AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ – ಪುಣೆ ವಿಸ್ತಾರಾ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ ಕರೆ; ಆಮೇಲೇನಾಯ್ತು?

ಗುರುಗ್ರಾಮ್‌ನಲ್ಲಿರುವ ದೆಹಲಿ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (DIAL) ಕಂಟ್ರೋಲ್ ರೂಮ್‌ಗೆ ಬೆದರಿಕೆ ಕರೆ ಬಂದಿತ್ತು. ತಕ್ಷಣವೇ ಆ ಕುರಿತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮೂಲಕ ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಸಂದೇಶ ರವಾನಿಸಲಾಗಿತ್ತು ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ - ಪುಣೆ ವಿಸ್ತಾರಾ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ ಕರೆ; ಆಮೇಲೇನಾಯ್ತು?
ವಿಸ್ತಾರಾ ಏರ್‌ಲೈನ್ಸ್ ವಿಮಾನ
ಗಣಪತಿ ಶರ್ಮಾ
|

Updated on: Aug 18, 2023 | 7:49 PM

Share

ನವದೆಹಲಿ, ಆಗಸ್ಟ್ 18: ದೆಹಲಿ – ಪುಣೆ ಮಧ್ಯೆ ಸಂಚರಿಸುವ ವಿಸ್ತಾರಾ ಏರ್‌ಲೈನ್ಸ್ (Vistara Airlines) ವಿಮಾನಕ್ಕೆ ಶುಕ್ರವಾರ ಬಾಂಬ್ ಬೆದರಿಕೆ (Bomb Threat) ಕರೆ ಬಂದ ಕಾರಣ ಕೆಲ ಕಾಲ ಆತಂಕದ ಸನ್ನಿವೇಶ ಸೃಷ್ಟಿಯಾಯಿತು. ಬೆದರಿಕೆ ಕರೆ ಬಂದ ಕಾರಣ ಸುಮಾರು 8 ಗಂಟೆ ಕಾಲ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ನಿಲ್ಲುವಂತಾಯಿತು. ನಂತರ ಅದು ಹುಸಿ ಬೆದರಿಕೆ ಎಂಬುದು ತಿಳಿದುಬಂದಿದೆ ಎಂದು ಭದ್ರತಾ ಮೂಲಗಳು ಮತ್ತು ಪೊಲೀಸರು ತಿಳಿಸಿದ್ದಾರೆ. ಪುಣೆಗೆ ಹೊರಡಬೇಕಿದ್ದ ವಿಮಾನಕ್ಕೆ ಬೆಳಗ್ಗೆ 7:38 ಕ್ಕೆ ಬಾಂಬ್ ದಳಿ ಬೆದರಿಕೆ ಕರೆ ಬಂದಿದೆ. ನಂತರ ವ್ಯಾಪಕ ಭದ್ರತಾ ತಪಾಸಣೆಗಳನ್ನು ನಡೆಸಿ, ಮಧ್ಯಾಹ್ನ 2:15 ಕ್ಕೆ ಅದು ಹುಸಿ ಕರೆ ಎಂದು ಘೋಷಿಸಿಸಲಾಯಿತು.

ಬಾಂಬ್ ದಾಳಿ ಬೆದರಿಕೆ ಕರೆಯ ಪರಿಣಾಮ ಬೆಳಿಗ್ಗೆ 8:30 ಕ್ಕೆ ಹೊರಡಬೇಕಿದ್ದ ಯುಕೆ971 ವಿಮಾನವು ಸಂಜೆ 4.30 ಕ್ಕೆ ಹೊರಟಿತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನದಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ಐವರು ಕ್ಯಾಬಿನ್ ಸಿಬ್ಬಂದಿ ಇದ್ದರು ಎಂದು ಮೂಲಗಳು ತಿಳಿಸಿವೆ. ಭದ್ರತಾ ತಪಾಸಣೆಯಿಂದಾಗಿ ವಿಮಾನ ಸಂಚಾರ ವಿಳಂಬವಾಗಿದೆ ಎಂದು ವಿಸ್ತಾರಾ ಏರ್​​​ಲೈನ್ಸ್ ಪ್ರಕಟಣೆ ತಿಳಿಸಿದೆ.

ಗುರುಗ್ರಾಮ್‌ನಲ್ಲಿರುವ ದೆಹಲಿ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (DIAL) ಕಂಟ್ರೋಲ್ ರೂಮ್‌ಗೆ ಬೆದರಿಕೆ ಕರೆ ಬಂದಿತ್ತು. ತಕ್ಷಣವೇ ಆ ಕುರಿತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮೂಲಕ ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಸಂದೇಶ ರವಾನಿಸಲಾಗಿತ್ತು ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸೀಲಿಂಗ್ ಫ್ಯಾನ್​ಗೆ ಸ್ಪ್ರಿಂಗ್! ಆತ್ಮಹತ್ಯೆಗೆ ತಡೆಗೆ ರಾಜಸ್ಥಾನದ ಕೋಟಾ ಹಾಸ್ಟೆಲ್​​​ಗಳಿಂದ ಹೊಸ ಪ್ರಯೋಗ​

ಆ ನಂತರ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಶೋಧ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು.

ಮೂರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ

ಗೇಟ್ ಸಂಖ್ಯೆ 42 ರಲ್ಲಿ ನಿಲುಗಡೆ ಮಾಡಲಾದ ಯುಕೆ971 ವಿಮಾನದಲ್ಲಿ ಮೂರು ಬಾಂಬ್‌ಗಳನ್ನು ಇರಿಸಲಾಗಿದೆ ಮತ್ತು ಅವು ಒಂದು ಗಂಟೆಯಲ್ಲಿ ಸ್ಫೋಟಗೊಳ್ಳಲಿವೆ ಎಂದು ಬೆದರಿಕೆ ಕರೆಯಲ್ಲಿ ತಿಳಿಸಲಾಗಿತ್ತು. ತಕ್ಷಣವೇ ದೂರವಾಣಿ ಕರೆ ಕಟ್ ಆಗಿತ್ತು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ