ಚಾಲಾಕಿ ತಂತ್ರ ಉಪಯೋಗಿಸಿ ಸರಗಳ್ಳನ ಸೆರೆ ಹಿಡಿದ ದೆಹಲಿ ಪೊಲೀಸರು: ಮಹಿಳಾ ಪೊಲೀಸ್ ಅಧಿಕಾರಿಯದ್ದೇ ಮಹತ್ವದ ಪಾತ್ರ

ಕಳೆದ ಹಲವು ದಿನಗಳಿಂದ ಕಳ್ಳರ ಆಟಾಟೋಪಕ್ಕೆ ಜನರು ತತ್ತರಿಸಿದ್ದರು. ಬೈಕ್​ನಲ್ಲಿ ಮಿಂಚಿನ ವೇಗದಲ್ಲಿ ಬರುತ್ತಿದ್ದ ಕಳ್ಳ ಮಹಿಳೆಯರ ಕುತ್ತಿಗೆಯಲ್ಲಿದ್ದ ಸರಕಸಿದುಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗುತ್ತಿದ್ದ.

ಚಾಲಾಕಿ ತಂತ್ರ ಉಪಯೋಗಿಸಿ ಸರಗಳ್ಳನ ಸೆರೆ ಹಿಡಿದ ದೆಹಲಿ ಪೊಲೀಸರು: ಮಹಿಳಾ ಪೊಲೀಸ್ ಅಧಿಕಾರಿಯದ್ದೇ ಮಹತ್ವದ ಪಾತ್ರ
ದೆಹಲಿಯಲ್ಲಿ ಸರಗಳ್ಳತನ ಮಾಡುತ್ತಿದ್ದವರು
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 14, 2021 | 7:42 PM

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ಸರಗಳ್ಳನ ಪ್ರಕರಣಗಳು ಹೆಚ್ಚಾಗುತ್ತಿರುವುದು ದೆಹಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಕಳ್ಳನಿಗೆ ತಿರುಮಂತ್ರ ಹಾಕುವ ವಿಶಿಷ್ಟ ತಂತ್ರದ ಮೂಲಕ ಒಬ್ಬ ಕಳ್ಳನನ್ನು ಬಂಧಿಸಿದ ಪೊಲೀಸರು ಒಂದೇ ಏಟಿಗೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ಬಗೆಹರಿಸಿದ್ದಾರೆ. ದಕ್ಷಿಣ ದೆಹಲಿಯ ದ್ವಾರಕ ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ಕಳೆದ ಹಲವು ದಿನಗಳಿಂದ ಕಳ್ಳರ ಆಟಾಟೋಪಕ್ಕೆ ಜನರು ತತ್ತರಿಸಿದ್ದರು. ಬೈಕ್​ನಲ್ಲಿ ಮಿಂಚಿನ ವೇಗದಲ್ಲಿ ಬರುತ್ತಿದ್ದ ಕಳ್ಳ ಮಹಿಳೆಯರ ಕುತ್ತಿಗೆಯಲ್ಲಿದ್ದ ಸರಕಸಿದುಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗುತ್ತಿದ್ದ.

ಅರ್ಮಾನ್ ಎಂದು ಗುರುತಿಸಲಾಗಿರುವ ಕಳ್ಳನ ಚಹರೆ ಮತ್ತು ನಡವಳಿಕೆಗಳನ್ನು ಹಲವು ದಿನಗಳಿಂದ ಗಮನಿಸುತ್ತಿದ್ದ ಪೊಲೀಸರು ಹಮ್ ಭಿ ಹೈ (ನಾವೂ ಅಲ್ಲಿದ್ದೇವೆ) ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದರು. ಮಹಿಳಾ ಪೊಲೀಸ್ ಸಿಬ್ಬಂದಿ ಸರೋಜ್ ಸಿಂಗ್ ಈ ಕಾರ್ಯಾಚರಣೆಯಲ್ಲಿ ಮಹತ್ವದ ಪಾತ್ರ ವಹಿಸುವುದು ಎಂದು ತೀರ್ಮಾನವಾಯಿತು. ಆರೋಪಿಯು ದ್ವಾರಕಾದ 13ನೇ ಸೆಕ್ಟರ್​ನಲ್ಲಿದ್ದಾನೆ ಎಂಬ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದರು. ಕೊರಳಿಗೆ ದಪ್ಪನೆ ಚಿನ್ನದ ಸರ ಹಾಕಿಕೊಂಡಿದ್ದ ಸಬ್ ಇನ್​ಸ್ಪೆಕ್ಟರ್ ಸರೋಜ್ ಸಿಂಗ್ ಪ್ರಯಾಣಿಕರ ಸೋಗಿನಲ್ಲಿ ರಸ್ತೆಬದಿ ನಿಂತಿದ್ದರು.

‘ಉಳಿದ ಸಿಬ್ಬಂದಿ ಅಲ್ಲಲ್ಲಿ ಚೆದುರಿ, ಜನರಲ್ಲಿ ಬೆರೆತಿದ್ದರು. ಆರೋಪಿಯು ಸರೋಜ್ ಸಿಂಗ್​ರ ಕುತ್ತಿಗೆಯ ಸರ ಸೆಳೆಯಲು ಯತ್ನಿಸಿದಾಗ ಇತರ ಪೊಲೀಸ್ ಸಿಬ್ಬಂದಿಗೆ ಅಲ್ಲಿಗೆ ಧಾವಿಸಿ ಅರ್ಮಾನ್​ನನ್ನು ಹಿಡಿದುಕೊಳ್ಳಲು ಯತ್ನಿಸಿದರ. ಆದರೆ ಈ ಹಂತದಲ್ಲಿ ಅವನು ಪಿಸ್ತೂಲ್ ಹೊರತೆಗೆದು ಗುಂಡು ಹಾರಿಸಲು ಆರಂಭಿಸಿದ. ಸರೋಜ ಅವರು ತಕ್ಷಣ ತಮ್ಮ ಪಿಸ್ತೂಲ್ ಹೊರತೆಗೆದು ಆರೋಪಿಯ ಕಾಲಿಗೆ ಗುಂಡು ಹೊಡೆದರು’ ಎಂದು ಪೊಲೀಸ್ ಅಧಿಕಾರಿ ಶಂಕರ್ ಛೌಧರಿ ತಿಳಿಸಿದರು.

Delhi-Police

ಸರಗಳ್ಳನನ್ನು ಬಂಧಿಸಿದ ಪೊಲೀಸ್ ತಂಡ

22 ವರ್ಷ ವಯೋಮಾನದ ಆರ್ಮಾನ್ ದೆಹಲಿಯ ಜಹಂಗೀರ್​ಪುರಿ ಪ್ರದೇಶದಲ್ಲಿ ವಾಸಿಸುತ್ತಾನೆ. ಅವನ ವಿರುದ್ಧ ಈಗಾಗಲೇ 25 ಕಳ್ಳತನದ ಪ್ರಕರಣಗಳು ದಾಖಲಾಗಿವೆ. ಅವನ ಬಂಧನದಿಂದ ಒಂದೇ ಏಟಿಗೆ 36 ಪ್ರಕರಣಗಳು ಬಗೆಹರಿದಿವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು: ಸರಗಳ್ಳತನ ಮಾಡುತ್ತಿದ್ದ ಇಬ್ಬರು ಹಾಗೂ ಕದ್ದ ಮಾಲು ಖರೀದಿಸುತ್ತಿದ್ದ ಒಬ್ಬನ ಬಂಧನ ಇದನ್ನೂ ಓದಿ: ಕುತ್ತಿಗೆಗೆ ಕೈಹಾಕಿ ಸರಗಳ್ಳತನ; ವೃದ್ಧೆಯ 2 ಲಕ್ಷ ರೂ. ಬೆಲೆಬಾಳುವ ಮಾಂಗಲ್ಯ ಸರ ಎಗರಿಸಿದ ಸರಗಳ್ಳರು

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್