AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಸ್​​ಕ್ಲಿಕ್​​ನ ಮಾಜಿ ಸಿಬ್ಬಂದಿಯ ಕೇರಳದಲ್ಲಿರುವ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

ನ್ಯೂಸ್‌ಕ್ಲಿಕ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಜೊತೆಗಿನ ಸಂಬಂಧದ ಬಗ್ಗೆ  ಪ್ರಶ್ನಿಸಲಾಯಿತು. ರೈತರ ಪ್ರತಿಭಟನೆಗಳು, ನಾಗರಿಕರ ರಾಷ್ಟ್ರೀಯ ವಿರೋಧಿ ನೋಂದಣಿ-ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆಗಳು (NRC-CAA) ಅಥವಾ ಕೇಂದ್ರದ ಕೋವಿಡ್ -19 ನಿರ್ವಹಣೆಯ ಬಗ್ಗೆ ಅವರು ವರದಿ ಮಾಡಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಕೇಳಲಾಯಿತು ಎಂದು ಪೌಲ್ ಹೇಳಿದ್ದಾರೆ.

ನ್ಯೂಸ್​​ಕ್ಲಿಕ್​​ನ ಮಾಜಿ ಸಿಬ್ಬಂದಿಯ ಕೇರಳದಲ್ಲಿರುವ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ
ಅನುಷಾ ಪೌಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Oct 07, 2023 | 2:26 PM

Share

ದೆಹಲಿ ಅಕ್ಟೋಬರ್ 07: ನ್ಯೂಸ್‌ಕ್ಲಿಕ್‌ನ (NewsClick) ಮೇಲೆ ದಾಳಿ ಆರಂಭಿಸಿರುವ ದೆಹಲಿ ಪೊಲೀಸರು(Delhi Police), ನ್ಯೂಸ್ ಪೋರ್ಟಲ್‌ನ ಮಾಜಿ ಉದ್ಯೋಗಿ, ಕೇರಳದ ಪತ್ತನಂತಿಟ್ಟದ ಕೊಡುಮಣ್ ಬಳಿಯಲ್ಲಿ ನೆಲೆಸಿರುವ  ಅನುಷಾ ಪೌಲ್ (Anusha Paul) ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಅವರ ಲ್ಯಾಪ್‌ಟಾಪ್ ಮತ್ತು ಫೋನ್ ಅನ್ನು ಪರಿಶೀಲನೆಗಾಗಿ ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದೆಹಲಿ ಪೊಲೀಸರ ಮೂವರು ಸದಸ್ಯರ ತಂಡ ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದೆ ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದೆ ಎಂದು ಪೌಲ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ನ್ಯೂಸ್‌ಕ್ಲಿಕ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಜೊತೆಗಿನ ಸಂಬಂಧದ ಬಗ್ಗೆ  ಪ್ರಶ್ನಿಸಲಾಯಿತು. ರೈತರ ಪ್ರತಿಭಟನೆಗಳು, ನಾಗರಿಕರ ರಾಷ್ಟ್ರೀಯ ವಿರೋಧಿ ನೋಂದಣಿ-ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆಗಳು (NRC-CAA) ಅಥವಾ ಕೇಂದ್ರದ ಕೋವಿಡ್ -19 ನಿರ್ವಹಣೆಯ ಬಗ್ಗೆ ಅವರು ವರದಿ ಮಾಡಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಕೇಳಲಾಯಿತು ಎಂದು ಪೌಲ್ ಹೇಳಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಮತ್ತು ಆರೆಸ್ಸೆಸ್ ವಿರುದ್ಧ ಧ್ವನಿ ಎತ್ತುತ್ತಿದ್ದ ಸಂಸ್ಥೆ ಮತ್ತು ಅದರ ಉದ್ಯೋಗಿಗಳಿಗೆ ಬೆದರಿಕೆ ಹಾಕುವುದಕ್ಕಾಗಿ ಈ ರೀತಿ ಬೇಟೆಯಾಡಲಾಗುತ್ತಿದೆ ಎಂದು ಪೌಲ್ ಹೇಳಿದ್ದಾರೆ.

ಕುಟುಂಬದ ಆಪ್ತರೊಬ್ಬರ  ಚಿಕಿತ್ಸೆಗಾಗಿ ಪೌಲ್ ಕೇರಳದಲ್ಲಿ ನೆಲೆಸಿದ್ದರು. ಸಿಪಿಐ(ಎಂ)ನ ದೆಹಲಿ ರಾಜ್ಯ ಕಾರ್ಯದರ್ಶಿ ಕೆಎಂ ತಿವಾರಿ ಅವರನ್ನು ಗೊತ್ತಾ ಎಂದು ಎಂದು ದೆಹಲಿ ಪೊಲೀಸರು ತನ್ನನ್ನು ಕೇಳಿದರು. ನನಗೆ ಅವರನ್ನು ಗೊತ್ತು ಎಂದು ಹೇಳಿದೆ. ಅವರು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿದ್ದಾರೆ. ನಾನು ಸಿಪಿಐ(ಎಂ) ಕಾರ್ಯಕರ್ತೆ. ನಾನು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾದ (ಡಿವೈಎಫ್‌ಐ) ದೆಹಲಿ ಘಟಕದ ರಾಜ್ಯ ಸಮಿತಿಯ ಸದಸ್ಯೆ ಮತ್ತು ಅದರ ರಾಜ್ಯ ಖಜಾಂಚಿ ಎಂದು ಹೇಳಿದೆ ಎಂದಿದ್ದಾರೆ ಪೌಲ್.

ಆದರೆ ಕೇರಳ ಪೊಲೀಸರು ದಾಳಿ ತಂಡದ ಭಾಗವಾಗಿರಲಿಲ್ಲ. ಒಟ್ಟು 46 ಪತ್ರಕರ್ತರು ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗೆ ಕೊಡುಗೆ ನೀಡಿದವರನ್ನು ವಿಚಾರಣೆಗೊಳಪಡಿಸಿದ ನಂತರ ಮಂಗಳವಾರ ಸಂಜೆ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರ ವಿಶೇಷ ಸೆಲ್ ಬಂಧಿಸಿದೆ.

ಶುಕ್ರವಾರ, ವಿಶೇಷ ಸೆಲ್ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಿಷ್ಠ ಎಂಟು ಪತ್ರಕರ್ತರು ಮತ್ತು ನ್ಯೂಸ್‌ಕ್ಲಿಕ್‌ಗೆ ಕೊಡುಗೆದಾರರನ್ನು ವಾರದಲ್ಲಿ ಎರಡನೇ ಬಾರಿಗೆ ಪ್ರಶ್ನಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಮಧ್ಯಾಹ್ನ ಅವರನ್ನು ವಿಶೇಷ ಸೆಲ್ ಕಚೇರಿಗೆ ಕರೆಸಿ ತಡರಾತ್ರಿವರೆಗೂ ವಿಚಾರಣೆ ನಡೆಸಲಾಯಿತು.

ಇದನ್ನೂ ಓದಿನ್ಯೂಸ್‌ಕ್ಲಿಕ್ ಸಂಸ್ಥಾಪಕ, ಎಚ್ಆರ್ ಮುಖ್ಯಸ್ಥರ ಬಂಧನ ಪ್ರಕರಣ: ಪೊಲೀಸರ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ಮಂಗಳವಾರ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಒಟ್ಟು 46 ಪತ್ರಕರ್ತರು ಮತ್ತು ಕೊಡುಗೆದಾರರನ್ನು ಪ್ರಶ್ನಿಸಲಾಯಿತು ಮತ್ತು ಅವರ ಮೊಬೈಲ್ ಫೋನ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು.

ಮಂಗಳವಾರ ಮೊದಲ ಸುತ್ತಿನ ವಿಚಾರಣೆ ಬಳಿಕ ಎರಡನೇ ಬಾರಿಗೆ ಹಾಜರಾಗುವಂತೆ ತನಿಖಾಧಿಕಾರಿಗಳು ತಿಳಿಸಿದ್ದರು. ತನಿಖಾಧಿಕಾರಿಗಳು ಪ್ರತಿದಿನ 8 ರಿಂದ 10 ಪ್ರಕರಣಗಳೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ಪಿಟಿಐಗೆ ತಿಳಿಸಿವೆ.

ಗುರುವಾರ ತನಿಖಾ ಸಂಸ್ಥೆ ಪತ್ರಕರ್ತರಾದ ಊರ್ಮಿಳೇಶ್ ಮತ್ತು ಅಭಿಸರ್ ಶರ್ಮಾ ಮತ್ತು ಕೆಲವರನ್ನು ಎರಡನೇ ಬಾರಿಗೆ ಪ್ರಶ್ನಿಸಿತು. ಶುಕ್ರವಾರ, ಮಂಗಳವಾರ ಹಿರಿಯ ಪತ್ರಕರ್ತ ಪರಂಜಾಯ್ ಗುಹಾ ಠಾಕುರ್ತಾ ಅವರನ್ನು ಎರಡನೇ ಬಾರಿಗೆ ವಿಚಾರಣೆಗೆ ಕರೆಯಲಾಯಿತು.

ಗುಹಾ ಠಾಕುರ್ತಾ ಅವರು ನಗರದಿಂದ ಹೊರಗಿರುವ ಕಾರಣ ವಿಶೇಷ ಸೆಲ್ ಮುಂದೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಫೋನ್ ಮೂಲಕ ಪಿಟಿಐಗೆ ತಿಳಿಸಿದರು. ಈಗ ಸ್ಪೆಷಲ್ ಸೆಲ್ ಅಕ್ಟೋಬರ್ 10 ಅಥವಾ 11 ರಂದು ಬರಲು ಹೇಳಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:01 pm, Sat, 7 October 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ