AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಬಾಂಬ್ ಸ್ಫೋಟ ಪ್ರಕರಣ: ಆತ್ಮಹತ್ಯಾ ಬಾಂಬರ್​ಗೆ ನೆರವಾಗಿದ್ದ ಅಮೀರ್ ರಷೀದ್ ಬಂಧನ

Delhi Red Fort bomb blast case: NIA arrests suicide bomber's aide: ನವೆಂಬರ್ 10ರಂದು ದೆಹಲಿಯ ರೆಡ್ ಫೋರ್ಟ್ ಬಳಿ ಸಂಭವಿಸಿದ ಆತ್ಮಹತ್ಯಾ ಬಾಂಬ್ ದಾಳಿ ಘಟನೆಯಲ್ಲಿ ಬಾಂಬರ್​ಗೆ ನೆರವಾಗಿದ್ದವನ ಬಂಧನವಾಗಿದೆ. ಆತ್ಮಹತ್ಯಾ ಬಾಂಬರ್ ಡಾ. ಉಮರ್ ಉನ್ ನಬಿಯ ಆಪ್ತ ಅಮೀರ್ ರಷೀದ್ ಅಲಿಯನ್ನು ಎನ್​ಐಎ ಬಂಧಿಸಿದೆ. ಜಮ್ಮು ಕಾಶ್ಮೀರದ ಅಮೀರ್ ರಷೀದ್ ದೆಹಲಿಗೆ ಬಂದು ಕಾರನ್ನು ಖರೀದಿಸಿ ಕೊಟ್ಟಿರುವುದು ತಿಳಿದುಬಂದಿದೆ.

ದೆಹಲಿ ಬಾಂಬ್ ಸ್ಫೋಟ ಪ್ರಕರಣ: ಆತ್ಮಹತ್ಯಾ ಬಾಂಬರ್​ಗೆ ನೆರವಾಗಿದ್ದ ಅಮೀರ್ ರಷೀದ್ ಬಂಧನ
ದೆಹಲಿ ಬಾಂಬ್ ಸ್ಪೋಟ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 16, 2025 | 11:02 PM

Share

ನವದೆಹಲಿ, ನವೆಂಬರ್ 16: ದೆಹಲಿ ಕೆಂಪು ಕೋಟೆ ಬಾಂಬ್ ಸ್ಫೋಟ (Delhi bomb blast case) ಪ್ರಕರಣದಲ್ಲಿ ಆತ್ಮಹತ್ಯಾ ದಾಳಿಕೋರನಿಗೆ ಸಹಾಯ ಮಾಡಿದರೆನ್ನಲಾದ ವ್ಯಕ್ತಿಯೊಬ್ಬನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಅಮೀರ್ ರಷೀದ್ ಅಲಿಯನ್ನು (Amir Rashid Ali) ದೆಹಲಿಯಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸರಿಂದ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಿ ಪಡೆದ ಬಳಿಕ ನಡೆದ ಪ್ರಮುಖ ಬೆಳವಣಿಗೆ ಇದಾಗಿದೆ. 10 ಜನರನ್ನು ಬಲಿತೆಗೆದುಕೊಂಡು ಇನ್ನೂ ಹಲವರನ್ನು ಗಾಯಗಳಿಸಿದ ಸೂಸೈಡ್ ಬಾಂಬರ್ ಡಾ. ಉಮರ್ ಉನ್ ನಬಿಗೆ (Dr Umar Un Nabi) ಸಹಾಯ ಮಾಡಿದ್ದು ಇದೇ ಆಮಿರ್ ರಷೀದ್ ಅಲಿ ಎನ್ನಲಾಗಿದೆ.

ನವೆಂಬರ್ 10ರಂದು ರೆಡ್ ಫೋರ್ಟ್ ಬಳಿ ಆತ್ಮಹತ್ಯಾ ದಾಳಿಗೆ ಬಳಸಲಾಗಿದ್ದ ಹ್ಯುಂಡೈ ಐ20 ಕಾರು ಇದೇ ಆಮಿರ್ ರಷೀದ್ ಅಲಿ ಹೆಸರಿನಲ್ಲಿ ನೊಂದಾವಣಿ ಆಗಿದೆ. ಬಂಧಿತ ಆರೋಪಿ ಆಮೀರ್ ರಷೀದ್, ಜಮ್ಮು ಮತ್ತು ಕಾಶ್ಮೀರದ ಪಾಂಪೋರೆಯ ಸಂಬೂರ ಎಂಬಲ್ಲಿನ ನಿವಾಸಿ. ಭಯೋತ್ಪಾದನಾ ಕೃತ್ಯಕ್ಕೆ ಡಾ. ಉಮರ್​ಗೆ ಈತ ಸಹಾಯ ಮಾಡಿದ್ದಾನೆ. ದೆಹಲಿಗೆ ಬಂದು ಆ ಕಾರನ್ನು ಖರೀದಿಸಿ ಕೊಟ್ಟಿದ್ದಾನೆ.

ಇದನ್ನೂ ಓದಿ: ಲಾಲೂ ಕೌಟುಂಬಿಕ ಬಿಕ್ಕಟ್ಟು; ಮಗಳು ರೋಹಿಣಿ ಹೆಸರಿಸಿದ ರಮೀಜ್ ಖಾನ್ ಯಾರು?

ಆತ್ಮಾಹುತಿ ಬಾಂಬರ್ ಆಗಿ 10 ಮಂದಿಯನ್ನು ಬಲಿ ಪಡೆದ ಡಾ. ಉಮರ್ ಉನ್ ನಬಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ನಿವಾಸಿಯಾಗಿದ್ದು ಫರೀದಾಬಾದ್​ನ ಅಲ್ ಫಲಾಹ್ ಯೂನಿವರ್ಸಿಟಿಯಲ್ಲಿ ಜನರಲ್ ಮೆಡಿಸಿನ್ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಕೂಡ ಆಗಿದ್ದನೆನ್ನಲಾಗಿದೆ. ಬಾಂಬ್ ದಾಳಿಗೆ ಬಳಕೆಯಾದ ಹ್ಯೂಂಡೈ ಐ20 ಕಾರಿನೊಳಗೆ ಐಇಡಿ ಇಟ್ಟು ಸ್ಫೋಟಿಸಲಾಗಿತ್ತು.

ಇದೇ ಡಾ. ನಬಿಗೆ ಸೇರಿದ ಮತ್ತೊಂದು ವಾಹನವನ್ನು ಎನ್​ಐಎ ವಶಪಡಿಸಿಕೊಂಡಿದೆ. ಈ ಪ್ರಕರಣದ ತನಿಖೆ ವಹಿಸಿಕೊಂಡಾಗಿನಿಂದ ರಾಷ್ಟ್ರೀಯ ತನಿಖಾ ಏಜೆನ್ಸಿಯು 73 ಸಾಕ್ಷ್ಯಗಳನ್ನು ಪರಿಶೀಲಿಸಿದೆ.

ಇದನ್ನೂ ಓದಿ: ದೆಹಲಿ ಸ್ಫೋಟ: 7 ದಿನಗಳ ಬಳಿಕ ಲಾಲ್ ಕಿಲಾ ಮೆಟ್ರೋ ನಿಲ್ದಾಣ ಓಪನ್

ದೆಹಲಿ, ಜಮ್ಮು ಕಾಶ್ಮೀರ, ಹರ್ಯಾಣ ಮತ್ತು ಉತ್ತರಪ್ರದೇಶ ರಾಜ್ಯಗಳ ಪೊಲೀಸ್ ಇಲಾಖೆಗಳೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡುತ್ತಾ ಎನ್​ಐಎ ಈ ಪ್ರಕರಣದ ತನಿಖೆ ನಡೆಸುತ್ತಿದೆ. ವಿವಿಧ ಸಾಕ್ಷ್ಯಗಳ ಸುಳಿವನ್ನು ಹಿಡಿದು ಈ ದಾಳಿಯ ಹಿಂದಿನ ದೊಡ್ಡ ಪಿತೂರಿಯನ್ನು ಬೆಳಕಿಗೆ ತರಲು ಪ್ರಯತ್ನಿಸುತ್ತಿದೆ. ನವೆಂಬರ್ 10ರಂದು ಕೆಂಪು ಕೋಟೆಯ ಬಳಿ ಸಂಭವಿಸಿದ ಬಾಂಬ್ ಸ್ಫೋಟವೂ ಇನ್ನೂ ದೊಡ್ಡ ಸಂಚಿನ ಒಂದು ಭಾಗವಾಗಿರುವ ಶಂಕೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ