AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ‘ಕಿಸಾನ್ ಗಣತಂತ್ರ ಪರೇಡ್’ಗೆ ದೆಹಲಿ ಪೊಲೀಸರಿಂದ ಷರತ್ತುಬದ್ಧ ಅನುಮತಿ

ಪ್ರತಿಭಟನಾ ನಿರತ ರೈತರಿಗೆ ಟ್ರಾಕ್ಟರ್ ಪರೇಡ್ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆ. ಸಾವಿರಾರು ಟ್ರಾಕ್ಟರ್​ಗಳು ದೆಹಲಿ ಪ್ರವೇಶಿಸಲು, ರೈತ ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿ ನಿಂತಿವೆ.

Delhi Chalo | ‘ಕಿಸಾನ್ ಗಣತಂತ್ರ ಪರೇಡ್’ಗೆ ದೆಹಲಿ ಪೊಲೀಸರಿಂದ ಷರತ್ತುಬದ್ಧ ಅನುಮತಿ
ಕೇಂದ್ರದ ಹೊಸ ಕೃಷಿ ಕಾಯ್ದೆಯ ವಿರುದ್ಧ ಪ್ರತಿಭಟನಾನಿರತ ರೈತರು
TV9 Web
| Edited By: |

Updated on:Apr 06, 2022 | 8:44 PM

Share

ದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತರು ನಡೆಸಲು ಉದ್ದೇಶಿಸಿರುವ ‘ಕಿಸಾನ್ ಗಣತಂತ್ರ ಪರೇಡ್’ಗೆ ದೆಹಲಿ ಪೊಲೀಸರು ಷರತ್ತುಬದ್ಧ ಅನುಮತಿ ನೀಡಿದ್ದಾರೆ. ಗಣರಾಜ್ಯೋತ್ಸವದ ನಂತರ ಟ್ರ್ಯಾಕ್ಟರ್ ರ್‍ಯಾಲಿ ನಡೆಸಬಹುದು. ಅದಕ್ಕಾಗಿ ನಾಳೆ ದೆಹಲಿಯ ಮೂರು ಸ್ಥಳಗಳಲ್ಲಿ ಬ್ಯಾರಿಕೇಡ್‌ ತೆರವು ಮಾಡಲಾಗುವುದು ಎಂದು ದೆಹಲಿ ವಿಶೇಷ ಪೊಲೀಸ್ ಆಯುಕ್ತ ದೀಪೇಂದ್ರ ಪಾಠಕ್‌ ಹೇಳಿಕೆ ನೀಡಿದ್ದಾರೆ.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಎರಡು ತಿಂಗಳು ಪೂರೈಸಿದೆ. ಕಳೆದ ಎರಡು ತಿಂಗಳುಗಳಿಂದ ಕೇಂದ್ರ ಮತ್ತು ರೈತ ಮುಖಂಡರ ನಡುವೆ 11 ಸುತ್ತಿನ ಮಾತುಕತೆಗಳಾಗಿದ್ದು, ಯಾವುದೇ ಸಭೆಯು ಫಲಪ್ರದವಾಗಿಲ್ಲ. ಇದೀಗ ರೈತರು, ಜನವರಿ 26, ಗಣರಾಜ್ಯೋತ್ಸವ ದಿನದಂದು ರಾಷ್ಟ್ರ ರಾಜಧಾನಿಯಲ್ಲಿ ಟ್ರಾಕ್ಟರ್ ಪರೇಡ್ ನಡೆಸಲು ಉದ್ದೇಶಿಸಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಟ್ರಾಕ್ಟರ್ ಪರೇಡ್ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಸಾವಿರಾರು ಟ್ರಾಕ್ಟರ್​ಗಳು ದೆಹಲಿ ಪ್ರವೇಶಿಸಲು, ರೈತ ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿ ನಿಂತಿವೆ ಎಂದು ರೈತ ಮುಖಂಡ ಅಭಿಮನ್ಯು ಕೊಹಾರ್ ಮಾಹಿತಿ ನೀಡಿದ್ದರು. ಆದರೆ, ಪ್ರತಿಭಟನೆ ಹಾಗೂ ಟ್ರಾಕ್ಟರ್ ಪರೇಡ್​ನ ಮಾರ್ಗದ ಬಗ್ಗೆ ಇಂದು ನಿರ್ಣಯ ಕೈಗೊಳ್ಳುತ್ತೇವೆ ಎಂದು ಮೂಲಗಳು ಮಾಹಿತಿ ನೀಡಿದ್ದವು.

Delhi Chalo: ಕೇಂದ್ರ-ರೈತರ ನಡುವಿನ 11ನೇ ಸುತ್ತಿನ ಮಾತುಕತೆಯೂ ವಿಫಲ

Published On - 6:57 pm, Sun, 24 January 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?