AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ – ಪುಣೆ ವಿಸ್ತಾರಾ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ ಕರೆ; ಆಮೇಲೇನಾಯ್ತು?

ಗುರುಗ್ರಾಮ್‌ನಲ್ಲಿರುವ ದೆಹಲಿ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (DIAL) ಕಂಟ್ರೋಲ್ ರೂಮ್‌ಗೆ ಬೆದರಿಕೆ ಕರೆ ಬಂದಿತ್ತು. ತಕ್ಷಣವೇ ಆ ಕುರಿತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮೂಲಕ ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಸಂದೇಶ ರವಾನಿಸಲಾಗಿತ್ತು ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ - ಪುಣೆ ವಿಸ್ತಾರಾ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ ಕರೆ; ಆಮೇಲೇನಾಯ್ತು?
ವಿಸ್ತಾರಾ ಏರ್‌ಲೈನ್ಸ್ ವಿಮಾನ
ಗಣಪತಿ ಶರ್ಮಾ
|

Updated on: Aug 18, 2023 | 7:49 PM

Share

ನವದೆಹಲಿ, ಆಗಸ್ಟ್ 18: ದೆಹಲಿ – ಪುಣೆ ಮಧ್ಯೆ ಸಂಚರಿಸುವ ವಿಸ್ತಾರಾ ಏರ್‌ಲೈನ್ಸ್ (Vistara Airlines) ವಿಮಾನಕ್ಕೆ ಶುಕ್ರವಾರ ಬಾಂಬ್ ಬೆದರಿಕೆ (Bomb Threat) ಕರೆ ಬಂದ ಕಾರಣ ಕೆಲ ಕಾಲ ಆತಂಕದ ಸನ್ನಿವೇಶ ಸೃಷ್ಟಿಯಾಯಿತು. ಬೆದರಿಕೆ ಕರೆ ಬಂದ ಕಾರಣ ಸುಮಾರು 8 ಗಂಟೆ ಕಾಲ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ನಿಲ್ಲುವಂತಾಯಿತು. ನಂತರ ಅದು ಹುಸಿ ಬೆದರಿಕೆ ಎಂಬುದು ತಿಳಿದುಬಂದಿದೆ ಎಂದು ಭದ್ರತಾ ಮೂಲಗಳು ಮತ್ತು ಪೊಲೀಸರು ತಿಳಿಸಿದ್ದಾರೆ. ಪುಣೆಗೆ ಹೊರಡಬೇಕಿದ್ದ ವಿಮಾನಕ್ಕೆ ಬೆಳಗ್ಗೆ 7:38 ಕ್ಕೆ ಬಾಂಬ್ ದಳಿ ಬೆದರಿಕೆ ಕರೆ ಬಂದಿದೆ. ನಂತರ ವ್ಯಾಪಕ ಭದ್ರತಾ ತಪಾಸಣೆಗಳನ್ನು ನಡೆಸಿ, ಮಧ್ಯಾಹ್ನ 2:15 ಕ್ಕೆ ಅದು ಹುಸಿ ಕರೆ ಎಂದು ಘೋಷಿಸಿಸಲಾಯಿತು.

ಬಾಂಬ್ ದಾಳಿ ಬೆದರಿಕೆ ಕರೆಯ ಪರಿಣಾಮ ಬೆಳಿಗ್ಗೆ 8:30 ಕ್ಕೆ ಹೊರಡಬೇಕಿದ್ದ ಯುಕೆ971 ವಿಮಾನವು ಸಂಜೆ 4.30 ಕ್ಕೆ ಹೊರಟಿತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನದಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ಐವರು ಕ್ಯಾಬಿನ್ ಸಿಬ್ಬಂದಿ ಇದ್ದರು ಎಂದು ಮೂಲಗಳು ತಿಳಿಸಿವೆ. ಭದ್ರತಾ ತಪಾಸಣೆಯಿಂದಾಗಿ ವಿಮಾನ ಸಂಚಾರ ವಿಳಂಬವಾಗಿದೆ ಎಂದು ವಿಸ್ತಾರಾ ಏರ್​​​ಲೈನ್ಸ್ ಪ್ರಕಟಣೆ ತಿಳಿಸಿದೆ.

ಗುರುಗ್ರಾಮ್‌ನಲ್ಲಿರುವ ದೆಹಲಿ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (DIAL) ಕಂಟ್ರೋಲ್ ರೂಮ್‌ಗೆ ಬೆದರಿಕೆ ಕರೆ ಬಂದಿತ್ತು. ತಕ್ಷಣವೇ ಆ ಕುರಿತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮೂಲಕ ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಸಂದೇಶ ರವಾನಿಸಲಾಗಿತ್ತು ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸೀಲಿಂಗ್ ಫ್ಯಾನ್​ಗೆ ಸ್ಪ್ರಿಂಗ್! ಆತ್ಮಹತ್ಯೆಗೆ ತಡೆಗೆ ರಾಜಸ್ಥಾನದ ಕೋಟಾ ಹಾಸ್ಟೆಲ್​​​ಗಳಿಂದ ಹೊಸ ಪ್ರಯೋಗ​

ಆ ನಂತರ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಶೋಧ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು.

ಮೂರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ

ಗೇಟ್ ಸಂಖ್ಯೆ 42 ರಲ್ಲಿ ನಿಲುಗಡೆ ಮಾಡಲಾದ ಯುಕೆ971 ವಿಮಾನದಲ್ಲಿ ಮೂರು ಬಾಂಬ್‌ಗಳನ್ನು ಇರಿಸಲಾಗಿದೆ ಮತ್ತು ಅವು ಒಂದು ಗಂಟೆಯಲ್ಲಿ ಸ್ಫೋಟಗೊಳ್ಳಲಿವೆ ಎಂದು ಬೆದರಿಕೆ ಕರೆಯಲ್ಲಿ ತಿಳಿಸಲಾಗಿತ್ತು. ತಕ್ಷಣವೇ ದೂರವಾಣಿ ಕರೆ ಕಟ್ ಆಗಿತ್ತು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್