Delhi Chalo | ‘ಕಿಸಾನ್ ಗಣತಂತ್ರ ಪರೇಡ್’ಗೆ ದೆಹಲಿ ಪೊಲೀಸರಿಂದ ಷರತ್ತುಬದ್ಧ ಅನುಮತಿ

ಪ್ರತಿಭಟನಾ ನಿರತ ರೈತರಿಗೆ ಟ್ರಾಕ್ಟರ್ ಪರೇಡ್ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆ. ಸಾವಿರಾರು ಟ್ರಾಕ್ಟರ್​ಗಳು ದೆಹಲಿ ಪ್ರವೇಶಿಸಲು, ರೈತ ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿ ನಿಂತಿವೆ.

Delhi Chalo | ‘ಕಿಸಾನ್ ಗಣತಂತ್ರ ಪರೇಡ್’ಗೆ ದೆಹಲಿ ಪೊಲೀಸರಿಂದ ಷರತ್ತುಬದ್ಧ ಅನುಮತಿ
ಕೇಂದ್ರದ ಹೊಸ ಕೃಷಿ ಕಾಯ್ದೆಯ ವಿರುದ್ಧ ಪ್ರತಿಭಟನಾನಿರತ ರೈತರು
Edited By:

Updated on: Apr 06, 2022 | 8:44 PM

ದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತರು ನಡೆಸಲು ಉದ್ದೇಶಿಸಿರುವ ‘ಕಿಸಾನ್ ಗಣತಂತ್ರ ಪರೇಡ್’ಗೆ ದೆಹಲಿ ಪೊಲೀಸರು ಷರತ್ತುಬದ್ಧ ಅನುಮತಿ ನೀಡಿದ್ದಾರೆ. ಗಣರಾಜ್ಯೋತ್ಸವದ ನಂತರ ಟ್ರ್ಯಾಕ್ಟರ್ ರ್‍ಯಾಲಿ ನಡೆಸಬಹುದು. ಅದಕ್ಕಾಗಿ ನಾಳೆ ದೆಹಲಿಯ ಮೂರು ಸ್ಥಳಗಳಲ್ಲಿ ಬ್ಯಾರಿಕೇಡ್‌ ತೆರವು ಮಾಡಲಾಗುವುದು ಎಂದು ದೆಹಲಿ ವಿಶೇಷ ಪೊಲೀಸ್ ಆಯುಕ್ತ ದೀಪೇಂದ್ರ ಪಾಠಕ್‌ ಹೇಳಿಕೆ ನೀಡಿದ್ದಾರೆ.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಎರಡು ತಿಂಗಳು ಪೂರೈಸಿದೆ. ಕಳೆದ ಎರಡು ತಿಂಗಳುಗಳಿಂದ ಕೇಂದ್ರ ಮತ್ತು ರೈತ ಮುಖಂಡರ ನಡುವೆ 11 ಸುತ್ತಿನ ಮಾತುಕತೆಗಳಾಗಿದ್ದು, ಯಾವುದೇ ಸಭೆಯು ಫಲಪ್ರದವಾಗಿಲ್ಲ. ಇದೀಗ ರೈತರು, ಜನವರಿ 26, ಗಣರಾಜ್ಯೋತ್ಸವ ದಿನದಂದು ರಾಷ್ಟ್ರ ರಾಜಧಾನಿಯಲ್ಲಿ ಟ್ರಾಕ್ಟರ್ ಪರೇಡ್ ನಡೆಸಲು ಉದ್ದೇಶಿಸಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಟ್ರಾಕ್ಟರ್ ಪರೇಡ್ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಸಾವಿರಾರು ಟ್ರಾಕ್ಟರ್​ಗಳು ದೆಹಲಿ ಪ್ರವೇಶಿಸಲು, ರೈತ ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿ ನಿಂತಿವೆ ಎಂದು ರೈತ ಮುಖಂಡ ಅಭಿಮನ್ಯು ಕೊಹಾರ್ ಮಾಹಿತಿ ನೀಡಿದ್ದರು. ಆದರೆ, ಪ್ರತಿಭಟನೆ ಹಾಗೂ ಟ್ರಾಕ್ಟರ್ ಪರೇಡ್​ನ ಮಾರ್ಗದ ಬಗ್ಗೆ ಇಂದು ನಿರ್ಣಯ ಕೈಗೊಳ್ಳುತ್ತೇವೆ ಎಂದು ಮೂಲಗಳು ಮಾಹಿತಿ ನೀಡಿದ್ದವು.

Delhi Chalo: ಕೇಂದ್ರ-ರೈತರ ನಡುವಿನ 11ನೇ ಸುತ್ತಿನ ಮಾತುಕತೆಯೂ ವಿಫಲ

Published On - 6:57 pm, Sun, 24 January 21