AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಡಿಕ್ಕಿ ಹೊಡೆದು ಬೈಕ್ ಚಾಲಕನನ್ನು ಎಳೆದುಕೊಂಡು ಹೋದ ಫಾರ್ಚುನರ್ ಕಾರು; ಶಾಕಿಂಗ್ ವಿಡಿಯೋ ಇಲ್ಲಿದೆ

Delhi Crime: ಈ ಘಟನೆಯ ದೃಶ್ಯಾವಳಿಗಳಲ್ಲಿ ಸುಧೀರ್ ಜೈನ್ ಅವರ ಫಾರ್ಚೂನರ್ ಕಾರು ಬೈಕಿಗೆ ಡಿಕ್ಕಿ ಹೊಡೆದ ನಂತರ 3-4 ವಾಹನಗಳಿಗೆ ಡಿಕ್ಕಿ ಹೊಡೆದಿರುವುದನ್ನು ಕಾಣಬಹುದು.

ರಸ್ತೆಯಲ್ಲಿ ಡಿಕ್ಕಿ ಹೊಡೆದು ಬೈಕ್ ಚಾಲಕನನ್ನು ಎಳೆದುಕೊಂಡು ಹೋದ ಫಾರ್ಚುನರ್ ಕಾರು; ಶಾಕಿಂಗ್ ವಿಡಿಯೋ ಇಲ್ಲಿದೆ
ದೆಹಲಿಯಲ್ಲಿ ಕಾರು ಅಪಘಾತ
TV9 Web
| Edited By: |

Updated on: Sep 20, 2022 | 10:34 AM

Share

ನವದೆಹಲಿ: ದೆಹಲಿಯ (Delhi Accident) ಕರೋಲ್‌ ಬಾಗ್‌ ರಸ್ತೆಯಲ್ಲಿ ಸೋಮವಾರ ಸಂಜೆ ವೇಗವಾಗಿ ಬಂದ ಫಾರ್ಚುನರ್ ಕಾರ್  (Fortuner Car) ಒಂದು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯನ್ನು 100 ಮೀಟರ್‌ವರೆಗೆ ಎಳೆದೊಯ್ದ ಆಘಾತಕಾರಿ ಘಟನೆ ನಡೆದಿದೆ. ಈ ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಪದಮ್ ಸಿಂಗ್ ಮಾರ್ಗದಲ್ಲಿ ಬೈಕ್ ಅನ್ನು ಎಳೆದುಕೊಂಡು ಹೋಗುವಾಗ ಆ ಕಾರು ಆಟೋ ರಿಕ್ಷಾ ಸೇರಿದಂತೆ 5 ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಎಸ್​ಯುವಿ ಕಾರಿನ ಚಾಲಕನನ್ನು ಸುಧೀರ್ ಜೈನ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಈ ಘಟನೆಯ ದೃಶ್ಯಾವಳಿಗಳಲ್ಲಿ ಸುಧೀರ್ ಜೈನ್ ಅವರ ಫಾರ್ಚೂನರ್ ಕಾರು ಬೈಕಿಗೆ ಡಿಕ್ಕಿ ಹೊಡೆದ ನಂತರ 3-4 ವಾಹನಗಳಿಗೆ ಡಿಕ್ಕಿ ಹೊಡೆದಿರುವುದನ್ನು ಕಾಣಬಹುದು. ಕಾರು ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ಬೈಕ್ ಚಾಲಕ ಹಿಮಾಂಶು ಎಂದು ಗುರುತಿಸಲಾಗಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: BIG NEWS: ಅಮಿತ್​ ಶಾ ಭದ್ರತೆಯಲ್ಲಿ ಲೋಪ, ಟಿಆರ್‌ಎಸ್ ಮುಖಂಡನ ಕಾರು ನಿಲ್ಲಿಸಿದ ಬೆಂಗಾವಲು ಪಡೆ

ಸುಧೀರ್ ಜೈನ್ ಕಾರು ಚಾಲನೆ ವೇಳೆ ಮದ್ಯದ ಅಮಲಿನಲ್ಲಿದ್ದರಾ? ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆರೋಪಿ ಸುಧೀರ್ ಜೈನ್ 2008-09ರ ಸುಮಾರಿಗೆ ದೆಹಲಿ ಬಿಜೆಪಿಯ ಟ್ರೇಡರ್ಸ್ ಸೆಲ್ ಸದಸ್ಯರಾಗಿದ್ದರು. ನಂತರ ಅವರು ರಾಜಕೀಯವನ್ನು ತೊರೆದರು. ಬಿಜೆಪಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ನಿಲ್ಲಿಸಿದ್ದರು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು