AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಹೊಡೆದು ಕೊಂದ ಪೊಲೀಸ್​ ಕಾನ್​ಸ್ಟೆಬಲ್​ ಅರೆಸ್ಟ್​; ಎಫ್​ಐಆರ್​ ದಾಖಲಿಸದ ಅಧಿಕಾರಿ ಸಸ್ಪೆಂಡ್​

ನಾವು ದೂರು ಕೊಟ್ಟು 24 ತಾಸಾದರೂ ನ್ಯೂ ಅಶೋಕನಗರ ಪೊಲೀಸ್​ ಠಾಣೆಯ ಅಧಿಕಾರಿ ಎಫ್​ಐಆರ್​ ದಾಖಲು ಮಾಡಲಿಲ್ಲ ಎಂದೂ ಕುಟುಂಬದವರು ಆರೋಪಿಸಿದ್ದಾರೆ.

ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಹೊಡೆದು ಕೊಂದ ಪೊಲೀಸ್​ ಕಾನ್​ಸ್ಟೆಬಲ್​ ಅರೆಸ್ಟ್​; ಎಫ್​ಐಆರ್​ ದಾಖಲಿಸದ ಅಧಿಕಾರಿ ಸಸ್ಪೆಂಡ್​
ವ್ಯಕ್ತಿಗೆ ಥಳಿಸಿ, ಆತ ಸಾಯುತ್ತಿದ್ದಂತೆ ಕಾರಿನಲ್ಲಿ ಮೃತದೇಹ ಸಾಗಿಸಿದ ಕಾನ್​ಸ್ಟೆಬಲ್​ ಮತ್ತು ಸಹಾಯಕರು
TV9 Web
| Edited By: |

Updated on: Jul 29, 2021 | 6:52 PM

Share

ವ್ಯಕ್ತಿಯೊಬ್ಬನನ್ನು ಒಂದೇ ಸಮ ಹೊಡೆದು ಕೊಂದ ಪೊಲೀಸ್​ ಕಾನ್​ಸ್ಟೆಬಲ್ (Police Constable)​​ ನ್ನು ಬಂಧಿಸಲಾಗಿದೆ. ಈ ಕಾನ್​ಸ್ಟೆಬಲ್​​ನನ್ನು ಮೋನು ಸಿರೋಹಿ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟ ತನಿಖೆ ನಡೆಯುತ್ತಿದೆ ಎಂದು ಪೂರ್ವ ದೆಹಲಿ ಡಿಸಿಪಿ ಪ್ರಿಯಾಂಕಾ ಕಶ್ಯಪ್​ ತಿಳಿಸಿದ್ದಾರೆ. ಈ ಪೊಲೀಸ್​ ಕಾನ್​ಸ್ಟೆಬಲ್​ ವ್ಯಕ್ತಿಯೊಬ್ಬನಿಗೆ ತುಂಬ ಥಳಿಸಿದ್ದ. ಪೊಲೀಸ್(Police)​ ಹೊಡೆತ ತಾಳಲಾಗದೆ ಆತ ಮೃತಪಟ್ಟಿದ್ದ. ಈ ವೇಳೆ ಕಾನ್​ಸ್ಟೆಬಲ್​ ಜತೆ ಇನ್ನೂ ನಾಲ್ವರು ಇದ್ದರು. ನಂತರ ಎಲ್ಲ ಸೇರಿ ಆತನ ಮೃತದೇಹವನ್ನು ಕಾರಿನಲ್ಲಿ ಹಾಕಿಕೊಂಡು ಹೋಗಿ ಮೀರತ್​ ಕಾಲುವೆಗೆ ಎಸೆದಿದ್ದರು. ಇದರ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ತುಂಬ ವೈರಲ್​ ಆಗಿತ್ತು.

ಮೃತ ವ್ಯಕ್ತಿಯ ಕುಟುಂಬದವರು ದೆಹಲಿಯ ನ್ಯೂ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ನಾಪತ್ತೆ ದೂರು ಸಲ್ಲಿಸಿದ್ದರು. ನಾವು ದೂರು ಕೊಟ್ಟು 24 ತಾಸಾದರೂ ನ್ಯೂ ಅಶೋಕನಗರ ಪೊಲೀಸ್​ ಠಾಣೆಯ ಅಧಿಕಾರಿ ಎಫ್​ಐಆರ್​ ದಾಖಲು ಮಾಡಲಿಲ್ಲ ಎಂದೂ ಕುಟುಂಬದವರು ಆರೋಪಿಸಿದ್ದಾರೆ. ಅದಾದ ನಂತರ ಪೊಲೀಸ್ ಕಾನ್​ಸ್ಟೆಬಲ್​ ತನ್ನ ಸಹಾಯಕರೊಂದಿಗೆ ಸೇರಿಕೊಂಡು ವ್ಯಕ್ತಿಗೆ ಥಳಿಸಿದ ವಿಡಿಯೋ ವೈರಲ್ ಆಗಿದೆ. ಇದೀಗ ನ್ಯೂ ಅಶೋಕ ನಗರ ಠಾಣಾಧಿಕಾರಿಯೂ ಅಮಾನತುಗೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Uttara Kannada Flood: ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ನೊಂದವರಿಗೆ ಶೀಘ್ರ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ