಗಮನಕ್ಕೆ ಬಂದಿದೆ. ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ತಡೆಯೊಡ್ಡಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಉದ್ದೇಶ ಹೊಂದಿರುವ ಮತ್ತು ಇಡೀ ದೇಶಕ್ಕೇ ಮುಜುಗರ ತರುವ ಈ ಮೆರವಣಿಗೆ ನಡೆಸದಂತೆ ನ್ಯಾಯಾಲಯ ಆದೇಶ ಹೊರಡಿಸಬೇಕು ಎಂದು ಪೊಲೀಸರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು.

ದೇಶಕ್ಕೆ ಮುಜುಗರ ಉಂಟುಮಾಡುವ ಟ್ರ್ಯಾಕ್ಟರ್ ಮೆರವಣಿಗೆಗೆ ಅವಕಾಶ ನೀಡಬೇಡಿ: ಸುಪ್ರೀಂಗೆ ದೆಹಲಿ ಪೊಲೀಸರ ಮನವಿ

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?