AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ಜುಬೇರ್ ಬಂಧನಕ್ಕೆ ಕಾರಣನಾದ ಟ್ವಿಟರ್ ಬಳಕೆದಾರರ ಗುರುತು ಪತ್ತೆ, ಹೇಳಿಕೆ ದಾಖಲು

ನಮ್ಮ ಅಧಿಕಾರಿಗಳು ದೆಹಲಿ ನಿವಾಸಿಯಾಗಿರುವ ಬಳಕೆದಾರರನ್ನು ಸಂಪರ್ಕಿಸಿದ್ದಾರೆ. ಅವರ ಹೇಳಿಕೆಯನ್ನು ಜೂನ್ 30 ಅಥವಾ ಜುಲೈ 1 ರಂದು ದಾಖಲಿಸಲಾಗಿದೆ. ಇದು ನಮ್ಮ ತನಿಖಾ ಪ್ರಕ್ರಿಯೆಯ ಭಾಗವಾಗಿದೆ.

ಮೊಹಮ್ಮದ್ ಜುಬೇರ್ ಬಂಧನಕ್ಕೆ ಕಾರಣನಾದ ಟ್ವಿಟರ್ ಬಳಕೆದಾರರ ಗುರುತು ಪತ್ತೆ, ಹೇಳಿಕೆ ದಾಖಲು
ಮೊಹಮ್ಮದ್ ಜುಬೇರ್
TV9 Web
| Edited By: |

Updated on: Aug 31, 2022 | 12:44 PM

Share

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ (Mohammed Zubair) 2018 ರ ಟ್ವೀಟ್‌ನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರು ನೀಡಿ ಜುಬೇರ್ ಬಂಧನಕ್ಕೆ ಕಾರಣವಾದ ಟ್ವಿಟರ್ (Twitter) ಬಳಕೆದಾರರ ಹೇಳಿಕೆಯನ್ನು ದೆಹಲಿ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಜೂನ್‌ನಲ್ಲಿ ಜುಬೇರ್​​ನ್ನು ಬಂಧಿಸಿದ ಒಂದು ವಾರದ ನಂತರ ತನ್ನ ಹೇಳಿಕೆಯನ್ನು ದಾಖಲಿಸಲು ಪೊಲೀಸರು ದ್ವಾರಕಾ ನಿವಾಸಿಯಾದ ಟ್ವಿಟರ್ ಬಳಕೆದಾರರನ್ನು ಪತ್ತೆಹಚ್ಚಿದ್ದಾರೆ ಎಂದು ವಿಷಯ ತಿಳಿದ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾಗ ಜುಬೇರ್ 2018 ರ ಆಕ್ಷೇಪಾರ್ಹ ಟ್ವೀಟ್ ನೋಡಿದ್ದೇನೆ ಎಂದು ದೂರುದಾರರು ಹೇಳಿದ್ದಾರೆ. ಜೂನ್ 27 ರಂದು ಜುಬೇರ್ ಬಂಧನದ ಒಂದು ದಿನದ ನಂತರ ಅವರು ತಮ್ಮ ಟ್ವಿಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದರು.

ನಮ್ಮ ಅಧಿಕಾರಿಗಳು ದೆಹಲಿ ನಿವಾಸಿಯಾಗಿರುವ ಬಳಕೆದಾರರನ್ನು ಸಂಪರ್ಕಿಸಿದ್ದಾರೆ. ಅವರ ಹೇಳಿಕೆಯನ್ನು ಜೂನ್ 30 ಅಥವಾ ಜುಲೈ 1 ರಂದು ದಾಖಲಿಸಲಾಗಿದೆ. ಇದು ನಮ್ಮ ತನಿಖಾ ಪ್ರಕ್ರಿಯೆಯ ಭಾಗವಾಗಿದೆ. ವಿಚಾರಣೆಯ ಸಮಯದಲ್ಲಿ ಅವರನ್ನು ಮತ್ತೆ ಸಂಪರ್ಕಿಸಲಾಗುವುದು ಎಂದು ದೆಹಲಿ ಪೊಲೀಸ್‌ನ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ಘಟಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಜೂನ್‌ನಲ್ಲಿ ದೆಹಲಿ ಪೊಲೀಸರನ್ನು ಟ್ಯಾಗ್ ಮಾಡಿದ ಟ್ವಿಟರ್ ಬಳಕೆದಾರರು ದೆಹಲಿಯ ದ್ವಾರಕಾದಲ್ಲಿ ವಾಸಿಸುವ 36 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ರಾಜಸ್ಥಾನದ ಅಜ್ಮೀರ್‌ನವರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆತನ ಐಪಿ ವಿಳಾಸದ ಮೂಲಕ ಪತ್ತೆ ಹಚ್ಚಲಾಗಿದ್ದು, ಪೊಲೀಸರ ಮುಂದೆ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಜುಲೈನಲ್ಲಿ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದ ನಂತರ ಬಿಡುಗಡೆಯಾದ ಜುಬೇರ್ ವಿರುದ್ಧ ಐಎಫ್ಎಸ್ಒ ಸರಣಿ ಪ್ರಕರಣಗಳ ತನಿಖೆ ನಡೆಸುತ್ತಿದೆ.

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ