AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ರೈತರ ಹಠಕ್ಕೆ ಮಣಿದ ದೆಹಲಿ ಪೊಲೀಸರು.. ‘ಕಿಸಾನ್ ಗಣತಂತ್ರ’ ಪರೇಡ್​ಗೆ ಅನುಮತಿ

ನಾಳೆ ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರಾಕ್ಟರ್ ಪರೇಡ್ ನಡೆಸಲು ರೈತರಿಗೆ ಕೊನೆಗೂ ಪೊಲೀಸರು ಅನುಮತಿ ನೀಡಿದ್ದಾರೆ. ಪರೇಡ್​ನಲ್ಲಿ ಎರಡು ಲಕ್ಷ ಟ್ರ್ಯಾಕ್ಟರ್ ಭಾಗಿಯಾಗುವ ನಿರೀಕ್ಷೆಯಿದೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ದೆಹಲಿ ಔಟರ್ ರಿಂಗ್ ರೋಡ್​ನಲ್ಲಿ ಪರೇಡ್ ನಡೆಯಲಿದೆ.

ಕೊನೆಗೂ ರೈತರ ಹಠಕ್ಕೆ ಮಣಿದ ದೆಹಲಿ ಪೊಲೀಸರು.. ‘ಕಿಸಾನ್ ಗಣತಂತ್ರ’ ಪರೇಡ್​ಗೆ ಅನುಮತಿ
ಸಂಗ್ರಹ ಚಿತ್ರ
Follow us
ಆಯೇಷಾ ಬಾನು
|

Updated on: Jan 25, 2021 | 11:11 AM

ದೆಹಲಿ: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದೆ‌. ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ ನಡೆದ 11 ಸುತ್ತಿನ ಮಾತುಕತೆಗಳು ವಿಫಲವಾಗಿವೆ.‌ ಹೋರಾಟದ ತೀವ್ರತೆಯನ್ನು ಹೆಚ್ಚಿಸಲು ಮುಂದಾಗಿರುವ ರೈತರು ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ಱಲಿ ನಡೆಸಲು ಮುಂದಾಗಿದ್ದಾರೆ. ಮೊದಲು ರೈತರ ಟ್ರ್ಯಾಕ್ಟರ್ ಪರೇಡ್​ಗೆ ದೆಹಲಿ ಪೊಲೀಸರು ಅನುಮತಿ ನೀಡಿರಲಿಲ್ಲ. ರೈತರು ಹಾಗೂ ಪೊಲೀಸರ ನಡುವೆ ನಡೆದ ಅನೇಕ ಸುತ್ತಿನ ಮಾತುಕತೆಗಳ ಬಳಿಕ ಕೊನೆಗೂ ರೈತರ ಹಠಕ್ಕೆ ಮಣಿದಿರುವ ಪೊಲೀಸರು ಟ್ರ್ಯಾಕ್ಟರ್ ಱಲಿಗೆ ಅನುಮತಿ ನೀಡಿದ್ದಾರೆ.

ಕೊನೆಗೂ ರೈತರ ಹಠಕ್ಕೆ ಮಣಿದ ದೆಹಲಿ ಪೊಲೀಸರು ರೈತರಿಗೆ ದೆಹಲಿಗೆ ಪ್ರವೇಶಿಸಲು ಮತ್ತು ಪ್ರತಿ ಮಾರ್ಗದಲ್ಲಿ 100 ಕಿ.ಮೀ ದೂರ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಕಿಸಾನ್ ಗಣತಂತ್ರ ಪರೇಡ್​ನಲ್ಲಿ ಒಟ್ಟು 2 ಲಕ್ಷ ಟ್ರ್ಯಾಕ್ಟರ್‌ಗಳು ಭಾಗವಹಿಸಲಿವೆ. ಶಾಂತಿ-ಸುವ್ಯವಸ್ಥೆ ಕಾಪಾಡಲು 2,500 ಸ್ವಯಂ ಸೇವಕರನ್ನ ನಿಯೋಜಿಸಲಾಗುತ್ತೆ ಅಂತಾ ರೈತ ಮುಖಂಡರು ತಿಳಿಸಿದ್ದಾರೆ. ಪರೇಡ್‌ನಲ್ಲಿ ಭಾಗವಹಿಸುವ ಸಂಖ್ಯೆಯನ್ನ ಆಧರಿಸಿ ಸ್ವಯಂ ಸೇವಕರನ್ನು ನಿಯೋಜಿಸಲಾಗುತ್ತೆ ಅಂತಾ ರೈತ ಮುಖಂಡರು ಹೇಳಿದ್ದಾರೆ. ದೆಹಲಿಯ ಸಿಂಘು, ಟಿಕ್ರಿ, ಘಾಜಿಯಬಾದ್, ಬುರಾರಿ ‌ಮೈದಾನದಿಂದ 2 ಲಕ್ಷ ಟ್ರ್ಯಾಕ್ಟರ್‌ಗಳು ದೆಹಲಿಯಲ್ಲಿ ಪರೇಡ್ ನಡೆಸಲಿವೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದಿಂದ ಟ್ರ್ಯಾಕ್ಟರ್​ಗಳು ಬರುತ್ತಿದ್ದು, ಟ್ರ್ಯಾಕ್ಟರ್‌ ಱಲಿಗೆ ಪೊಲೀಸರು ನಿಗದಿತ ಮಾರ್ಗ ಸೂಚಿಸಿದ್ದಾರೆ.

ಸಿಂಘು ಗಡಿಯಿಂದ ಸಂಜಯ್ ಗಾಂಧಿ ಸಾರಿಗೆ ನಗರ ಮೂಲಕ ಬವಾನಾಗೆ ತೆರಳಿ, ಅಲ್ಲಿಂದ ವಾಪಸ್ ಗಡಿ ಮರಳಬೇಕು. ಟಿಕ್ರಿಯಿಂದ ನಜಾಫ್‌ಗರ್, ಧನ್ಸಾ, ಬದ್ಲಿ ಬಂದು ಬಳಿಕ ಟಿಕ್ರಿಗೆ ವಾಪಸ್ ಆಗಬೇಕಿದೆ. ಘಾಜಿಪುರ ಗಡಿಯಿಂದ ಘಾಜಿಯಾಬಾದ್, ದುಹೈಗೆ ತೆರಳಿ ಅಲ್ಲಿಂದ ವಾಪಸ್ ಆಗಬೇಕಿದೆ. ಹೀಗಾಗಿ ಪಂಜಾಬ್​ನಿಂದ ಮನೆಗೊಂದರಂತೆ ಟ್ರ್ಯಾಕ್ಟರ್​ಗಳನ್ನ ತನ್ನಿ ಅಂತಾ ರೈತ ಸಂಘಟನೆಗಳು ಸೂಚಿಸಿವೆ. ಟ್ರ್ಯಾಕ್ಟರ್ ಇದ್ದು ಪರೇಡ್​ನಲ್ಲಿ ಭಾಗವಹಿಸದ ರೈತರಿಗೆ ಗ್ರಾಮದಿಂದ ಬಹಿಷ್ಕಾರ ಹಾಕುವ ಎಚ್ಚರಿಕೆಯನ್ನ ನೀಡಿದ್ದಾರೆ. ಟ್ರ್ಯಾಕ್ಟರ್ ಪರೇಡ್​ನಲ್ಲಿ ಭಾಗಿಯಾಗುವವರು ರಾಜಕೀಯ ಪಕ್ಷಗಳ ಧ್ವಜ ತರುವಂತಿಲ್ಲ. ಕೇವಲ ರಾಷ್ಟ್ರೀಯ ಧ್ವಜ ಮತ್ತು ರೈತ ಸಂಘಟನೆಗಳ ಧ್ವಜ ಬಳಕೆ ಮಾಡಲು ಸೂಚನೆ ನೀಡಲಾಗಿದೆ.

ದೆಹಲಿಯಲ್ಲಿ ನಡೆಯಲಿರೋ ಟ್ರ್ಯಾಕ್ಟರ್ ಱಲಿ ಯಾವುದೇ ಕಾರಣಕ್ಕೂ ಗಣರಾಜ್ಯೋತ್ಸವ ಪರೇಡ್​ಗೆ ಅಡ್ಡಿ ಮಾಡಲ್ಲ ಅಂತಾ ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ರಾಜ್​ಪಥ್​ನಲ್ಲಿ ನಡೆಯಲಿರೋ ಗಣರಾಜ್ಯೋತ್ಸವ ಸಂಭ್ರಮ ಯಾವುದೇ ಅಡ್ಡಿ ಆತಂಕ ಇಲ್ಲದೆ ನಡೆಯುವ ಭರವಸೆ ನೀಡಿದ್ದಾರೆ.

ದೆಹಲಿಯಲ್ಲಿ 2-3ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆ ಚಳಿ; ಹವಾಮಾನ ಇಲಾಖೆ ಎಚ್ಚರಿಕೆ

ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?