AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಅಕ್ರಮ ವಿರೋಧಿಸಿ ಪ್ರತಿಭಟನೆಯಲ್ಲಿ 2,823 ಕ್ರಿಮಿನಲ್‌ಗಳು ಪತ್ತೆ: ದೆಹಲಿ ಪೊಲೀಸರಿಂದ ಕಾರ್ಯಾಚರಣೆ

ದೆಹಲಿಯ ಜಂತರ್​ ಮಂತರ್​ನಲ್ಲಿ ಜುಲೈ 20ರಿಂದ 25ರವರೆಗೆ ನೀಟ್(NEET)  ಪರೀಕ್ಷಾ ಅಕ್ರಮವನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ 2,823 ಕ್ರಿಮಿನಲ್​ಗಳು ಕೂಡ ಭಾಗಿಯಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ದೆಹಲಿಯ ಪೊಲೀಸರು ಎಐ ಆಧಾರಿತ ಫೇಶಿಯಲ್ ರೆಕಗ್ನಿಷನ್ ಸಿಸ್ಟಂ ತಂತ್ರಜ್ಞಾನ ಬಳಸಿ 2,823 ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಗುರುತಿಸಿದ್ದಾರೆ. ಇವರಲ್ಲಿ 989 ವ್ಯಕ್ತಿಗಳು ಕೊಲೆ,ಅತ್ಯಾಚಾರ ಸೇರಿದಂತೆ ತೀವ್ರ ಸ್ವರೂಪದ ಗಂಭೀರ ಅಪರಾಧಗಳಲ್ಲಿ ಭಾಗಿಯಾದ ಹಿನ್ನೆಲೆ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೀಟ್ ಅಕ್ರಮ ವಿರೋಧಿಸಿ ಪ್ರತಿಭಟನೆಯಲ್ಲಿ 2,823 ಕ್ರಿಮಿನಲ್‌ಗಳು ಪತ್ತೆ: ದೆಹಲಿ ಪೊಲೀಸರಿಂದ ಕಾರ್ಯಾಚರಣೆ
ಪ್ರತಿಭಟನೆ
ನಯನಾ ರಾಜೀವ್
|

Updated on:Jul 28, 2026 | 10:44 AM

Share

ನವದೆಹಲಿ,ಜುಲೈ 28: ದೆಹಲಿಯ ಜಂತರ್​ ಮಂತರ್​ನಲ್ಲಿ ಜುಲೈ 20ರಿಂದ 25ರವರೆಗೆ ನೀಟ್(NEET)  ಪರೀಕ್ಷಾ ಅಕ್ರಮವನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ 2,823 ಕ್ರಿಮಿನಲ್​ಗಳು ಕೂಡ ಭಾಗಿಯಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ದೆಹಲಿಯ ಪೊಲೀಸರು ಎಐ ಆಧಾರಿತ ಫೇಶಿಯಲ್ ರೆಕಗ್ನಿಷನ್ ಸಿಸ್ಟಂ ತಂತ್ರಜ್ಞಾನ ಬಳಸಿ 2,823 ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಗುರುತಿಸಿದ್ದಾರೆ. ಇವರಲ್ಲಿ 989 ವ್ಯಕ್ತಿಗಳು ಕೊಲೆ,ಅತ್ಯಾಚಾರ ಸೇರಿದಂತೆ ತೀವ್ರ ಸ್ವರೂಪದ ಗಂಭೀರ ಅಪರಾಧಗಳಲ್ಲಿ ಭಾಗಿಯಾದ ಹಿನ್ನೆಲೆ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ತೆಯಾದ ಅಪರಾಧಿಗಳ ಪೈಕಿ 101 ಜನರು ಕೊಲೆ ಪ್ರಕರಣಗಳಲ್ಲಿ, 61 ಜನರು ಅತ್ಯಾಚಾರ ಪ್ರಕರಣಗಳಲ್ಲಿ, 284 ಜನರು ದರೋಡೆ, 229 ಜನರು ಶಸ್ತ್ರಾಸ್ತ್ರ ಕಾಯ್ದೆಯಡಿ (Arms Act) ಹಾಗೂ 67 ಜನರು ಮಾದಕದ್ರವ್ಯ ಕಾಯ್ದೆಯಡಿ ಆರೋಪಿಗಳಾಗಿದ್ದಾರೆ.

ಈ ತಂತ್ರಜ್ಞಾನ ಮತ್ತು ಪರಿಶೀಲನಾ ವ್ಯವಸ್ಥೆಯು ಸಾಮಾನ್ಯ ವಿದ್ಯಾರ್ಥಿಗಳು ಅಥವಾ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡಿಲ್ಲ. ಪ್ರತಿಭಟನೆಯ ಸಾಲಿನಲ್ಲಿ ನುಸುಳಿ ಗಲಭೆ ಎಬ್ಬಿಸಲು ಯತ್ನಿಸುವ ಅಪರಾಧಿಗಳನ್ನು ಪತ್ತೆಹಚ್ಚಲು ಮಾತ್ರ ಇದನ್ನು ಬಳಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಓದಿ: ನಾನು ಬೀದಿ ಹೋರಾಟಗಾರ: ಜೈರಾಮ್ ರಮೇಶ್ ಹೇಳಿಕೆಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು

ನೀಟ್ ಯುಜಿ ಪರೀಕ್ಷಾ ಅಕ್ರಮ ಮತ್ತು ಸಿಬಿಎಸ್​ಇ ಸಮಸ್ಯೆಗಳ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ಜೂನ್‌ನಿಂದ ಸತತ ಪ್ರತಿಭಟನೆಗಳು ನಡೆಯುತ್ತಿದ್ದವು. ಜುಲೈ 20 ರಂದು ಪ್ರತಿಭಟನೆ ವಿಕೋಪಕ್ಕೆ ತಿರುಗಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾದ ಹಿನ್ನೆಲೆಯಲ್ಲಿ, ಜುಲೈ 25 ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಎಫ್‌ಐಆರ್ (FIR) ಹಿಂಪಡೆಯುವಿಕೆ ಭರವಸೆ: ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ಮತ್ತು ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಸಿಜೆಪಿ ನಾಯಕರಿಗೆ ಸರ್ಕಾರ ಭರವಸೆ ನೀಡಿದೆ. ಬಂಧಿತ ಪ್ರತಿಭಟನಾಕಾರರು ಮತ್ತು ವಿದ್ಯಾರ್ಥಿಗಳಿಗೆ ಉಚಿತ ಕಾನೂನು ನೆರವು ನೀಡಲು ಹಿರಿಯ ವಕೀಲ ಹಾಗೂ ಸಂಸದ ಕಪಿಲ್ ಸಿಬಲ್ ಅವರು ತಮ್ಮ ಕಡೆಯಿಂದ 1 ಕೋಟಿ ರೂ. ಪರಿಹಾರ ನಿಧಿ ಘೋಷಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:40 am, Tue, 28 July 26

Follow Us
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ