AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಜಲಪ್ರಳಯ; 15 ವಿಮಾನಗಳ ಮಾರ್ಗ ಬದಲಾವಣೆ, 50ಕ್ಕೂ ಹೆಚ್ಚು ವಿಮಾನಗಳು ವಿಳಂಬ

ದೆಹಲಿ ಹಾಗೂ ಸುತ್ತಮುತ್ತಲ ಎನ್‌ಸಿಆರ್ (NCR) ಪ್ರದೇಶಗಳಾದ ನೋಯ್ಡಾ, ಘಾಜಿಯಾಬಾದ್, ಗುರುಗ್ರಾಮ ಮತ್ತು ಫರೀದಾಬಾದ್‌ಗಳಲ್ಲಿ ಇಂದು ಭಾರಿ ಮಳೆ ಮತ್ತು ಬಿರುಗಾಳಿ ತೀವ್ರಗೊಂಡಿದೆ. ಭೀಕರ ಮಳೆಯಿಂದಾಗಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರ ವ್ಯತ್ಯಯಗೊಂಡಿದ್ದು, ಒಟ್ಟು 15 ವಿಮಾನಗಳನ್ನು ಇತರೆ ನಗರಗಳಿಗೆ ಮಾರ್ಗ ಬದಲಾಯಿಸಿ ಕಳುಹಿಸಲಾಗಿದೆ. ಇದರಿಂದ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಾಗಿದ್ದ ಪ್ರಯಾಣಿಕರು ಮತ್ತು ಅಲ್ಲಿಂದ ವಿಮಾನವೇರಲು ಕಾಯುತ್ತಿದ್ದ ಪ್ರಯಾಣಿಕರು ಪರದಾಡುವಂತಾಯಿತು.

ದೆಹಲಿಯಲ್ಲಿ ಜಲಪ್ರಳಯ; 15 ವಿಮಾನಗಳ ಮಾರ್ಗ ಬದಲಾವಣೆ, 50ಕ್ಕೂ ಹೆಚ್ಚು ವಿಮಾನಗಳು ವಿಳಂಬ
Delhi AirportImage Credit source: PTI
ಸುಷ್ಮಾ ಚಕ್ರೆ
|

Updated on: Aug 24, 2026 | 3:28 PM

Share

ನವದೆಹಲಿ, ಆಗಸ್ಟ್ 24: ದೆಹಲಿಯಲ್ಲಿ (Delhi Rains) ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದೆ. ಇದರಿಂದ ನಗರದೆಲ್ಲೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನರು ರಸ್ತೆಗಿಳಿಯಲೂ ಆಗದಂತಹ ಪರಿಸ್ಥಿತಿ ಇದೆ. ಇದರ ನಡುವೆ ಬಿರುಗಾಳಿಸಹಿತ ಮಳೆಯಿಂದ (Rainfall) ಇಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Indira Gandhi International Airport) ಕೂಡ ವಿಮಾನ ಕಾರ್ಯಾಚರಣೆಗೆ ತೀವ್ರ ಅಡಚಣೆಯಾಗಿದೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ 50ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದೆ. ಹಾಗೇ, 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಹವಾಮಾನ ವೈಪರೀತ್ಯದ ಕಾರಣದಿಂದಾಗಿ ದೆಹಲಿಗೆ ಆಗಮಿಸಬೇಕಿದ್ದ ಹಾಗೂ ನಿರ್ಗಮಿಸಬೇಕಿದ್ದ 3 ಅಂತಾರಾಷ್ಟ್ರೀಯ ವಿಮಾನಗಳು ಸೇರಿದಂತೆ ಸುಮಾರು 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ.

ಧಾರಾಕಾರ ಮಳೆಯಿಂದಾಗಿ ದೆಹಲಿಯಾದ್ಯಂತ ಭಾರಿ ಪ್ರಮಾಣದಲ್ಲಿ ನೀರು ನಿಂತು ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆಯು (IMD) ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ರೆಡ್ ಅಲರ್ಟ್ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ದೆಹಲಿ-ಎನ್‌ಸಿಆರ್ ಮತ್ತು ನೆರೆಯ ಪ್ರದೇಶಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಉತ್ತರಾಖಂಡ, ಒಡಿಶಾ ಮತ್ತು ತೆಲಂಗಾಣದ ಹಲವು ಭಾಗಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗುರುಗ್ರಾಮ ಮತ್ತು ಫರೀದಾಬಾದ್ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಗಿಂತ 18 ಪಟ್ಟು ದೊಡ್ಡದು: ಗಡಿಯಲ್ಲಿ 25,000 ಕಿ.ಮೀ ಉದ್ದದ ಮೆಗಾ ರಿಂಗ್ ರೋಡ್ ನಿರ್ಮಿಸುತ್ತಿದೆ ಚೀನಾ

ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ:

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಕಾರ್ಯಾಚರಣೆಗೆ ತೀವ್ರ ಅಡಚಣೆಯಾಗಿದೆ. 3 ಅಂತಾರಾಷ್ಟ್ರೀಯ ವಿಮಾನಗಳು ಸೇರಿದಂತೆ ಒಟ್ಟು 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಇವುಗಳಲ್ಲಿ 12 ವಿಮಾನಗಳನ್ನು ಜೈಪುರಕ್ಕೆ, 2 ವಿಮಾನಗಳನ್ನು ಚಂಡೀಗಢಕ್ಕೆ ಹಾಗೂ 1 ವಿಮಾನವನ್ನು ಲಕ್ನೋಗೆ ಕಳುಹಿಸಲಾಗಿದೆ.

ವಿಮಾನಯಾನ ಸಂಸ್ಥೆಗಳಿಂದ ಪ್ರಯಾಣಿಕರಿಗೆ ಸಲಹೆ:

ಸ್ಪೈಸ್‌ಜೆಟ್ ಸೇರಿದಂತೆ ಹಲವು ಪ್ರಮುಖ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಮುನ್ನೆಚ್ಚರಿಕಾ ಪ್ರಕಟಣೆ ಹೊರಡಿಸಿದ್ದು, ಕೆಟ್ಟ ಹವಾಮಾನವು ಸಂಪರ್ಕಿಸುವ (Connecting) ವಿಮಾನಗಳ ಮೇಲೆಯೂ ಪರಿಣಾಮ ಬೀರಬಹುದು ಎಂದು ಎಚ್ಚರಿಸಿವೆ. ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಯನ್ನು ಆನ್​ಲೈನ್​ನಲ್ಲಿ ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಸೆಪ್ಟೆಂಬರ್ 1ರಿಂದ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಬೋರ್ಡಿಂಗ್ ಪಾಸ್ ಸ್ಟಾಂಪಿಂಗ್ ಕಡ್ಡಾಯವಿಲ್ಲ

ಇಂಡಿಗೋ:

ವಿಮಾನಗಳ ವ್ಯತ್ಯಯದ ಕುರಿತು ಪ್ರಯಾಣಿಕರನ್ನು ಎಚ್ಚರಿಸಿರುವ ಇಂಡಿಗೋ, “ದೆಹಲಿಯಲ್ಲಿನ ಪ್ರತಿಕೂಲ ಹವಾಮಾನವು ವಿಮಾನಗಳ ಸಮಯಪಾಲನೆಯ ಮೇಲೆ ಪರಿಣಾಮ ಬೀರಿದೆ. ನಾವು ಹವಾಮಾನದ ಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದೇವೆ. ನಿಮ್ಮನ್ನು ಸುರಕ್ಷಿತವಾಗಿ ಹಾಗೂ ಸುಲಭವಾಗಿ ತಲುಪಿಸಲು ನಮ್ಮಿಂದಾಗುವ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇವೆ” ಎಂದು ತಿಳಿಸಿದೆ.

ಸ್ಪೈಸ್‌ಜೆಟ್:

“ದೆಹಲಿಯಲ್ಲಿನ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಎಲ್ಲಾ ನಿರ್ಗಮನ ಹಾಗೂ ಆಗಮನ ಮತ್ತು ಅದರ ಪರಿಣಾಮವಾಗಿ ಹೊರಡುವ ಮುಂದಿನ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಲು ವಿನಂತಿಸಲಾಗಿದೆ” ಎಂದು ತಿಳಿಸಿದೆ.

ಆಕಾಸಾ ಏರ್:

“ದೆಹಲಿಯಲ್ಲಿನ ತೀವ್ರ ಹವಾಮಾನ ಪರಿಸ್ಥಿತಿಯಿಂದಾಗಿ ನಮ್ಮ ಜಾಲದ ಪ್ರಮುಖ ವಿಮಾನಗಳ ಮೇಲೆ ಪರಿಣಾಮ ಬೀರಿದೆ. ಇದು ನಿಮ್ಮ ಪ್ರಯಾಣದ ಯೋಜನೆಗಳಿಗೆ ಅನಾನುಕೂಲತೆಯನ್ನುಂಟು ಮಾಡಬಹುದು. ದಯವಿಟ್ಟು ಸಹಕರಿಸಿ” ಎಂದು ಆಕಾಸಾ ಕೋರಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್