AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ.26ರ ಹಿಂಸಾಚಾರದಲ್ಲಿ ಗಾಯಗೊಂಡ ಪೊಲೀಸರಿಂದ ಪ್ರತಿಭಟನೆ; ಕುಟುಂಬಸ್ಥರು, ನಿವೃತ್ತ ಸಿಬ್ಬಂದಿಯೂ ಭಾಗಿ

ನಮ್ಮ ಮೇಲಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದರು. ಆದರೆ ಅವರು ಯಾವುದನ್ನೂ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ತುಂಬ ಆಕ್ರಮಣಕಾರಿ ಮನೋಭಾವದಲ್ಲಿದ್ದು,  ಬ್ಯಾರಿಕೇಡ್​ಗಳನ್ನು ಮುರಿದರು ಎಂದು ಹೆಡ್​ ಕಾನ್ಸ್​ಟೆಬಲ್​ ಸುನೀತಾ ತಿಳಿಸಿದ್ದಾರೆ.

ಜ.26ರ ಹಿಂಸಾಚಾರದಲ್ಲಿ ಗಾಯಗೊಂಡ ಪೊಲೀಸರಿಂದ ಪ್ರತಿಭಟನೆ; ಕುಟುಂಬಸ್ಥರು, ನಿವೃತ್ತ ಸಿಬ್ಬಂದಿಯೂ ಭಾಗಿ
ಪ್ರತಿಭಟನಾ ನಿರತ ಪೊಲೀಸ್​ ಸಿಬ್ಬಂದಿ
Lakshmi Hegde
| Edited By: |

Updated on: Jan 30, 2021 | 7:13 PM

Share

ದೆಹಲಿ: ಜನವರಿ 26ರಂದು ರೈತ ಪ್ರತಿಭಟನೆಯ ಹೆಸರಲ್ಲಿ ನಡೆದ ಹಿಂಸಾಚಾರದಲ್ಲಿ ಹಲವು ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ ಹಲವರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಹಾಗೆ, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮರಳಿದ ಪೊಲೀಸ್​ ಸಿಬ್ಬಂದಿ ತಮ್ಮ ಮೇಲೆ ನಡೆದ ದಾಳಿಯನ್ನು ಖಂಡಿಸಿ ಇಂದು ಶಹೀದಿ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದರು.

ಹಿಂಸಾಚಾರದಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿಯ ಕುಟುಂಬದವರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಹಾಗೇ ನಿವೃತ್ತ ಪೊಲೀಸ್ ಅಧಿಕಾರಿಗಳೂ ತಮ್ಮ ಕುಟುಂಬದೊಟ್ಟಿಗೆ ಭಾಗವಹಿಸಿದ್ದರು. ಪೊಲೀಸರ ಹಕ್ಕು ರಕ್ಷಣೆಗಾಗಿ ಸ್ಥಾಪಿತವಾದ ದೆಹಲಿ ಪೊಲೀಸ್ ಮಹಾಸಂಗ್ ಸಾಥ್​ ನೀಡಿದೆ.

ಈ ವೇಳೆ ಎಎನ್ಐ ಜತೆ ಮಾತನಾಡಿದ ಹೆಡ್​ ಕಾನ್​ಸ್ಟೆಬಲ್​ ಅಶೋಕ್ ಕುಮಾರ್​, ನಾನು ಅಂದು ಕೆಂಪುಕೋಟೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಅದರಲ್ಲೂ ಪ್ರವೇಶ ದ್ವಾರದ ಬಳಿಯೇ ಇದ್ದೆ. ಒಮ್ಮೆಲೇ ಪ್ರತಿಭಟನಾಕಾರರು ಗುಂಪುಗುಂಪಾಗಿ ಬಂದು, ರಾಷ್ಟ್ರಧ್ವಜದ ಪಕ್ಕದಲ್ಲೇ ಬಾವುಟ ಹಾರಿಸಿದರು. ನಮ್ಮ ಮೇಲೆಯೂ ದಾಳಿ ನಡೆಯಿತು. ಅವರ ಕೈಯಲ್ಲಿ ದೊಡ್ಡ ಬಡಿಗೆಗಳು, ಲಾಂಗ್​ಗಳು ಇದ್ದವರು. ನನ್ನ ತಲೆ ಹಾಗೂ ಕಾಲಿಗೆ ಗಾಯವಾಗಿತ್ತು ಎಂದು ಹೇಳಿದರು.

ಹೆಡ್​ ಕಾನ್ಸ್​ಟೆಬಲ್​ ಸುನೀತಾ ಪ್ರತಿಕ್ರಿಯಿಸಿ, ನಮ್ಮ ಮೇಲಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದರು. ಆದರೆ ಅವರು ಯಾವುದನ್ನೂ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ತುಂಬ ಆಕ್ರಮಣಕಾರಿ ಮನೋಭಾವದಲ್ಲಿದ್ದು,  ಬ್ಯಾರಿಕೇಡ್​ಗಳನ್ನು ಮುರಿದರು. ವಾಹನಗಳನ್ನೆಲ್ಲ ಧ್ವಂಸ ಮಾಡಿ, ನಮ್ಮ ಮೇಲೆ ಕೂಡ ಹಲ್ಲೆ ನಡೆಸಿದರು ಎಂದು ತಿಳಿಸಿದರು.

What Bengal Thinks Today| ರಾಜಕೀಯ ಸಂಘರ್ಷಕ್ಕಿಳಿದರೆ ಅಭಿವೃದ್ಧಿ ಸೋಲುವುದು ಗ್ಯಾರೆಂಟಿ-ರಾಜ್ಯಪಾಲ ಧನಕರ್​

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು