AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಫ್​ಐಆರ್​ ದಾಖಲಾದ ರೈತ ಮುಖಂಡರಿಗೆ ಲುಕ್​ ಔಟ್ ನೋಟಿಸ್ ನೀಡಲು ನಿರ್ಧಾರ​ : ಆಸ್ಪತ್ರೆಗೆ ಅಮಿತ್​ ಷಾ ಭೇಟಿ

ಜನವರಿ 26 ರಂದು ರೈತರ ಹೆಸರಿನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟ ವಿಡಿಯೋವೊಂದನ್ನು ದೆಹಲಿ ಪೊಲೀಸರು ಇಂದು ಬಿಡುಗಡೆ ಮಾಡಿದ್ದು, ಕೆಂಪುಕೋಟೆ ಸಂಕೀರ್ಣದ ಒಳಗೆ ಬಸ್​ವೊಂದನ್ನು ಧ್ವಂಸ ಮಾಡಿದ್ದನ್ನು ಇದರಲ್ಲಿ  ನೋಡಬಹುದು.

ಎಫ್​ಐಆರ್​ ದಾಖಲಾದ ರೈತ ಮುಖಂಡರಿಗೆ ಲುಕ್​ ಔಟ್ ನೋಟಿಸ್ ನೀಡಲು ನಿರ್ಧಾರ​ : ಆಸ್ಪತ್ರೆಗೆ ಅಮಿತ್​ ಷಾ ಭೇಟಿ
ಗೃಹ ಸಚಿವ ಅಮಿತ್​ ಷಾ
Lakshmi Hegde
|

Updated on:Jan 28, 2021 | 12:28 PM

Share

ದೆಹಲಿ: ಜನವರಿ 26ರಂದು ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರದ ಬಿಸಿ ಇನ್ನೂ ಆರಿಲ್ಲ. ಪೊಲೀಸರು ತನಿಖೆ ಶುರು ಮಾಡಿದ್ದಾರೆ. ರೈತರು ಪ್ರತಿಭಟನೆ ನಡೆಸುತ್ತಿರುವ ಗಡಿ ಭಾಗಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದರಲ್ಲೂ ಘಾಜಿಯಾಪುರ ಗಡಿ ಪ್ರದೇಶದಲ್ಲಿ ನಿನ್ನೆ ರಾತ್ರಿ ಅಧಿಕಾರಿಗಳು ಬೀದಿ ದೀಪ ಬೇಕಂತಲೇ ಆರಿಸಿದ್ದಾರೆಂದು ರೈತರು ಆರೋಪ ಮಾಡಿದ್ದಾರೆ.

ಇನ್ನು ಜನವರಿ 26 ರಂದು ರೈತರ ಹೆಸರಿನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟ ವಿಡಿಯೋವೊಂದನ್ನು ದೆಹಲಿ ಪೊಲೀಸರು ಇಂದು ಬಿಡುಗಡೆ ಮಾಡಿದ್ದು, ಕೆಂಪುಕೋಟೆ ಸಂಕೀರ್ಣದ ಒಳಗೆ ಬಸ್​ವೊಂದನ್ನು ಧ್ವಂಸ ಮಾಡಿದ್ದನ್ನು ಇದರಲ್ಲಿ  ನೋಡಬಹುದು. ಹಾಗೇ, ನಿನ್ನೆ ಗೃಹ ಸಚಿವ ಅಮಿತ್​ ಷಾ ನೇತೃತ್ವದಲ್ಲಿ ಪರಿಶೀಲನಾ ಸಭೆಯಲ್ಲಿ ನಿರ್ಣಯವಾದಂತೆ, ಎಫ್​ಐಆರ್​ನಲ್ಲಿ ಹೆಸರು ದಾಖಲಾದ ಸುಮಾರು 25 ರೈತ ಮುಖಂಡರಿಗೆ ಲುಕ್​ಔಟ್​ ನೋಟಿಸ್​ ನೀಡಲು ದೆಹಲಿ ಪೊಲೀಸರು ಸಜ್ಜಾಗಿದ್ದಾರೆ. ಅದಾದ ಬಳಿಕ ಅವರೆಲ್ಲ ತಮ್ಮ ಪಾಸ್​ಪೋರ್ಟ್​ನ್ನು ಪೊಲೀಸರ ಎದುರು ಒಪ್ಪಿಸಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಆಸ್ಪತ್ರೆಗಳಿಗೆ ಭೇಟಿ ನೀಡಲಿರುವ ಅಮಿತ್​ ಷಾ ಜನವರಿ 26ರಂದು ನಡೆದ ಗಲಭೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪೊಲೀಸ್ ಸಿಬ್ಬಂದಿಯನ್ನು ಇಂದು ಗೃಹ ಸಚಿವ ಅಮಿತ್​ ಷಾ ಭೇಟಿ ಮಾಡಲಿದ್ದಾರೆ. ಹಿಂಸಾಚಾರ ಸಂದರ್ಭದಲ್ಲಿ ಒಟ್ಟು 394 ಪೊಲೀಸರು ಗಾಯಗೊಂಡಿದ್ದರು. ಈ ನಿಟ್ಟಿನಲ್ಲಿ ಎರಡು ಆಸ್ಪತ್ರೆಗಳಿಗೆ ಅವರು ಭೇಟಿ ನೀಡಲಿದ್ದಾರೆ. ಅಲ್ಲಿಂದ ಕೆಂಪುಕೋಟೆಗೆ ತೆರಳಿ ಅಲ್ಲಿ ಉಂಟಾದ ಹಾನಿಯನ್ನು ಪರಿಶೀಲನೆ ಮಾಡಲಿದ್ದಾರೆ.

ಇದು ರೈತರ ಆಂದೋಲನ, ರೈತರ ಆಂದೋಲನವಾಗಿಯೇ ಉಳಿಯುತ್ತದೆ: ಮತ್ತೆ ಗುಡುಗಿದ ರಾಕೇಶ್ ಟಿಕಾಯತ್

Published On - 12:28 pm, Thu, 28 January 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ