AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19: ಮೇ ತಿಂಗಳಲ್ಲಿ ದೆಹಲಿ, ಪಂಜಾಬ್, ಉತ್ತರಾಖಂಡದಲ್ಲಿ ಅತೀ ಹೆಚ್ಚು ಸಾವು

ಭಾರತದಾದ್ಯಂತ 1,19,183 ಕೊವಿಡ್​ ಸಾವಿನ ಪ್ರಕರಣಗಳು ಅಧಿಕೃತವಾಗಿ ದಾಖಲಾಗಿವೆ. ಕೊವಿಡ್​ ಸಾಂಕ್ರಾಮಿಕ ಪ್ರಾರಂಭವಾದ ನಂತರ ಒಂದೇ ತಿಂಗಳಿನಲ್ಲಿ ದೇಶ ವರದಿ ಮಾಡಿದ ಗರಿಷ್ಠ ಸಂಖ್ಯೆ ಇದು.

Covid 19: ಮೇ ತಿಂಗಳಲ್ಲಿ ದೆಹಲಿ, ಪಂಜಾಬ್, ಉತ್ತರಾಖಂಡದಲ್ಲಿ ಅತೀ ಹೆಚ್ಚು ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 02, 2021 | 11:30 AM

Share

ದೆಹಲಿ: ಕಳೆದ ಮೇ ತಿಂಗಳಿನಲ್ಲಿ ದೆಹಲಿಯಲ್ಲಿ ಒಟ್ಟು ಶೇ.2.9ರಷ್ಟು ಕೊವಿಡ್​ ಸೋಂಕಿನ ಸಾವಿನ ಪ್ರಮಾಣ(ಸಿಎಫ್​ಆರ್​) ದಾಖಲಾಗಿದೆ. ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಮೇ ತಿಂಗಳಿನಲ್ಲಿ ಸಾವಿನ ಪ್ರಮಾಣ ಎರಡು ಪಟ್ಟು ಹೆಚ್ಚಾಗಿದೆ. ಹಾಗೂ ಪಂಜಾಬ್​ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಬಹುತೇಕ ಎರಡು ಪಟ್ಟು ಹೆಚ್ಚು ಕೊವಿಡ್​ ಪ್ರಕರಣಗಳು ದಾಖಲಾಗಿದೆ.

ಪಂಜಾಬ್​ ಶೇ 2.8 ಹಾಗೂ ಉತ್ತರಾಖಂಡ ಶೇ.2.7ರಷ್ಟು ಸಾವುಗಳನ್ನು ದಾಖಲಿಸಿದೆ. ಇದೇ ವೇಳೆ ಭಾರತದಾದ್ಯಂತ 1,19,183 ಕೊವಿಡ್​ ಸಾವಿನ ಪ್ರಕರಣಗಳು ಅಧಿಕೃತವಾಗಿ ದಾಖಲಾಗಿವೆ. ಕೊವಿಡ್​ ಸಾಂಕ್ರಾಮಿಕ ಪ್ರಾರಂಭವಾದ ನಂತರ ಒಂದೇ ತಿಂಗಳಿನಲ್ಲಿ ದೇಶ ವರದಿ ಮಾಡಿದ ಗರಿಷ್ಠ ಸಂಖ್ಯೆ ಇದು.

ಮೇ ತಿಂಗಳಿನಲ್ಲಿ ಕೊವಿಡ್​ ಸೋಂಕಿನ ಪ್ರಮಾಣವು ಅಸ್ಸಾಂನಲ್ಲಿ ಶೇ.61, ಉತ್ತರಾಖಂಡ ಶೇ.59, ಗೋವಾ ಶೇ.56, ಹಿಮಾಚಲ ಪ್ರದೇಶ ಶೇ.53 ಹಾಗೂ ಬಿಹಾರವು ಶೇ.50ರಷ್ಟು ಕೊವಿಡ್​ ಸಾವಿನ ಪ್ರಕರಣವನ್ನು ದಾಖಲಿಸಿದೆ.

ಮಹಾರಾಷ್ಟ್ರ ಮೇ ತಿಂಗಳಿನಲ್ಲಿ ಅತಿ ಹೆಚ್ಚು ಸಾವಿನ ಪ್ರಮಾಣವನ್ನು ದಾಖಲಿಸಿದೆ. ದೆಹಲಿಯು ನಾಲ್ಕನೇ ಸ್ಥಾನದಲ್ಲಿದೆ. ಹಾಗೆಯೇ ಕರ್ನಾಟಕ ರಾಜ್ಯದಲ್ಲಿ ಕೊವಿಡ್​ನಿಂದ 13,632 ಸಾವಿನ ಪ್ರಕರಣ(ಶೇ.47) ದಾಖಲಾಗಿದೆ. ಹಾಗೆಯೇ ತಮಿಳುನಾಡಿನಲ್ಲಿ 10,186 ಸಾವಿನ ಪ್ರಕರಣ(ಶೇ.42) ದಾಖಲಾಗಿದೆ. ಒಡಿಶಾ ರಾಜ್ಯವು 3.2ಲಕ್ಷ ಕೊವಿಡ್ ಪ್ರಕರಣಗಳನ್ನು ದಾಖಲಿಸಿದ್ದು, 711 ಸಾವು ಸಂಭವಿಸಿದೆ. ಜೂನ್​ ತಿಂಗಳ ಮೊದಲ ದಿನದಂದು ಭಾರತವು 1,33,212 ಹೊಸ ಪ್ರಕರಣಗಳನ್ನು ದಾಖಲಿಸಿದೆ.

ಇದನ್ನೂ ಓದಿ: 

ಆಕ್ಸಿಜನ್ ಕಾನ್ಸನ್​ಟ್ರೇಟರ್ ಆಮದು ಮೇಲೆ ಜಿಎಸ್​ಟಿ ರದ್ದು; ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

Published On - 11:29 am, Wed, 2 June 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ