ಅಪಘಾತದಿಂದ ರಕ್ತಸಿಕ್ತವಾಗಿ ರಸ್ತೆ ಮೇಲೆ ಬಿದ್ದಿದ್ದ ಚಲನಚಿತ್ರ ನಿರ್ಮಾಪಕರು, ಸಹಾಯ ಮಾಡೋದು ಬಿಟ್ಟು ಲ್ಯಾಪ್​ಟಾಪ್, ಕ್ಯಾಮೆರಾ ಕದ್ದ ಜನ

ದಕ್ಷಿಣ ದೆಹಲಿಯ ಪಂಚಶೀಲ್​ ಪಾರ್ಕ್​ ಮೆಟ್ರೋ ನಿಲ್ದಾಣದ ಬಳಿ ಮೂರು ದಿನಗಳ ಹಿಂದೆ ಅಪಘಾತವೊಂದು ಸಂಭವಿಸಿತ್ತು. ಚಲನಚಿತ್ರ ನಿರ್ಮಾಪಕ ಪಿಯೂಷ್​ ಪಾಲ್​ ರಾತ್ರಿ 9.45ರ ಸುಮಾರಿಗೆ ಕೆಲಸ ಮುಗಿಸಿ ಬೈಕ್​ನಲ್ಲಿ ಮರಳುತ್ತಿದ್ದರು. ಪಾಲ್ ಅವರ ಬೈಕ್​ಗೆ ಇನ್ನೊಂದು ಬೈಕ್ ಹೊಡೆದಿದ್ದರಿಂದ ತಲೆಗೆ ಗಂಭೀರ ಗಾಯಗಳಾಗಿತ್ತು.

ಅಪಘಾತದಿಂದ ರಕ್ತಸಿಕ್ತವಾಗಿ ರಸ್ತೆ ಮೇಲೆ ಬಿದ್ದಿದ್ದ ಚಲನಚಿತ್ರ ನಿರ್ಮಾಪಕರು, ಸಹಾಯ ಮಾಡೋದು ಬಿಟ್ಟು ಲ್ಯಾಪ್​ಟಾಪ್, ಕ್ಯಾಮೆರಾ ಕದ್ದ ಜನ
ಪಿಯೂಷ್
Image Credit source: Hindustan Times

Updated on: Nov 02, 2023 | 2:42 PM

ದಕ್ಷಿಣ ದೆಹಲಿಯ ಪಂಚಶೀಲ್​ ಪಾರ್ಕ್​ ಮೆಟ್ರೋ ನಿಲ್ದಾಣದ ಬಳಿ ಮೂರು ದಿನಗಳ ಹಿಂದೆ ಅಪಘಾತವೊಂದು ಸಂಭವಿಸಿತ್ತು. ಚಲನಚಿತ್ರ ನಿರ್ಮಾಪಕ ಪಿಯೂಷ್​ ಪಾಲ್​ ರಾತ್ರಿ 9.45ರ ಸುಮಾರಿಗೆ ಕೆಲಸ ಮುಗಿಸಿ ಬೈಕ್​ನಲ್ಲಿ ಮರಳುತ್ತಿದ್ದರು. ಪಾಲ್ ಅವರ ಬೈಕ್​ಗೆ ಇನ್ನೊಂದು ಬೈಕ್ ಹೊಡೆದಿದ್ದರಿಂದ ತಲೆಗೆ ಗಂಭೀರ ಗಾಯಗಳಾಗಿತ್ತು.

ಅಪಘಾತದಲ್ಲಿ ಮತ್ತೋರ್ವ ಬೈಕ್ ಸವಾರ ಬಾದರ್‌ಪುರ ನಿವಾಸಿ ಬಂಟಿ ಕುಮಾರ್‌ಗೂ ಗಂಭೀರ ಗಾಯಗಳಾಗಿವೆ.
ಅಪಘಾತದ ಬಳಿಕ ಪಾಲ್​ ರಕ್ತಸಿಕ್ತವಾಗಿ ಕೆಳಗೆ ಬಿದ್ದಿದ್ದರು, ಆದರೆ ಆ್ಯಂಬುಲೆನ್ಸ್​ಗಾಗಲಿ ಅಥವಾ ಪೊಲೀಸರಿಗಾಗಲಿ ಕರೆ ಮಾಡುವ ಬದಲು ಜನರು ವಿಡಿಯೋ ಮಾಡುತ್ತಾ ನಿಂತಿದ್ದರು.

ಅಷ್ಟೇ ಅಲ್ಲ ಅಲ್ಲಿದ್ದ ಜನ ಲ್ಯಾಪ್​ಟಾಪ್​, ಕ್ಯಾಮೆರಾವನ್ನು ಕೂಡ ಕದ್ದಿದ್ದಾರೆ. ರಾತ್ರಿ 10.11ರ ಸುಮಾರಿಗೆ ಅಪಘಾತದ ಬಗ್ಗೆ ಪಿಸಿಆರ್​ಗೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಸ್ಥಳದಲ್ಲಿ ಹಾದು ಹೋಗುತ್ತಿದ್ದ ಪಂಕಜ್ ಮಿಸ್ತ್ರಿ ಎಂಬುವವರು ಪೊಲೀಸರಿಗೆ ಕರೆ ಮಾಡಿದ್ದರು.

ಮತ್ತಷ್ಟು ಓದಿ: Video: ರಾಜಾಧಾನಿ ಬೆಂಗಳೂರಿನಲ್ಲಿ ರಾತ್ರಿ ಕತ್ತಲಲ್ಲಿ ಜನನಿಬಿಡ ಪ್ರದೇಶದಲ್ಲಿ ರಿವೆಂಜಿಗೆ ಬಿದ್ದಂತೆ ವ್ಯಕ್ತಿಯ ಮೇಲೆ ಸ್ಕಾರ್ಪಿಯೊ ಹತ್ತಿಸಿ, ಹತ್ಯೆ: ಏನಿದು ಪೈಶಾಚಿಕ ಕೃತ್ಯ?

ರಸ್ತೆಯಲ್ಲಿ ಓರ್ವ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ನೋಡಿದ್ದರು, ತಲೆಯಿಂದ ತುಂಬಾ ರಕ್ತಸ್ರಾವವಾಗುತ್ತಿತ್ತು. ಬೈಕ್ ಕೆಲವೇ ಮೀಟರ್​ ದೂರದಲ್ಲಿ ಬಿದ್ದಿತ್ತು. ನಂತರ ಬೈಕ್ ಸವಾರ ಟ್ಯಾಕ್ಸಿಯೊಂದನ್ನು ಕರೆದು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದರು.

ನಾವು ಹತ್ತಿರದ ಆಸ್ಪತ್ರೆಗೆ ಹೋದೆವು ಆದರೆ ಅದು ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿಲ್ಲದ ಕಾರಣ, ಪಾಲ್ ಅವರನ್ನು PSRI ಆಸ್ಪತ್ರೆಗೆ ಕರೆದೊಯ್ದಿದ್ದರು. ಅದು ಇನ್ನೊಂದು ಗಂಟೆ ತೆಗೆದುಕೊಂಡಿತು. ಮೂರು ದಿನಗಳ ಬಳಿಕ ಪಾಲ್​ ಮೃತಪಟ್ಟಿದ್ದಾರೆ.

ಬಂಟಿ ಹೇಳಿಕೆ ಮತ್ತು ಸಿಸಿಟಿವಿ ದೃಶ್ಯಗಳ ಸಾಕ್ಷ್ಯದ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬುಧವಾರ ಶವವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us