AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ, ಫೆ.20ರಂದು ದೆಹಲಿ ಸಿಎಂ ಪ್ರಮಾಣವಚನ ಸಾಧ್ಯತೆ

ದೆಹಲಿಯಲ್ಲಿ ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ. ಇದೇ ಫೆಬ್ರವರಿ 20ರಂದು ದೆಹಲಿಯಲ್ಲಿ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬಿ.ಎಲ್. ಸಂತೋಷ್ ಪಕ್ಷದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಿಜೆಪಿ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವೀರೇಂದ್ರ ಸಚ್‌ದೇವ, ರಾಜ್ಯ ಸಂಘಟನಾ ಸಚಿವ ಪವನ್ ರಾಣಾ ಮತ್ತು ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ, ಫೆ.20ರಂದು ದೆಹಲಿ ಸಿಎಂ ಪ್ರಮಾಣವಚನ ಸಾಧ್ಯತೆ
ಬಿಜೆಪಿImage Credit source: Britannica
Follow us
ನಯನಾ ರಾಜೀವ್
|

Updated on: Feb 17, 2025 | 8:05 AM

ದೆಹಲಿಯಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ. ಈ ಸಭೆಯನ್ನು ಸೋಮವಾರ ಮಧ್ಯಾಹ್ನ 3 ಗಂಟೆಗೆ ಕರೆಯಲಾಗಿತ್ತು. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಅಂದರೆ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಬೇಕಾಗಿತ್ತು. ಇದರೊಂದಿಗೆ, ಪ್ರಮಾಣ ವಚನ ಸಮಾರಂಭವನ್ನೂ ಈಗ ಮುಂದೂಡಲಾಗಿದೆ.

ಈಗ ಮುಂದಿನ ಸಭೆ ಫೆಬ್ರವರಿ 19 ರಂದು ನಡೆಯಬಹುದು ಮತ್ತು ಪ್ರಮಾಣ ವಚನ ಸ್ವೀಕಾರ 20 ರಂದು ನಡೆಯಬಹುದು. ತಡರಾತ್ರಿ ಬಿ.ಎಲ್. ಸಂತೋಷ್ ಪಕ್ಷದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಿಜೆಪಿ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವೀರೇಂದ್ರ ಸಚ್‌ದೇವ, ರಾಜ್ಯ ಸಂಘಟನಾ ಸಚಿವ ಪವನ್ ರಾಣಾ ಮತ್ತು ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಶಾಸಕರು ದೆಹಲಿಯಲ್ಲಿಯೇ ಇರಲು ಸೂಚನೆ ಎಲ್ಲಾ ಬಿಜೆಪಿ ಶಾಸಕರನ್ನು ನಾಳೆ ದೆಹಲಿಯಲ್ಲಿಯೇ ಇರಲು ಕೇಳಲಾಗಿದೆ, ಇದರರ್ಥ ಹೈಕಮಾಂಡ್ ಸಮಯದ ಬಗ್ಗೆ ಏನನ್ನೂ ಹೇಳಿಲ್ಲ. ಸದ್ಯಕ್ಕೆ ನಾಳೆಗೆ ಯಾವುದೇ ಸೂಚನೆಗಳಿಲ್ಲ.

ಮತ್ತಷ್ಟು ಓದಿ: ದೆಹಲಿ ಚುನಾವಣೆ ಫಲಿತಾಂಶ: ಎಎಪಿ ಸೋಲಿನ ಬಗ್ಗೆ ಅರವಿಂದ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ಹೀಗಿದೆ ನೋಡಿ

ಮುಖ್ಯಮಂತ್ರಿ ಮತ್ತು ಸಚಿವ ಸ್ಥಾನಕ್ಕಾಗಿ ಹೊಸದಾಗಿ ಆಯ್ಕೆಯಾದ ಹಲವಾರು ಶಾಸಕರ ಹೆಸರುಗಳು ಚರ್ಚೆಯಾಗುತ್ತಿವೆ . ಪರ್ವೇಶ್ ವರ್ಮಾ, ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷ ವಿಜೇಂದರ್ ಗುಪ್ತಾ ಮತ್ತು ಸತೀಶ್ ಉಪಾಧ್ಯಾಯ ಅವರು ಉನ್ನತ ಹುದ್ದೆಗೆ ಮುಂಚೂಣಿಯಲ್ಲಿರುವವರೆಂದು ಪರಿಗಣಿಸಲಾಗಿದೆ.

ಪವನ್ ಶರ್ಮಾ, ಆಶಿಶ್ ಸೂದ್, ರೇಖಾ ಗುಪ್ತಾ ಮತ್ತು ಶಿಖಾ ರೈ ಸೇರಿದಂತೆ ಇತರರು ಮುಖ್ಯಮಂತ್ರಿ ಹುದ್ದೆಗೆ ಆಕಾಂಕ್ಷಿಗಳಾಗಿದ್ದಾರೆ. ರಾಜಸ್ಥಾನ, ಹರಿಯಾಣ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢಗಳಂತೆ, ಬಿಜೆಪಿ ನಾಯಕತ್ವವು ಹೊಸದಾಗಿ ಆಯ್ಕೆಯಾದ ಶಾಸಕರಲ್ಲಿ ಒಬ್ಬರ ಮೇಲೆ ಪಣತೊಡಬಹುದು ಎಂದು ಪಕ್ಷದ ಅನೇಕ ನಾಯಕರು ನಂಬಿದ್ದಾರೆ.

26 ವರ್ಷಗಳ ನಂತರ ಬಿಜೆಪಿ ಸರ್ಕಾರ ರಚಿಸಲಿದೆ ಫೆಬ್ರವರಿ 5 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ 26 ವರ್ಷಗಳಿಗಿಂತಲೂ ಹೆಚ್ಚು ಸಮಯದ ನಂತರ ಬಿಜೆಪಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದೆ. ಭರ್ಜರಿ ಗೆಲುವಿನೊಂದಿಗೆ, ಬಿಜೆಪಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) 10 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿತು. ದೆಹಲಿಯ 70 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ