AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಮಹಿಳಾ ಸದಸ್ಯರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ; ಶಿವಸೇನಾ ಸಂಸದ ಸಂಜಯ್ ರಾವುತ್ ವಿರುದ್ಧ ಪ್ರಕರಣ ದಾಖಲು

Shiv Sena MP Sanjay ಈ ಪದ ಬಳಕೆಗಾಗಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಂದರೆ ಹಿಂದಿ ಡಿಕ್ಷನರಿಗಳ ಪ್ರಕಾರ ಅದರ ಅರ್ಥ ಮೂರ್ಖತನ. ಈ ನಡುವೆಯೂ ಪ್ರಕರಣ ದಾಖಲಾಗಿದ್ದರೆ ಅದು ನನ್ನ ಮೇಲೆ ಒತ್ತಡ ಹೇರುವ ಪ್ರಯತ್ನವಲ್ಲದೆ ಮತ್ತೇನೂ ಅಲ್ಲ! ಎಂದು ರಾವುತ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಮಹಿಳಾ ಸದಸ್ಯರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ; ಶಿವಸೇನಾ ಸಂಸದ ಸಂಜಯ್ ರಾವುತ್ ವಿರುದ್ಧ ಪ್ರಕರಣ  ದಾಖಲು
ಸಂಜಯ್ ರಾವುತ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 13, 2021 | 2:33 PM

ದೆಹಲಿ: ಬಿಜೆಪಿ (BJP) ಮಹಿಳಾ ಸದಸ್ಯರ  ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಶಿವಸೇನಾ ಸಂಸದ ಸಂಜಯ್ ರಾವುತ್  (Shiv Sena MP Sanjay Raut) ವಿರುದ್ಧ ಪೂರ್ವ ದೆಹಲಿಯ ಮಂಡವಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಬಿಜೆಪಿಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನೀಡಿದ ದೂರು ಸ್ವೀಕರಿಸಿದ ನಂತರ ಐಪಿಸಿ ಸೆಕ್ಷನ್ 509 (ಮಹಿಳೆಯರ ಗೌರವಕ್ಕೆ ಧಕ್ಕೆ ಬರುವಂತೆ ನಡೆದುಕೊಂಡಿದ್ದಕ್ಕೆ) ಮತ್ತು 500 (ಮಾನನಷ್ಟ) ಅಡಿಯಲ್ಲಿ ರಾವುತ್  ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಡಿಸೆಂಬರ್ 9 ರಂದು ಮರಾಠಿ ಸುದ್ದಿ ವಾಹಿನಿಯೊಂದರಲ್ಲಿ ಪ್ರಸಾರವಾದ ಸಂದರ್ಶನದಲ್ಲಿ ರಾವುತ್ ಅವರು “ಬಿಜೆಪಿ ರಾಜಕೀಯ ಕಾರ್ಯಕರ್ತರ ಪ್ರಾಣ ಮತ್ತು ಅಂಗಗಳ” ವಿರುದ್ಧ ಬೆದರಿಕೆ ಹಾಕಿದರು ಮತ್ತು ನಿಂದನೀಯ ಭಾಷೆಯನ್ನು ಬಳಸಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಹೇಳಿದ್ದಾರೆ. ಡಿಸೆಂಬರ್ 9 ರಂದು, ನಾನು ಟಿವಿಯಲ್ಲಿ ರಾವುತ್ ಅವರ ಸಂದರ್ಶನವನ್ನು ನೋಡುತ್ತಿದ್ದೆ. ಅವರು ಬಿಜೆಪಿಯ ಪಕ್ಷದ ಕಾರ್ಯಕರ್ತರ ಮೇಲೆ ಆಘಾತಕಾರಿ ಕಾಮೆಂಟ್​​ಗಳನ್ನು ಮಾಡಿದ್ದರು. ಅವರ ಸಂದರ್ಶನದಲ್ಲಿ ಅವರು ಎಲ್ಲಾ ಬಿಜೆಪಿ ಕಾರ್ಯಕರ್ತರನ್ನು ನಿಂದಿಸಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬಿಜೆಪಿಯ ಮಹಿಳಾ ಘಟಕವು ನಿಮ್ಮನ್ನು ಒತ್ತಾಯಿಸುತ್ತದೆ. ಅವರ ಹೇಳಿಕೆ ಅವಹೇಳನಕಾರಿ ಮಾತ್ರವಲ್ಲ, ಬಿಜೆಪಿಯ ಮಹಿಳಾ ಪಕ್ಷದ ಕಾರ್ಯಕರ್ತರ ಗೌರವದ ಬಗ್ಗೆ ಆಕ್ಷೇಪಾರ್ಹ ಟೀಕೆ ಮಾಡಿದ್ದಾರೆ ಎಂದು ಅವರು ಹೇಳಿದರು.

ಆಕೆಯ ದೂರನ್ನು ಸ್ವೀಕರಿಸಿದ ಪೊಲೀಸರು ಕಾನೂನು ಅಭಿಪ್ರಾಯ ಪಡೆದು ಶಿವಸೇನಾ ಸಂಸದರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಪದ ಬಳಕೆಯ ಮೇಲೆ ಎಫ್‌ಐಆರ್ ದಾಖಲಿಸಿರುವುದು ಅವರ ಮೇಲೆ ಒತ್ತಡ ಹೇರುವ ಪ್ರಯತ್ನವಾಗಿದೆ ಎಂದು ರಾವುತ್ ಹೇಳಿದ್ದಾರೆ. “ ಈ ಪದ ಬಳಕೆಗಾಗಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಂದರೆ ಹಿಂದಿ ಡಿಕ್ಷನರಿಗಳ ಪ್ರಕಾರ ಅದರ ಅರ್ಥ ಮೂರ್ಖತನ. ಈ ನಡುವೆಯೂ ಪ್ರಕರಣ ದಾಖಲಾಗಿದ್ದರೆ ಅದು ನನ್ನ ಮೇಲೆ ಒತ್ತಡ ಹೇರುವ ಪ್ರಯತ್ನವಲ್ಲದೆ ಮತ್ತೇನೂ ಅಲ್ಲ! ಅಂದಹಾಗೆ ಕೆಲವು ಬಿಜೆಪಿ ನಾಯಕರು ಮಹಿಳಾ ನಾಯಕರ ವಿರುದ್ಧ ಹೆಚ್ಚು ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ, ಅವರ ವಿರುದ್ಧ ಅಂತಹ ಎಫ್‌ಐಆರ್ ಕೇಳಿಲ್ಲ, ”ಎಂದು ರಾವುತ್ ಟ್ವೀಟ್‌ ಮಾಡಿದ್ದಾರೆ.

ಮಹಾರಾಷ್ಟ್ರದ ಕೆಲವು ಆಮದು ಮಾಡಿಕೊಂಡ ಬಿಜೆಪಿ ನಾಯಕರು ಬಾಲಿಶ ರಾಜಕಾರಣಕ್ಕಾಗಿ ಇಂತಹ ಪದಗಳನ್ನು ಬಳಸಲಾಗಿದೆ. ಆದರೆ ದೆಹಲಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ರಾವುತ್ ಹೇಳಿದರು. “ಇದು ಎಸ್‌ಎಸ್‌ಆರ್ (ಸುಶಾಂತ್ ಸಿಂಗ್ ರಜಪೂತ್) ಪ್ರಕರಣಕ್ಕೆ ಹೋಲುತ್ತದೆ, ಮುಂಬೈನಲ್ಲಿ ಏನಾಯಿತು ಎಂಬುದರ ಕುರಿತು ಪಟನಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಆಡಳಿತದಲ್ಲಿ ಕಾನೂನಿನ ಕೈಗಳು ಇಷ್ಟು ಉದ್ದವಾಗಿದೆಯೇ? ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: Kashi Vishwanath corridor ಕಾಶಿ ವಿಶ್ವನಾಥ ಕಾರಿಡಾರ್ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್