AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Rains: ದೆಹಲಿಯಲ್ಲಿ ಭಾರೀ ಮಳೆ; 10 ವಿಮಾನಗಳ ಮಾರ್ಗ ಬದಲಾವಣೆ

ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ಭಾರೀ ಮಳೆಯಾಗುತ್ತಿದ್ದು, ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. 10 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. 7 ವಿಮಾನಗಳನ್ನು ಜೈಪುರಕ್ಕೆ, 3 ವಿಮಾನಗಳನ್ನು ಲಖನೌಗೆ ತೆರಳುವಂತೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ತಿಳಿಸಿದೆ.

Delhi Rains: ದೆಹಲಿಯಲ್ಲಿ ಭಾರೀ ಮಳೆ; 10 ವಿಮಾನಗಳ ಮಾರ್ಗ ಬದಲಾವಣೆ
ದೆಹಲಿಯಲ್ಲಿ ಭಾರೀ ಮಳೆ (ಎಎನ್​ಐ ಚಿತ್ರ)Image Credit source: ANI
Ganapathi Sharma
|

Updated on: Mar 20, 2023 | 9:12 PM

Share

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ (Delhi) ಸೋಮವಾರ ಭಾರೀ ಮಳೆಯಾಗುತ್ತಿದ್ದು (Heavy Rain), ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. 10 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. 7 ವಿಮಾನಗಳನ್ನು ಜೈಪುರಕ್ಕೆ, 3 ವಿಮಾನಗಳನ್ನು ಲಖನೌಗೆ ತೆರಳುವಂತೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ತಿಳಿಸಿದೆ. ದೆಹಲಿಯಲ್ಲಿ ಪ್ರತಿಕೂಲ ಹವಾಮಾನವು ಎಲ್ಲಾ ವಿಮಾನಗಳ ನಿರ್ಗಮನ/ ಆಗಮನದ ಮೇಲೆ ಪರಿಣಾಮ ಬೀರಬಹುದು. ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಗತಿಯನ್ನು ಪರಿಶೀಲಿಸಲು ವಿನಂತಿಸಲಾಗಿದೆ ಎಂದು ಸ್ಪೈಸ್​​ಜೆಟ್ ಪ್ರಕಟಣೆ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ದೆಹಲಿಯಾದ್ಯಂತ ಮಂಜು ಮುಸುಕಿದ ಹಾಗೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ದೆಹಲಿಯ ಹಲವು ಪ್ರದೇಶಗಳಲ್ಲಿ ಸೋಮವಾರ ಧಾರಾಕಾರ ಮಳೆಯಾಗಿದೆ. ಕನಿಷ್ಠ ತಾಪಮಾನ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕೆಲವೆಡೆ ತುಂತುರು ಮಳೆಯಾಗಿದ್ದರೆ, ಕೆಲವೆಡೆ ಮಳೆ ಚುರುಕುಗೊಂಡಿದೆ. ಮಳೆಯಿಂದಾಗಿ ಹಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ದೆಹಲಿ ಮತ್ತು ನೋಯ್ಡಾದ ಕೆಲ ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗುಡುಗು, ಆಲಿಕಲ್ಲು ಸಹಿತ ಲಘು ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಪ್ರದೇಶದ ಹಲವೆಡೆಗಳಲ್ಲಿಯೂ ಸೋಮವಾರ ಮಳೆ ಸುರಿದಿದೆ.

ಇದನ್ನೂ ಓದಿ: Sikhs Protest: ತ್ರಿವರ್ಣ ಧ್ವಜದೊಂದಿಗೆ ನಾವಿದ್ದೇವೆ; ಬ್ರಿಟಿಷ್ ಹೈಕಮಿಷನ್ ಕಚೇರಿ ಎದುರು ಸಿಖ್ಖರ ಪ್ರತಿಭಟನೆ

ರಾಜಧಾನಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಭಾನುವಾರ ಆಲಿಕಲ್ಲು ಮಳೆಯಾಗಿತ್ತು. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕನಿಷ್ಠ ತಾಪಮಾನ 15.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಶನಿವಾರ ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ಮಳೆ ಮತ್ತು ಆಲಿಕಲ್ಲು ಮಳೆಯಾಗಿತ್ತು. ನಂತರ ತಾಪಮಾನದಲ್ಲಿ 5 ಡಿಗ್ರಿಯಷ್ಟು ಇಳಿಕೆ ದಾಖಲಾಗಿತ್ತು. ಇದು ಈ ತಿಂಗಳ ಕನಿಷ್ಠ ತಾಪಮಾನವಾಗಿದ್ದು, ಶನಿವಾರದಂದು ಹಲವು ಪ್ರದೇಶಗಳಲ್ಲಿ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ