AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox: ದೆಹಲಿಯಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ

ದೆಹಲಿಯಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣವು ಪತ್ತೆಯಾಗಿದೆ.

Monkeypox: ದೆಹಲಿಯಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ
Monkeypox
TV9 Web
| Edited By: |

Updated on:Aug 13, 2022 | 3:52 PM

Share

ದೆಹಲಿಯಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣವು ಪತ್ತೆಯಾಗಿದೆ. ಈ ಕುರಿತು ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಯ ಡಾ. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಡಾ. ಕುಮಾರ್ ಅವರು ನೀಡಿರುವ ಮಾಹಿತಿ ಪ್ರಕಾರ, 22 ವರ್ಷದ ಯುವತಿಯಲ್ಲಿ ಲಕ್ಷಣ ಕಂಡುಬಂದಿದ್ದ ಕಾರಣ ಮಾದರಿಯನ್ನು ಲ್ಯಾಬ್​ಗೆ ಕಳುಹಿಸಲಾಗಿತ್ತು. ಬಳಿಕ ಆಕೆಯ ಆರೋಗ್ಯದ ಮೇಲೆ ನಿಗಾ ಇರಿಸಲಾಗಿತ್ತು.

ಎಲ್​ಎನ್​ಜೆಪಿಯಲ್ಲಿ ದಾಖಲಾದ ಓರ್ವ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ. ನಾಲ್ಕು ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಓರ್ವ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇತ್ತೀಚಿನ ಟ್ರಾವೆಲ್ ಹಿಸ್ಟರಿ ಇಲ್ಲ ಆದರೆ ಒಂದು ತಿಂಗಳ ಹಿಂದೆ ವಿದೇಶಕ್ಕೆ ತೆರಳಿದ್ದರು. ದೆಹಲಿಯಲ್ಲಿ ಜುಲೈ 24ರಂದು ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿತ್ತು.

ಸೋಂಕು ತಗುಲಿದ 5-13 ದಿನಗಳಲ್ಲಿ ಲಕ್ಷಣಗಳು ಗೋಚರಿಸುತ್ತದೆ, ಲಕ್ಷಣ ಗೋಚರಿಸಲು 21 ದಿನಗಳಾದರೂ ಅದರಲ್ಲಿ ಅಚ್ಚರಿ ಇಲ್ಲ. ಜ್ವರ, ತಲೆ ನೋವು, ಬೆನ್ನು ನೋವು, ಸ್ನಾಯು ನೋವು, ಚಳಿ ಹಾಗೂ ಬಳಲಿಕೆ, ಜ್ವರದೊಂದಿಗೆ ದೇಹದ ಬೇರೆ ಭಾಗಗಳಿಗೆ ಹರಡುವುದಕ್ಕೂ ಮುನ್ನ, ಮುಖ, ಕೈ ಕಾಲುಗಳಲ್ಲಿ ದದ್ದು ಹೊರಹೊಮ್ಮುತ್ತದೆ. ಬಳಿಕ ಬಾಯಿಯ ಒಳಗೆ, ಕಾರ್ನಿಯಾ, ಜನನಾಂಗಗಳಲ್ಲೂ ಕಾಣಿಸಿಕೊಳ್ಳಬಹುದಾಗಿದೆ. ಹಲವು ಪ್ರಕರಣದಲ್ಲಿ ದೇಹದ ಚರ್ಮದ ದೊಡ್ಡ ಭಾಗಗಳು ಕಳಚಿ ಬೀಳುವ ಸಾಧ್ಯತೆ ಇದೆ.

ಮನುಷ್ಯರಿಂದ ಮನುಷ್ಯರಿಗೆ ಹರಡುವುದೂ ಸಾಧ್ಯ

ಸೋಂಕು ತಗುಲಿರುವ ವನ್ಯ ಜೀವಿಗಳಿಂದ ಈ ವೈರಾಣು ಹರಡುತ್ತದೆ. ಆದರೆ ನಿಕಟ ಸಂಪರ್ಕ ಹೊಂದಿರುವ ಮನುಷ್ಯನಿಂದ ಮನುಷ್ಯನಿಗೂ ಇದು ಹರಡುವ ಸಾಧ್ಯತೆ ಇದ್ದು, ಎಬೋಲಾ ಮಾದರಿಯಲ್ಲಿ ನಿಕಟ ಸಂಪರ್ಕ, ದೇಹದ ಬೆವರು, ಕಲುಶಿತ ವಸ್ತುಗಳ ಮೂಲಕವೂ ಹರಡುವ ಸಾಧ್ಯತೆ ಇದೆ.

ಮಂಕಿಪಾಕ್ಸ್ ಸೋಂಕನ್ನು ತಪ್ಪಿಸುವುದು ಹೇಗೆ? -ಕಾಯಿಲೆಯ ಲಕ್ಷಣಗಳು ಕಂಡುಬಂದರೆ, ಮನೆಯಲ್ಲಿಯೇ ಇರಿ.

-ಈ ಸಂದರ್ಭದಲ್ಲಿ ನಿಮ್ಮ ಸಾಕುಪ್ರಾಣಿಗಳಿಂದಲೂ ಅಂತರ ಕಾಯ್ದುಕೊಳ್ಳಿ.

-ಮಂಕಿಪಾಕ್ಸ್‌ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯಿಂದ ಅಂತರ ಕಾಯ್ದುಕೊಳ್ಳುವುದು.

-ಮಂಕಿಪಾಕ್ಸ್‌ನ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯ ಟವೆಲ್‌ಗಳು ಅಥವಾ ಬಟ್ಟೆಗಳಂತಹ ವೈಯಕ್ತಿಕ ವಸ್ತುಗಳನ್ನು ಮುಟ್ಟಬೇಡಿ.

-ಆಗಾಗ್ಗೆ ನಿಮ್ಮ ಕೈಗಳನ್ನು ಸೋಪ್ ಮತ್ತು ನೀರಿನಿಂದ ತೊಳೆಯಿರಿ ಅಥವಾ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಬಳಸಿ.

Published On - 3:43 pm, Sat, 13 August 22

Follow Us
TV9 Web
TV9 Web

TV9 Kannada

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!