AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಡಿಕ್ಕಿ ಹೊಡೆದು ಬೈಕ್ ಚಾಲಕನನ್ನು ಎಳೆದುಕೊಂಡು ಹೋದ ಫಾರ್ಚುನರ್ ಕಾರು; ಶಾಕಿಂಗ್ ವಿಡಿಯೋ ಇಲ್ಲಿದೆ

Delhi Crime: ಈ ಘಟನೆಯ ದೃಶ್ಯಾವಳಿಗಳಲ್ಲಿ ಸುಧೀರ್ ಜೈನ್ ಅವರ ಫಾರ್ಚೂನರ್ ಕಾರು ಬೈಕಿಗೆ ಡಿಕ್ಕಿ ಹೊಡೆದ ನಂತರ 3-4 ವಾಹನಗಳಿಗೆ ಡಿಕ್ಕಿ ಹೊಡೆದಿರುವುದನ್ನು ಕಾಣಬಹುದು.

ರಸ್ತೆಯಲ್ಲಿ ಡಿಕ್ಕಿ ಹೊಡೆದು ಬೈಕ್ ಚಾಲಕನನ್ನು ಎಳೆದುಕೊಂಡು ಹೋದ ಫಾರ್ಚುನರ್ ಕಾರು; ಶಾಕಿಂಗ್ ವಿಡಿಯೋ ಇಲ್ಲಿದೆ
ದೆಹಲಿಯಲ್ಲಿ ಕಾರು ಅಪಘಾತ
TV9 Web
| Edited By: |

Updated on: Sep 20, 2022 | 10:34 AM

Share

ನವದೆಹಲಿ: ದೆಹಲಿಯ (Delhi Accident) ಕರೋಲ್‌ ಬಾಗ್‌ ರಸ್ತೆಯಲ್ಲಿ ಸೋಮವಾರ ಸಂಜೆ ವೇಗವಾಗಿ ಬಂದ ಫಾರ್ಚುನರ್ ಕಾರ್  (Fortuner Car) ಒಂದು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯನ್ನು 100 ಮೀಟರ್‌ವರೆಗೆ ಎಳೆದೊಯ್ದ ಆಘಾತಕಾರಿ ಘಟನೆ ನಡೆದಿದೆ. ಈ ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಪದಮ್ ಸಿಂಗ್ ಮಾರ್ಗದಲ್ಲಿ ಬೈಕ್ ಅನ್ನು ಎಳೆದುಕೊಂಡು ಹೋಗುವಾಗ ಆ ಕಾರು ಆಟೋ ರಿಕ್ಷಾ ಸೇರಿದಂತೆ 5 ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಎಸ್​ಯುವಿ ಕಾರಿನ ಚಾಲಕನನ್ನು ಸುಧೀರ್ ಜೈನ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಈ ಘಟನೆಯ ದೃಶ್ಯಾವಳಿಗಳಲ್ಲಿ ಸುಧೀರ್ ಜೈನ್ ಅವರ ಫಾರ್ಚೂನರ್ ಕಾರು ಬೈಕಿಗೆ ಡಿಕ್ಕಿ ಹೊಡೆದ ನಂತರ 3-4 ವಾಹನಗಳಿಗೆ ಡಿಕ್ಕಿ ಹೊಡೆದಿರುವುದನ್ನು ಕಾಣಬಹುದು. ಕಾರು ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ಬೈಕ್ ಚಾಲಕ ಹಿಮಾಂಶು ಎಂದು ಗುರುತಿಸಲಾಗಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: BIG NEWS: ಅಮಿತ್​ ಶಾ ಭದ್ರತೆಯಲ್ಲಿ ಲೋಪ, ಟಿಆರ್‌ಎಸ್ ಮುಖಂಡನ ಕಾರು ನಿಲ್ಲಿಸಿದ ಬೆಂಗಾವಲು ಪಡೆ

ಸುಧೀರ್ ಜೈನ್ ಕಾರು ಚಾಲನೆ ವೇಳೆ ಮದ್ಯದ ಅಮಲಿನಲ್ಲಿದ್ದರಾ? ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆರೋಪಿ ಸುಧೀರ್ ಜೈನ್ 2008-09ರ ಸುಮಾರಿಗೆ ದೆಹಲಿ ಬಿಜೆಪಿಯ ಟ್ರೇಡರ್ಸ್ ಸೆಲ್ ಸದಸ್ಯರಾಗಿದ್ದರು. ನಂತರ ಅವರು ರಾಜಕೀಯವನ್ನು ತೊರೆದರು. ಬಿಜೆಪಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ನಿಲ್ಲಿಸಿದ್ದರು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್