AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಪೊಲೀಸ್ ವಿಶೇಷ ದಳದಿಂದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಬಂಧನ

ದೆಹಲಿ ಪೊಲೀಸ್ ವಿಶೇಷ ದಳವು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅನೇಕ ಭಯೋತ್ಪಾದಕ ಘಟನೆಗಳಲ್ಲಿ ವಾಟೆಂಡ್ ವ್ಯಕ್ತಿ ಆಗಿದ್ದ.

ದೆಹಲಿ ಪೊಲೀಸ್ ವಿಶೇಷ ದಳದಿಂದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಬಂಧನ
ದೆಹಲಿ ಪೊಲೀಸ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 04, 2024 | 5:25 PM

Share

ದೆಹಲಿ ಜನವರಿ 04:  ಕಾಶ್ಮೀರದ (Kashmir) ಭಯೋತ್ಪಾದನೆ ಘಟನೆಗಳೊಂದಿಗೆ ಸಂಬಂಧ ಹೊಂದಿರುವ ಹಿಜ್ಬುಲ್ ಮುಜಾಹಿದ್ದೀನ್ (Hizbul Mujahideen) ಭಯೋತ್ಪಾದಕನನ್ನು ದೆಹಲಿ ಪೊಲೀಸ್ ವಿಶೇಷ ದಳ (Delhi Police Special Cell)ಗುರುವಾರ ಬಂಧಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ಭಯೋತ್ಪಾದಕ ಘಟನೆಗಳಲ್ಲಿ ಭಾಗಿಯಾಗಿರುವ ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಶಂಕಿತ ಕಾರ್ಯಕರ್ತನನ್ನು ದೆಹಲಿ ಪೊಲೀಸ್ ವಿಶೇಷ ದಳವು ಬಂಧಿಸಿದೆ.

ಪೊಲೀಸರ ಪ್ರಕಾರ, ಆರೋಪಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅನೇಕ ಭಯೋತ್ಪಾದಕ ಘಟನೆಗಳಲ್ಲಿ ವಾಟೆಂಡ್ ವ್ಯಕ್ತಿ ಆಗಿದ್ದ.

ಉಗ್ರನನ್ನು ಜಾವೇದ್ ಮಟ್ಟೂ ಎಂದು ಗುರುತಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹಲವಾರು ಭಯೋತ್ಪಾದಕ ಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಹೇಳಲಾಗಿದೆ. ಬಂಧಿತ ಉಗ್ರರ ಹುಡುಕಾಟದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ತೊಡಗಿತ್ತು.

ಜಾವೇದ್ ಅಹ್ಮದ್ ಮಟ್ಟೂ ಬಂಧಿಸಿದರೆ  5 ಲಕ್ಷ ರೂ  ಬಹುಮಾನ ಘೋಷಣೆ ಆಗಿತ್ತು. ಈತ ಸೋಪೋರ್ ನಿವಾಸಿಯಾಗಿದ್ದು, ಸೋಪೋರ್‌ನಲ್ಲಿರುವ ಆತನ ಸಹೋದರ ಕಳೆದ ವರ್ಷ ತ್ರಿವರ್ಣ ಧ್ವಜವನ್ನು ಬೀಸುತ್ತಿರುವ ವಿಡಿಯೊ ವೈರಲ್ ಆಗಿತ್ತು.

ಇದನ್ನೂ ಓದಿ:ಕಾಲುವೆ ಬಳಿ ಪೋಲೀಸ್ ಮೃತದೇಹ ಪತ್ತೆ; 48 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪಂಜಾಬ್ ಪೊಲೀಸ್ 

ಈ ಬಂಧನವು ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪವನ್ನು ಪರಿಗಣಿಸಿ ಗಮನಾರ್ಹ ಪರಿಣಾಮಗಳನ್ನು ಹೊಂದಿದೆ. ಅವರ ಚಟುವಟಿಕೆಗಳೊಂದಿಗೆ ಪಾಕಿಸ್ತಾನಕ್ಕೂ ಈ ಹಿಂದೆ ಸಂಬಂಧವಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Thu, 4 January 24

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK