AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಬಾಂಬ್ ಸ್ಫೋಟ ಪ್ರಕರಣ: ಆತ್ಮಹತ್ಯಾ ಬಾಂಬರ್​ಗೆ ನೆರವಾಗಿದ್ದ ಅಮೀರ್ ರಷೀದ್ ಬಂಧನ

Delhi Red Fort bomb blast case: NIA arrests suicide bomber's aide: ನವೆಂಬರ್ 10ರಂದು ದೆಹಲಿಯ ರೆಡ್ ಫೋರ್ಟ್ ಬಳಿ ಸಂಭವಿಸಿದ ಆತ್ಮಹತ್ಯಾ ಬಾಂಬ್ ದಾಳಿ ಘಟನೆಯಲ್ಲಿ ಬಾಂಬರ್​ಗೆ ನೆರವಾಗಿದ್ದವನ ಬಂಧನವಾಗಿದೆ. ಆತ್ಮಹತ್ಯಾ ಬಾಂಬರ್ ಡಾ. ಉಮರ್ ಉನ್ ನಬಿಯ ಆಪ್ತ ಅಮೀರ್ ರಷೀದ್ ಅಲಿಯನ್ನು ಎನ್​ಐಎ ಬಂಧಿಸಿದೆ. ಜಮ್ಮು ಕಾಶ್ಮೀರದ ಅಮೀರ್ ರಷೀದ್ ದೆಹಲಿಗೆ ಬಂದು ಕಾರನ್ನು ಖರೀದಿಸಿ ಕೊಟ್ಟಿರುವುದು ತಿಳಿದುಬಂದಿದೆ.

ದೆಹಲಿ ಬಾಂಬ್ ಸ್ಫೋಟ ಪ್ರಕರಣ: ಆತ್ಮಹತ್ಯಾ ಬಾಂಬರ್​ಗೆ ನೆರವಾಗಿದ್ದ ಅಮೀರ್ ರಷೀದ್ ಬಂಧನ
ದೆಹಲಿ ಬಾಂಬ್ ಸ್ಪೋಟ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 16, 2025 | 11:02 PM

Share

ನವದೆಹಲಿ, ನವೆಂಬರ್ 16: ದೆಹಲಿ ಕೆಂಪು ಕೋಟೆ ಬಾಂಬ್ ಸ್ಫೋಟ (Delhi bomb blast case) ಪ್ರಕರಣದಲ್ಲಿ ಆತ್ಮಹತ್ಯಾ ದಾಳಿಕೋರನಿಗೆ ಸಹಾಯ ಮಾಡಿದರೆನ್ನಲಾದ ವ್ಯಕ್ತಿಯೊಬ್ಬನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಅಮೀರ್ ರಷೀದ್ ಅಲಿಯನ್ನು (Amir Rashid Ali) ದೆಹಲಿಯಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸರಿಂದ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಿ ಪಡೆದ ಬಳಿಕ ನಡೆದ ಪ್ರಮುಖ ಬೆಳವಣಿಗೆ ಇದಾಗಿದೆ. 10 ಜನರನ್ನು ಬಲಿತೆಗೆದುಕೊಂಡು ಇನ್ನೂ ಹಲವರನ್ನು ಗಾಯಗಳಿಸಿದ ಸೂಸೈಡ್ ಬಾಂಬರ್ ಡಾ. ಉಮರ್ ಉನ್ ನಬಿಗೆ (Dr Umar Un Nabi) ಸಹಾಯ ಮಾಡಿದ್ದು ಇದೇ ಆಮಿರ್ ರಷೀದ್ ಅಲಿ ಎನ್ನಲಾಗಿದೆ.

ನವೆಂಬರ್ 10ರಂದು ರೆಡ್ ಫೋರ್ಟ್ ಬಳಿ ಆತ್ಮಹತ್ಯಾ ದಾಳಿಗೆ ಬಳಸಲಾಗಿದ್ದ ಹ್ಯುಂಡೈ ಐ20 ಕಾರು ಇದೇ ಆಮಿರ್ ರಷೀದ್ ಅಲಿ ಹೆಸರಿನಲ್ಲಿ ನೊಂದಾವಣಿ ಆಗಿದೆ. ಬಂಧಿತ ಆರೋಪಿ ಆಮೀರ್ ರಷೀದ್, ಜಮ್ಮು ಮತ್ತು ಕಾಶ್ಮೀರದ ಪಾಂಪೋರೆಯ ಸಂಬೂರ ಎಂಬಲ್ಲಿನ ನಿವಾಸಿ. ಭಯೋತ್ಪಾದನಾ ಕೃತ್ಯಕ್ಕೆ ಡಾ. ಉಮರ್​ಗೆ ಈತ ಸಹಾಯ ಮಾಡಿದ್ದಾನೆ. ದೆಹಲಿಗೆ ಬಂದು ಆ ಕಾರನ್ನು ಖರೀದಿಸಿ ಕೊಟ್ಟಿದ್ದಾನೆ.

ಇದನ್ನೂ ಓದಿ: ಲಾಲೂ ಕೌಟುಂಬಿಕ ಬಿಕ್ಕಟ್ಟು; ಮಗಳು ರೋಹಿಣಿ ಹೆಸರಿಸಿದ ರಮೀಜ್ ಖಾನ್ ಯಾರು?

ಆತ್ಮಾಹುತಿ ಬಾಂಬರ್ ಆಗಿ 10 ಮಂದಿಯನ್ನು ಬಲಿ ಪಡೆದ ಡಾ. ಉಮರ್ ಉನ್ ನಬಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ನಿವಾಸಿಯಾಗಿದ್ದು ಫರೀದಾಬಾದ್​ನ ಅಲ್ ಫಲಾಹ್ ಯೂನಿವರ್ಸಿಟಿಯಲ್ಲಿ ಜನರಲ್ ಮೆಡಿಸಿನ್ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಕೂಡ ಆಗಿದ್ದನೆನ್ನಲಾಗಿದೆ. ಬಾಂಬ್ ದಾಳಿಗೆ ಬಳಕೆಯಾದ ಹ್ಯೂಂಡೈ ಐ20 ಕಾರಿನೊಳಗೆ ಐಇಡಿ ಇಟ್ಟು ಸ್ಫೋಟಿಸಲಾಗಿತ್ತು.

ಇದೇ ಡಾ. ನಬಿಗೆ ಸೇರಿದ ಮತ್ತೊಂದು ವಾಹನವನ್ನು ಎನ್​ಐಎ ವಶಪಡಿಸಿಕೊಂಡಿದೆ. ಈ ಪ್ರಕರಣದ ತನಿಖೆ ವಹಿಸಿಕೊಂಡಾಗಿನಿಂದ ರಾಷ್ಟ್ರೀಯ ತನಿಖಾ ಏಜೆನ್ಸಿಯು 73 ಸಾಕ್ಷ್ಯಗಳನ್ನು ಪರಿಶೀಲಿಸಿದೆ.

ಇದನ್ನೂ ಓದಿ: ದೆಹಲಿ ಸ್ಫೋಟ: 7 ದಿನಗಳ ಬಳಿಕ ಲಾಲ್ ಕಿಲಾ ಮೆಟ್ರೋ ನಿಲ್ದಾಣ ಓಪನ್

ದೆಹಲಿ, ಜಮ್ಮು ಕಾಶ್ಮೀರ, ಹರ್ಯಾಣ ಮತ್ತು ಉತ್ತರಪ್ರದೇಶ ರಾಜ್ಯಗಳ ಪೊಲೀಸ್ ಇಲಾಖೆಗಳೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡುತ್ತಾ ಎನ್​ಐಎ ಈ ಪ್ರಕರಣದ ತನಿಖೆ ನಡೆಸುತ್ತಿದೆ. ವಿವಿಧ ಸಾಕ್ಷ್ಯಗಳ ಸುಳಿವನ್ನು ಹಿಡಿದು ಈ ದಾಳಿಯ ಹಿಂದಿನ ದೊಡ್ಡ ಪಿತೂರಿಯನ್ನು ಬೆಳಕಿಗೆ ತರಲು ಪ್ರಯತ್ನಿಸುತ್ತಿದೆ. ನವೆಂಬರ್ 10ರಂದು ಕೆಂಪು ಕೋಟೆಯ ಬಳಿ ಸಂಭವಿಸಿದ ಬಾಂಬ್ ಸ್ಫೋಟವೂ ಇನ್ನೂ ದೊಡ್ಡ ಸಂಚಿನ ಒಂದು ಭಾಗವಾಗಿರುವ ಶಂಕೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ