AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಹೊಡೆದು ಕೊಂದ ಪೊಲೀಸ್​ ಕಾನ್​ಸ್ಟೆಬಲ್​ ಅರೆಸ್ಟ್​; ಎಫ್​ಐಆರ್​ ದಾಖಲಿಸದ ಅಧಿಕಾರಿ ಸಸ್ಪೆಂಡ್​

ನಾವು ದೂರು ಕೊಟ್ಟು 24 ತಾಸಾದರೂ ನ್ಯೂ ಅಶೋಕನಗರ ಪೊಲೀಸ್​ ಠಾಣೆಯ ಅಧಿಕಾರಿ ಎಫ್​ಐಆರ್​ ದಾಖಲು ಮಾಡಲಿಲ್ಲ ಎಂದೂ ಕುಟುಂಬದವರು ಆರೋಪಿಸಿದ್ದಾರೆ.

ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಹೊಡೆದು ಕೊಂದ ಪೊಲೀಸ್​ ಕಾನ್​ಸ್ಟೆಬಲ್​ ಅರೆಸ್ಟ್​; ಎಫ್​ಐಆರ್​ ದಾಖಲಿಸದ ಅಧಿಕಾರಿ ಸಸ್ಪೆಂಡ್​
ವ್ಯಕ್ತಿಗೆ ಥಳಿಸಿ, ಆತ ಸಾಯುತ್ತಿದ್ದಂತೆ ಕಾರಿನಲ್ಲಿ ಮೃತದೇಹ ಸಾಗಿಸಿದ ಕಾನ್​ಸ್ಟೆಬಲ್​ ಮತ್ತು ಸಹಾಯಕರು
TV9 Web
| Edited By: |

Updated on: Jul 29, 2021 | 6:52 PM

Share

ವ್ಯಕ್ತಿಯೊಬ್ಬನನ್ನು ಒಂದೇ ಸಮ ಹೊಡೆದು ಕೊಂದ ಪೊಲೀಸ್​ ಕಾನ್​ಸ್ಟೆಬಲ್ (Police Constable)​​ ನ್ನು ಬಂಧಿಸಲಾಗಿದೆ. ಈ ಕಾನ್​ಸ್ಟೆಬಲ್​​ನನ್ನು ಮೋನು ಸಿರೋಹಿ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟ ತನಿಖೆ ನಡೆಯುತ್ತಿದೆ ಎಂದು ಪೂರ್ವ ದೆಹಲಿ ಡಿಸಿಪಿ ಪ್ರಿಯಾಂಕಾ ಕಶ್ಯಪ್​ ತಿಳಿಸಿದ್ದಾರೆ. ಈ ಪೊಲೀಸ್​ ಕಾನ್​ಸ್ಟೆಬಲ್​ ವ್ಯಕ್ತಿಯೊಬ್ಬನಿಗೆ ತುಂಬ ಥಳಿಸಿದ್ದ. ಪೊಲೀಸ್(Police)​ ಹೊಡೆತ ತಾಳಲಾಗದೆ ಆತ ಮೃತಪಟ್ಟಿದ್ದ. ಈ ವೇಳೆ ಕಾನ್​ಸ್ಟೆಬಲ್​ ಜತೆ ಇನ್ನೂ ನಾಲ್ವರು ಇದ್ದರು. ನಂತರ ಎಲ್ಲ ಸೇರಿ ಆತನ ಮೃತದೇಹವನ್ನು ಕಾರಿನಲ್ಲಿ ಹಾಕಿಕೊಂಡು ಹೋಗಿ ಮೀರತ್​ ಕಾಲುವೆಗೆ ಎಸೆದಿದ್ದರು. ಇದರ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ತುಂಬ ವೈರಲ್​ ಆಗಿತ್ತು.

ಮೃತ ವ್ಯಕ್ತಿಯ ಕುಟುಂಬದವರು ದೆಹಲಿಯ ನ್ಯೂ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ನಾಪತ್ತೆ ದೂರು ಸಲ್ಲಿಸಿದ್ದರು. ನಾವು ದೂರು ಕೊಟ್ಟು 24 ತಾಸಾದರೂ ನ್ಯೂ ಅಶೋಕನಗರ ಪೊಲೀಸ್​ ಠಾಣೆಯ ಅಧಿಕಾರಿ ಎಫ್​ಐಆರ್​ ದಾಖಲು ಮಾಡಲಿಲ್ಲ ಎಂದೂ ಕುಟುಂಬದವರು ಆರೋಪಿಸಿದ್ದಾರೆ. ಅದಾದ ನಂತರ ಪೊಲೀಸ್ ಕಾನ್​ಸ್ಟೆಬಲ್​ ತನ್ನ ಸಹಾಯಕರೊಂದಿಗೆ ಸೇರಿಕೊಂಡು ವ್ಯಕ್ತಿಗೆ ಥಳಿಸಿದ ವಿಡಿಯೋ ವೈರಲ್ ಆಗಿದೆ. ಇದೀಗ ನ್ಯೂ ಅಶೋಕ ನಗರ ಠಾಣಾಧಿಕಾರಿಯೂ ಅಮಾನತುಗೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Uttara Kannada Flood: ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ನೊಂದವರಿಗೆ ಶೀಘ್ರ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು