AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಾಕಿ ತಂತ್ರ ಉಪಯೋಗಿಸಿ ಸರಗಳ್ಳನ ಸೆರೆ ಹಿಡಿದ ದೆಹಲಿ ಪೊಲೀಸರು: ಮಹಿಳಾ ಪೊಲೀಸ್ ಅಧಿಕಾರಿಯದ್ದೇ ಮಹತ್ವದ ಪಾತ್ರ

ಕಳೆದ ಹಲವು ದಿನಗಳಿಂದ ಕಳ್ಳರ ಆಟಾಟೋಪಕ್ಕೆ ಜನರು ತತ್ತರಿಸಿದ್ದರು. ಬೈಕ್​ನಲ್ಲಿ ಮಿಂಚಿನ ವೇಗದಲ್ಲಿ ಬರುತ್ತಿದ್ದ ಕಳ್ಳ ಮಹಿಳೆಯರ ಕುತ್ತಿಗೆಯಲ್ಲಿದ್ದ ಸರಕಸಿದುಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗುತ್ತಿದ್ದ.

ಚಾಲಾಕಿ ತಂತ್ರ ಉಪಯೋಗಿಸಿ ಸರಗಳ್ಳನ ಸೆರೆ ಹಿಡಿದ ದೆಹಲಿ ಪೊಲೀಸರು: ಮಹಿಳಾ ಪೊಲೀಸ್ ಅಧಿಕಾರಿಯದ್ದೇ ಮಹತ್ವದ ಪಾತ್ರ
ದೆಹಲಿಯಲ್ಲಿ ಸರಗಳ್ಳತನ ಮಾಡುತ್ತಿದ್ದವರು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 14, 2021 | 7:42 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ಸರಗಳ್ಳನ ಪ್ರಕರಣಗಳು ಹೆಚ್ಚಾಗುತ್ತಿರುವುದು ದೆಹಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಕಳ್ಳನಿಗೆ ತಿರುಮಂತ್ರ ಹಾಕುವ ವಿಶಿಷ್ಟ ತಂತ್ರದ ಮೂಲಕ ಒಬ್ಬ ಕಳ್ಳನನ್ನು ಬಂಧಿಸಿದ ಪೊಲೀಸರು ಒಂದೇ ಏಟಿಗೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ಬಗೆಹರಿಸಿದ್ದಾರೆ. ದಕ್ಷಿಣ ದೆಹಲಿಯ ದ್ವಾರಕ ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ಕಳೆದ ಹಲವು ದಿನಗಳಿಂದ ಕಳ್ಳರ ಆಟಾಟೋಪಕ್ಕೆ ಜನರು ತತ್ತರಿಸಿದ್ದರು. ಬೈಕ್​ನಲ್ಲಿ ಮಿಂಚಿನ ವೇಗದಲ್ಲಿ ಬರುತ್ತಿದ್ದ ಕಳ್ಳ ಮಹಿಳೆಯರ ಕುತ್ತಿಗೆಯಲ್ಲಿದ್ದ ಸರಕಸಿದುಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗುತ್ತಿದ್ದ.

ಅರ್ಮಾನ್ ಎಂದು ಗುರುತಿಸಲಾಗಿರುವ ಕಳ್ಳನ ಚಹರೆ ಮತ್ತು ನಡವಳಿಕೆಗಳನ್ನು ಹಲವು ದಿನಗಳಿಂದ ಗಮನಿಸುತ್ತಿದ್ದ ಪೊಲೀಸರು ಹಮ್ ಭಿ ಹೈ (ನಾವೂ ಅಲ್ಲಿದ್ದೇವೆ) ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದರು. ಮಹಿಳಾ ಪೊಲೀಸ್ ಸಿಬ್ಬಂದಿ ಸರೋಜ್ ಸಿಂಗ್ ಈ ಕಾರ್ಯಾಚರಣೆಯಲ್ಲಿ ಮಹತ್ವದ ಪಾತ್ರ ವಹಿಸುವುದು ಎಂದು ತೀರ್ಮಾನವಾಯಿತು. ಆರೋಪಿಯು ದ್ವಾರಕಾದ 13ನೇ ಸೆಕ್ಟರ್​ನಲ್ಲಿದ್ದಾನೆ ಎಂಬ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದರು. ಕೊರಳಿಗೆ ದಪ್ಪನೆ ಚಿನ್ನದ ಸರ ಹಾಕಿಕೊಂಡಿದ್ದ ಸಬ್ ಇನ್​ಸ್ಪೆಕ್ಟರ್ ಸರೋಜ್ ಸಿಂಗ್ ಪ್ರಯಾಣಿಕರ ಸೋಗಿನಲ್ಲಿ ರಸ್ತೆಬದಿ ನಿಂತಿದ್ದರು.

‘ಉಳಿದ ಸಿಬ್ಬಂದಿ ಅಲ್ಲಲ್ಲಿ ಚೆದುರಿ, ಜನರಲ್ಲಿ ಬೆರೆತಿದ್ದರು. ಆರೋಪಿಯು ಸರೋಜ್ ಸಿಂಗ್​ರ ಕುತ್ತಿಗೆಯ ಸರ ಸೆಳೆಯಲು ಯತ್ನಿಸಿದಾಗ ಇತರ ಪೊಲೀಸ್ ಸಿಬ್ಬಂದಿಗೆ ಅಲ್ಲಿಗೆ ಧಾವಿಸಿ ಅರ್ಮಾನ್​ನನ್ನು ಹಿಡಿದುಕೊಳ್ಳಲು ಯತ್ನಿಸಿದರ. ಆದರೆ ಈ ಹಂತದಲ್ಲಿ ಅವನು ಪಿಸ್ತೂಲ್ ಹೊರತೆಗೆದು ಗುಂಡು ಹಾರಿಸಲು ಆರಂಭಿಸಿದ. ಸರೋಜ ಅವರು ತಕ್ಷಣ ತಮ್ಮ ಪಿಸ್ತೂಲ್ ಹೊರತೆಗೆದು ಆರೋಪಿಯ ಕಾಲಿಗೆ ಗುಂಡು ಹೊಡೆದರು’ ಎಂದು ಪೊಲೀಸ್ ಅಧಿಕಾರಿ ಶಂಕರ್ ಛೌಧರಿ ತಿಳಿಸಿದರು.

Delhi-Police

ಸರಗಳ್ಳನನ್ನು ಬಂಧಿಸಿದ ಪೊಲೀಸ್ ತಂಡ

22 ವರ್ಷ ವಯೋಮಾನದ ಆರ್ಮಾನ್ ದೆಹಲಿಯ ಜಹಂಗೀರ್​ಪುರಿ ಪ್ರದೇಶದಲ್ಲಿ ವಾಸಿಸುತ್ತಾನೆ. ಅವನ ವಿರುದ್ಧ ಈಗಾಗಲೇ 25 ಕಳ್ಳತನದ ಪ್ರಕರಣಗಳು ದಾಖಲಾಗಿವೆ. ಅವನ ಬಂಧನದಿಂದ ಒಂದೇ ಏಟಿಗೆ 36 ಪ್ರಕರಣಗಳು ಬಗೆಹರಿದಿವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು: ಸರಗಳ್ಳತನ ಮಾಡುತ್ತಿದ್ದ ಇಬ್ಬರು ಹಾಗೂ ಕದ್ದ ಮಾಲು ಖರೀದಿಸುತ್ತಿದ್ದ ಒಬ್ಬನ ಬಂಧನ ಇದನ್ನೂ ಓದಿ: ಕುತ್ತಿಗೆಗೆ ಕೈಹಾಕಿ ಸರಗಳ್ಳತನ; ವೃದ್ಧೆಯ 2 ಲಕ್ಷ ರೂ. ಬೆಲೆಬಾಳುವ ಮಾಂಗಲ್ಯ ಸರ ಎಗರಿಸಿದ ಸರಗಳ್ಳರು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ