AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Cold Wave: ಚಳಿಗೆ ನಡುಗುತ್ತಿರುವ ದೆಹಲಿ: ದಟ್ಟ ಮಂಜಿನಿಂದಾಗಿ 20 ವಿಮಾನಗಳು, 42 ರೈಲುಗಳ ಸಂಚಾರದಲ್ಲಿ ವಿಳಂಬ

ಉತ್ತರ ಭಾರತವು ಚಳಿಯಿಂದ ನಡುಗುತ್ತಿದೆ, ದೆಹಲಿಯಲ್ಲಿ 1.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ದಟ್ಟ ಮಂಜಿನಿಂದಾಗಿ 42 ರೈಲುಗಳು ಹಾಗೂ 20 ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ.

Delhi Cold Wave:  ಚಳಿಗೆ ನಡುಗುತ್ತಿರುವ ದೆಹಲಿ: ದಟ್ಟ ಮಂಜಿನಿಂದಾಗಿ 20 ವಿಮಾನಗಳು, 42 ರೈಲುಗಳ ಸಂಚಾರದಲ್ಲಿ ವಿಳಂಬ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 08, 2023 | 11:02 AM

Share

ಉತ್ತರ ಭಾರತವು ಚಳಿಯಿಂದ ನಡುಗುತ್ತಿದೆ, ದೆಹಲಿಯಲ್ಲಿ 1.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ದಟ್ಟ ಮಂಜಿನಿಂದಾಗಿ 42 ರೈಲುಗಳು ಹಾಗೂ 20 ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ಮಂಜು ಮತ್ತು ಹವಾಮಾನ ವೈಪರೀತ್ಯದಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿ ದಟ್ಟವಾದ ಮಂಜಿನಿಂದಾಗಿ ಇಂದು 42 ರೈಲುಗಳು ಮತ್ತು 20 ಕ್ಕೂ ಹೆಚ್ಚು ವಿಮಾನಗಳು ತಡವಾಗಿ ಓಡುತ್ತಿವೆ. ಇದರಿಂದ ಜನರು ಪ್ಲಾಟ್‌ಫಾರ್ಮ್‌ನಲ್ಲಿಯೇ ಮಲಗುವ ಅನಿವಾರ್ಯತೆ ಎದುರಾಗಿದೆ.

ಮಂಜಿನಿಂದಾಗಿ ರೈಲ್ವೆ ಕಡೆಯಿಂದ ಬರುವ ಹಲವು ರೈಲುಗಳು ವಿಳಂಬವಾಗುತ್ತಿವೆ. ಕಾಮಾಖ್ಯ-ದೆಹಲಿ ಬ್ರಹ್ಮಪುತ್ರ ಮೇಲ್, ರೇವಾ-ಆನಂದ್ ವಿಹಾರ್ ಟರ್ಮಿನಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಅಮೃತಸರ ಬಿಲಾಸ್‌ಪುರ್ ಛತ್ತೀಸ್‌ಗಢ ಎಕ್ಸ್‌ಪ್ರೆಸ್ ಮತ್ತು ಕಾಮಾಖ್ಯ-ದೆಹಲಿ ಬ್ರಹ್ಮಪುತ್ರ ಮೇಲ್ ಸೇರಿದಂತೆ ಹಲವು ರೈಲುಗಳು 5 ಗಂಟೆಗಳಿಗೂ ಹೆಚ್ಚು ತಡವಾಗಿ ಓಡುತ್ತಿವೆ.

ಅನೇಕ ರಾತ್ರಿ ರೈಲುಗಳು 5 ರಿಂದ 6 ಗಂಟೆಗಳ ಕಾಲ ತಡವಾಗಿ ಓಡುವುದರಿಂದ, ಜನರು ಪ್ಲಾಟ್‌ಫಾರ್ಮ್‌ನಲ್ಲಿ ಮಲಗುವಂತೆ ಕೇಳಿಕೊಳ್ಳಲಾಗಿತ್ತು. ದೆಹಲಿಯ ಆನಂದ್ ವಿಹಾರ್ ಟರ್ಮಿನಲ್ ರೈಲ್ವೆ ನಿಲ್ದಾಣದಲ್ಲೂ ಇದೇ ಪರಿಸ್ಥಿತಿ ಕಂಡುಬಂದಿದೆ.

20 ವಿಮಾನಗಳು ತಡ ಪ್ರತಿಕೂಲ ಹವಾಮಾನದಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಸುಮಾರು 20 ವಿಮಾನಗಳು ತಡವಾಗಿ ಹಾರಾಟ ನಡೆಸಿವೆ. ಹವಾಮಾನ ವೈಪರೀತ್ಯದಿಂದಾಗಿ ವಿಮಾನ ತಡವಾಯಿತು ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಆದರೂ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ಮಾರ್ಗವನ್ನು ಬದಲಾಯಿಸಲಾಗಿಲ್ಲ.

ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಚಳಿಗಾಳಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವು ಪ್ರದೇಶಗಳಲ್ಲಿ ಶೀತಗಾಳಿ ಬೀಸುತ್ತಿದೆ. ಮುಂದಿನ 48 ಗಂಟೆಗಳಲ್ಲಿ ಪೂರ್ವ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮತ್ತು ಉತ್ತರಾಖಂಡ, ಪಶ್ಚಿಮ ರಾಜಸ್ಥಾನದ ಪ್ರತ್ಯೇಕ ಪಾಕೆಟ್‌ಗಳಲ್ಲಿ ತೀವ್ರ ಚಳಿಯಾಗುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ