AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ಬೆಂಬಲಿಸಿ ರಾಷ್ಟ್ರಪತಿ ಭೇಟಿಗೆ ತೆರಳಿದ ನಿಯೋಗ; ಪ್ರಿಯಾಂಕಾ ಗಾಂಧಿ ವಶಕ್ಕೆ ಪಡೆದು, ಬಿಡುಗಡೆ

ನೂತನ ಕೃಷಿ ಕಾಯ್ದೆಗಳನ್ನು ವಿರುದ್ಧ ಎರಡು ಕೋಟಿ ಸಹಿ ಸಂಗ್ರಹಿಸಿ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್​ರಿಗೆ ಸಲ್ಲಿಸಲು ಹೊರಟಿದ್ದ ಕಾಂಗ್ರೆಸ್ ನಿಯೋಗದ ಪ್ರಿಯಾಂಕಾ ಗಾಂಧಿ ಮತ್ತು ಇತರ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದ್ದಾರೆ.

Delhi Chalo ಬೆಂಬಲಿಸಿ ರಾಷ್ಟ್ರಪತಿ ಭೇಟಿಗೆ ತೆರಳಿದ ನಿಯೋಗ; ಪ್ರಿಯಾಂಕಾ ಗಾಂಧಿ ವಶಕ್ಕೆ ಪಡೆದು, ಬಿಡುಗಡೆ
ದೆಹಲಿ ಪೊಲೀಸರ ವಶದಲ್ಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ
guruganesh bhat
|

Updated on:Dec 24, 2020 | 12:45 PM

Share

ದೆಹಲಿ: ನೂತನ ಕೃಷಿ ಕಾಯ್ದೆಗಳ ವಿರುದ್ಧ ಎರಡು ಕೋಟಿ ಸಹಿ ಸಂಗ್ರಹಿಸಿ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್​ರಿಗೆ ಸಲ್ಲಿಸಲು ಹೊರಟಿದ್ದ ಕಾಂಗ್ರೆಸ್ ನಿಯೋಗದ ಪ್ರಿಯಾಂಕಾ ಗಾಂಧಿ ಮತ್ತು ಇತರ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದ್ದಾರೆ.

ಪ್ರತಿಭಟನಾ ಱಲಿಗೆ ಅನುಮತಿ ನೀಡಿರಲಿಲ್ಲ. ಆದರೂ ಕಾಂಗ್ರೆಸ್ ನಿಯೋಗ ಱಲಿ ಮೂಲಕ ತೆರಳುತ್ತಿದ್ದರು. ಹೀಗಾಗಿ, ಪ್ರಿಯಾಂಕಾ ಗಾಂಧಿ ಸೇರಿ ಇತರರನ್ನು ವಶಕ್ಕೆ ಪಡೆಯಲಾಗಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ವಿರೋಧಿಸುವವರೆಲ್ಲ ಭಯೋತ್ಪಾದಕರೆಂದು ಬಿಂಬಿಸಲಾಗುತ್ತಿದೆ ಸರ್ಕಾರದ ನಿರ್ಣಯಗಳ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸುವವರನ್ನು ಭಯೋತ್ಪಾದರೆಂದು ಬಿಂಬಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಳವಳಿ ನಿರತ ರೈತರನ್ನು ದೇಶದ್ರೋಹಿಗಳೆಂದು ಕರೆಯಲಾಗುತ್ತಿದೆ.ಚಳವಳಿ ನಿರತ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಮೆರವಣಿಗೆ ಆಯೋಜಿಸಿದ್ದೆವು. ಪ್ರಜಾಪ್ರಭುತ್ವ ಪದ್ಧತಿಯಿಂದಲೇ ಆಯ್ಕೆಯಾದ ಸಂಸದರಿದ್ದ ನಿಯೋಗವನ್ನು ರಾಷ್ಟ್ರಪತಿಗಳ ಭೇಟಿಯಿಂದ ತಡೆಹಿಡಿಯಲಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಅವರು ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ರಾಷ್ಟ್ರಪತಿ ಭವನ ತಲುಪಿದ ರಾಹುಲ್ ಗಾಂಧಿ ನಿಯೋಗದಲ್ಲಿ ರಾಹುಲ್ ಗಾಂಧಿ, ಗುಲಾಂ ನಬೀ ಆಜಾದ್ ಮತ್ತಿತರ ನಾಯಕರು ರಾಷ್ಟ್ರಪತಿ ಭವನ ತಲುಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಂಡವಾಳಶಾಹಿಗಳ ಪರ ನಿಂತು ಚಳವಳಿ ನಿರತ ರೈತರನ್ನು ಭಯೋತ್ಪಾದಕರಂತೆ ಬಿಂಬಿಸುತ್ತಿದ್ದಾರೆ.

ಆದರೆ, ವಿಪಕ್ಷಗಳು ರೈತರ ಪರ ಸದಾ ನಿಲ್ಲಲಿವೆ. ರಾಷ್ಟ್ರಪತಿಗಳ ಬಳಿ ‘ನೂತನ ಕೃಷಿ ಕಾಯ್ದೆಗಳು ರೈತರಿಗೆ ತೊಂದರೆ ಉಂಟುಮಾಡಲಿವೆ. ಇಡೀ ದೇಶದ ರೈತರೇ ಈ ಕಾಯ್ದೆಗಳ ವಿರುದ್ಧ ಬಂಡೆದಿದ್ದಾರೆ’ ಎಂದು ತಿಳಿಸಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದರು.

Published On - 12:42 pm, Thu, 24 December 20

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್