AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಭಾರಿ ಮಳೆ, ಮನೆ ಕುಸಿದು ತಾಯಿ, ಮಕ್ಕಳು ಸೇರಿ ನಾಲ್ಕು ಮಂದಿ ಸಾವು

Delhi Rains: ದೆಹಲಿ-ಎನ್​ಸಿಆರ್​ನಲ್ಲಿ ಗುಡುಗು ಸಹಿತ ಮಳೆ(Rain)ಯಾಗುತ್ತಿದೆ. ನಜಾಫ್‌ಗಢ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯ ನಂತರ ಮನೆ ಕುಸಿದು ಓರ್ವ ಮಹಿಳೆ ಮತ್ತು ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಕೃಷಿ ಜಮೀನಿನಲ್ಲಿ ನಿರ್ಮಿಸಲಾದ ಮನೆಯ ಮೇಲೆ ಮರ ಬಿದ್ದು ಈ ದುರಂತ ಅಪಘಾತ ಸಂಭವಿಸಿದೆ.

ದೆಹಲಿಯಲ್ಲಿ ಭಾರಿ ಮಳೆ, ಮನೆ ಕುಸಿದು ತಾಯಿ, ಮಕ್ಕಳು ಸೇರಿ ನಾಲ್ಕು ಮಂದಿ ಸಾವು
ಮಳೆ
ನಯನಾ ರಾಜೀವ್
|

Updated on:May 02, 2025 | 9:59 AM

Share

ನವದೆಹಲಿ, ಮೇ 02: ದೆಹಲಿ-ಎನ್​ಸಿಆರ್​ನಲ್ಲಿ ಗುಡುಗು ಸಹಿತ ಮಳೆ(Rain)ಯಾಗುತ್ತಿದೆ. ನಜಾಫ್‌ಗಢ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯ ನಂತರ ಮನೆ ಕುಸಿದು ಓರ್ವ ಮಹಿಳೆ ಮತ್ತು ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಕೃಷಿ ಜಮೀನಿನಲ್ಲಿ ನಿರ್ಮಿಸಲಾದ ಮನೆಯ ಮೇಲೆ ಮರ ಬಿದ್ದು ಈ ದುರಂತ ಅಪಘಾತ ಸಂಭವಿಸಿದೆ.

ಮೃತರನ್ನು 26 ವರ್ಷದ ಜ್ಯೋತಿ ಮತ್ತು ಅವರ ಮೂವರು ಮಕ್ಕಳು ಎಂದು ಗುರುತಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಹಾಯದಿಂದ, ನಾಲ್ವರನ್ನೂ ಅವಶೇಷಗಳಿಂದ ಹೊರತೆಗೆದು ಜಾಫರ್‌ಪುರ ಕಲಾನ್‌ನ ಆರ್‌ಟಿಆರ್ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದರು. ಜ್ಯೋತಿ ಅವರ ಪತಿ ಅಜಯ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
Image
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
Image
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
Image
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ನಜಾಫ್‌ಗಢದ ಖಾರ್ಕರಿ ನಹರ್ ಗ್ರಾಮದಲ್ಲಿ ಬೆಳಗ್ಗೆ 5.25 ಕ್ಕೆ ಮನೆ ಕುಸಿದಿರುವ ಬಗ್ಗೆ ಕರೆ ಬಂದಿತ್ತು. ನಾವು ಸ್ಥಳದಲ್ಲೇ ಹಲವಾರು ತಂಡಗಳನ್ನು ನಿಯೋಜಿಸಿದ್ದೇವೆ ಮತ್ತು ನಾಲ್ವರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ:  ಬೆಂಗಳೂರಲ್ಲಿ ಇಂದು ಮಳೆ ಜೋರು, ಕರ್ನಾಟಕದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ದೆಹಲಿಯಲ್ಲಿ ಹಠಾತ್ ಪ್ರತಿಕೂಲ ಹವಾಮಾನದಿಂದಾಗಿ ಭಾರತ ಹವಾಮಾನ ಇಲಾಖೆ (ಐಎಂಡಿ) ನಗರಕ್ಕೆ ರೆಡ್ ಅಲರ್ಟ್ ಘೋಷಿಸಿದೆ. ನಗರದ ಹಲವಾರು ಭಾಗಗಳಲ್ಲಿ ನೀರು ನಿಂತಿರುವುದು ಮತ್ತು ಮರಗಳು ಧರೆಗುರುಳಿರುವ ಬಗ್ಗೆ ವರದಿಯಾಗಿದೆ. ಅಕಾಲಿಕ ಮಳೆಯಿಂದಾಗಿ, ದೆಹಲಿಯ ಅನೇಕ ಸ್ಥಳಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ನೀರು ನಿಂತಿದೆ. ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ದೆಹಲಿಯಲ್ಲಿ ನಿರಂತರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ದೆಹಲಿಯಲ್ಲಿ ಬೆಳಗಿನ ಜಾವ 3 ಗಂಟೆಯ ನಂತರ ತುಂತುರು ಮಳೆ ಪ್ರಾರಂಭವಾಯಿತು. ಮೊದಲಿಗೆ, ಐಟಿಒ, ಮಂಡಿ ಹೌಸ್ ಮತ್ತು ಮಧ್ಯ ದೆಹಲಿಯ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಪ್ರಾರಂಭವಾಯಿತು.

ಇದಾದ ನಂತರ, ಗಾಳಿಯ ತೀವ್ರತೆ ಹೆಚ್ಚಾಯಿತು. ಹವಾಮಾನ ಇಲಾಖೆಯ ಪ್ರಕಾರ, ಮೇ 1 ರಿಂದ ಮೇ 7 ರವರೆಗೆ ಬಿರುಗಾಳಿ ಮತ್ತು ಮಳೆಯಾಗುವ ನಿರೀಕ್ಷೆಯಿದೆ. ಇದರಿಂದಾಗಿ ತಾಪಮಾನವು 34 ಡಿಗ್ರಿ ತಲುಪುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:58 am, Fri, 2 May 25

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ