AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಹೊಡೆದು ಕೊಂದ ಪೊಲೀಸ್​ ಕಾನ್​ಸ್ಟೆಬಲ್​ ಅರೆಸ್ಟ್​; ಎಫ್​ಐಆರ್​ ದಾಖಲಿಸದ ಅಧಿಕಾರಿ ಸಸ್ಪೆಂಡ್​

ನಾವು ದೂರು ಕೊಟ್ಟು 24 ತಾಸಾದರೂ ನ್ಯೂ ಅಶೋಕನಗರ ಪೊಲೀಸ್​ ಠಾಣೆಯ ಅಧಿಕಾರಿ ಎಫ್​ಐಆರ್​ ದಾಖಲು ಮಾಡಲಿಲ್ಲ ಎಂದೂ ಕುಟುಂಬದವರು ಆರೋಪಿಸಿದ್ದಾರೆ.

ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಹೊಡೆದು ಕೊಂದ ಪೊಲೀಸ್​ ಕಾನ್​ಸ್ಟೆಬಲ್​ ಅರೆಸ್ಟ್​; ಎಫ್​ಐಆರ್​ ದಾಖಲಿಸದ ಅಧಿಕಾರಿ ಸಸ್ಪೆಂಡ್​
ವ್ಯಕ್ತಿಗೆ ಥಳಿಸಿ, ಆತ ಸಾಯುತ್ತಿದ್ದಂತೆ ಕಾರಿನಲ್ಲಿ ಮೃತದೇಹ ಸಾಗಿಸಿದ ಕಾನ್​ಸ್ಟೆಬಲ್​ ಮತ್ತು ಸಹಾಯಕರು
TV9 Web
| Edited By: |

Updated on: Jul 29, 2021 | 6:52 PM

Share

ವ್ಯಕ್ತಿಯೊಬ್ಬನನ್ನು ಒಂದೇ ಸಮ ಹೊಡೆದು ಕೊಂದ ಪೊಲೀಸ್​ ಕಾನ್​ಸ್ಟೆಬಲ್ (Police Constable)​​ ನ್ನು ಬಂಧಿಸಲಾಗಿದೆ. ಈ ಕಾನ್​ಸ್ಟೆಬಲ್​​ನನ್ನು ಮೋನು ಸಿರೋಹಿ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟ ತನಿಖೆ ನಡೆಯುತ್ತಿದೆ ಎಂದು ಪೂರ್ವ ದೆಹಲಿ ಡಿಸಿಪಿ ಪ್ರಿಯಾಂಕಾ ಕಶ್ಯಪ್​ ತಿಳಿಸಿದ್ದಾರೆ. ಈ ಪೊಲೀಸ್​ ಕಾನ್​ಸ್ಟೆಬಲ್​ ವ್ಯಕ್ತಿಯೊಬ್ಬನಿಗೆ ತುಂಬ ಥಳಿಸಿದ್ದ. ಪೊಲೀಸ್(Police)​ ಹೊಡೆತ ತಾಳಲಾಗದೆ ಆತ ಮೃತಪಟ್ಟಿದ್ದ. ಈ ವೇಳೆ ಕಾನ್​ಸ್ಟೆಬಲ್​ ಜತೆ ಇನ್ನೂ ನಾಲ್ವರು ಇದ್ದರು. ನಂತರ ಎಲ್ಲ ಸೇರಿ ಆತನ ಮೃತದೇಹವನ್ನು ಕಾರಿನಲ್ಲಿ ಹಾಕಿಕೊಂಡು ಹೋಗಿ ಮೀರತ್​ ಕಾಲುವೆಗೆ ಎಸೆದಿದ್ದರು. ಇದರ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ತುಂಬ ವೈರಲ್​ ಆಗಿತ್ತು.

ಮೃತ ವ್ಯಕ್ತಿಯ ಕುಟುಂಬದವರು ದೆಹಲಿಯ ನ್ಯೂ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ನಾಪತ್ತೆ ದೂರು ಸಲ್ಲಿಸಿದ್ದರು. ನಾವು ದೂರು ಕೊಟ್ಟು 24 ತಾಸಾದರೂ ನ್ಯೂ ಅಶೋಕನಗರ ಪೊಲೀಸ್​ ಠಾಣೆಯ ಅಧಿಕಾರಿ ಎಫ್​ಐಆರ್​ ದಾಖಲು ಮಾಡಲಿಲ್ಲ ಎಂದೂ ಕುಟುಂಬದವರು ಆರೋಪಿಸಿದ್ದಾರೆ. ಅದಾದ ನಂತರ ಪೊಲೀಸ್ ಕಾನ್​ಸ್ಟೆಬಲ್​ ತನ್ನ ಸಹಾಯಕರೊಂದಿಗೆ ಸೇರಿಕೊಂಡು ವ್ಯಕ್ತಿಗೆ ಥಳಿಸಿದ ವಿಡಿಯೋ ವೈರಲ್ ಆಗಿದೆ. ಇದೀಗ ನ್ಯೂ ಅಶೋಕ ನಗರ ಠಾಣಾಧಿಕಾರಿಯೂ ಅಮಾನತುಗೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Uttara Kannada Flood: ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ನೊಂದವರಿಗೆ ಶೀಘ್ರ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ