AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ರಾಜೀನಾಮೆ, ಸರ್ಕಾರ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದೆ

ಅರವಿಂದ್​​​ ಕೇಜ್ರಿವಾಲ್​​​ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುವೇ ಎಂದಿದ್ದರು. ಆದರೆ ಇಂದು ಪಕ್ಷ ಮತ್ತು ಸರ್ಕಾರ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದೆ. ನಾನು ನನ್ನ ರಾಜೀನಾಮೆಯನ್ನು ಮುಖ್ಯಮಂತ್ರಿ ಕಚೇರಿಗೆ ಕಳುಹಿಸಿದ್ದೇನೆ ಎಂದು ರಾಜ್ ಕುಮಾರ್ ಆನಂದ್ ಹೇಳಿದ್ದಾರೆ.

ದೆಹಲಿ: ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ರಾಜೀನಾಮೆ, ಸರ್ಕಾರ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದೆ
ರಾಜ್ ಕುಮಾರ್ ಆನಂದ್
TV9 Web
| Edited By: |

Updated on:Apr 10, 2024 | 5:27 PM

Share

ದೆಹಲಿ, ಏ.10: ದೆಹಲಿಯ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜ್ ಕುಮಾರ್ ಆನಂದ್ (Raaj Kumar Anand) ತಮ್ಮ ಸಚಿವ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಎಎಪಿಯ ನೀತಿಯಿಂದ ಅತೃಪ್ತನಾಗಿ ಈ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಅರವಿಂದ್​​​ ಕೇಜ್ರಿವಾಲ್​​​ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುವೇ ಎಂದಿದ್ದರು. ಆದರೆ ಇಂದು ಪಕ್ಷ ಮತ್ತು ಸರ್ಕಾರ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದೆ. ನಾನು ನನ್ನ ರಾಜೀನಾಮೆಯನ್ನು ಮುಖ್ಯಮಂತ್ರಿ ಕಚೇರಿಗೆ ಕಳುಹಿಸಿದ್ದೇನೆ ಎಂದು ರಾಜ್ ಕುಮಾರ್ ಆನಂದ್ ಹೇಳಿದ್ದಾರೆ.

ರಾಜ್ ಕುಮಾರ್ ಆನಂದ್ ಅವರು ಪಟೇಲ್ ನಗರ ಪ್ರದೇಶದ ಶಾಸಕರಾಗಿದ್ದು, ಕೇಜ್ರಿವಾಲ್ ನೇತೃತ್ವದ ದೆಹಲಿ ಸಂಪುಟದಲ್ಲಿ ಸಮಾಜ ಕಲ್ಯಾಣ ಮತ್ತು SC/ST ಸಚಿವರಾಗಿದ್ದರು. ಆಮ್ ಆದ್ಮಿ ಪಕ್ಷ ಹುಟ್ಟಿದ್ದು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಆದರೆ ಇಂದು ಪಕ್ಷ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದೆ, ಹಾಗಾಗಿ ಈ ಪರಿಸ್ಥಿತಿಯಲ್ಲಿ ನನಗೆ ಸಚಿವ ಸ್ಥಾನದಲ್ಲಿ ಇರಲು ಸಾಧ್ಯವಾಗುತ್ತಿಲ್ಲ, ಹಾಗೂ ಕೆಲಸ ಮಾಡಲು ಇಷ್ಟವಿಲ್ಲ ಎಂದು ರಾಜ್ ಕುಮಾರ್ ಆನಂದ್ ಹೇಳಿದ್ದಾರೆ.

ನಾನು ಸಚಿವ ಸ್ಥಾನಕ್ಕೆ ಮತ್ತು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಈ ಭ್ರಷ್ಟಾಚಾರದೊಂದಿಗೆ ನನ್ನ ಹೆಸರನ್ನು ಜೋಡಿಸಿ ಎಂದು ಹೇಳಿದ್ದಾರೆ. ರಾಜಕೀಯ ಬದಲಾದ ನಂತರ ದೇಶ ಬದಲಾಗುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದರು, ರಾಜಕೀಯ ಬದಲಾಗಿಲ್ಲ, ಆದರೆ ರಾಜಕಾರಣಿ ಬದಲಾಗಿದ್ದಾರೆ. ಇದಲ್ಲದೆ, ದಲಿತರಿಗೆ ಪಕ್ಷದಲ್ಲಿ ಸೂಕ್ತ ಪ್ರಾತಿನಿಧ್ಯವಿಲ್ಲ. ಎಎಪಿಯಲ್ಲಿ ದಲಿತ ಶಾಸಕರು, ಸಚಿವರು ಅಥವಾ ಕೌನ್ಸಿಲರ್‌ಗಳಿಗೆ ಯಾವುದೇ ಗೌರವ ನೀಡಿಲ್ಲ ಎಂದು ಕಿಡಿಕಾರಿದ್ದಾರೆ.

ಸಮಾಜಕ್ಕೆ ಹಣ ಕೊಡಲು ಸಚಿವನಾದೆ, ದಲಿತ ಪ್ರಾತಿನಿಧ್ಯದ ವಿಚಾರ ಬಂದಾಗ ಹಿಂದೆ ಸರಿಯುವ ಪಕ್ಷದ ಭಾಗವಾಗಲು ನಾನು ಬಯಸುವುದಿಲ್ಲ, ನಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಎಂದರು. ನಮ್ಮಲ್ಲಿ 13 ರಾಜ್ಯಸಭಾ ಸಂಸದರಿದ್ದಾರೆ, ಆದರೆ ಅವರಲ್ಲಿ ಯಾರೂ ದಲಿತ, ಮಹಿಳೆ ಅಥವಾ ಹಿಂದುಳಿದ ವರ್ಗದವರಲ್ಲ. ಈ ಪಕ್ಷದಲ್ಲಿ ದಲಿತ ಶಾಸಕರು, ಕೌನ್ಸಿಲರ್‌ಗಳು ಮತ್ತು ಮಂತ್ರಿಗಳಿಗೆ ಗೌರವವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಎಲ್ಲಾ ದಲಿತರು ಮೋಸ ಹೋದ ಭಾವನೆ ಇದೆ. ಹಾಗಾಗಿ ಈ ಪಕ್ಷದಲ್ಲಿ ಉಳಿಯುವುದು ಕಷ್ಟ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ಕೇಜ್ರಿವಾಲ್

ಕಳೆದ ವರ್ಷ ಜಾರಿ ನಿರ್ದೇಶನಾಲಯದ ಅಕ್ರಮ ಹಣ ವರ್ಗಾವಣೆ ಪ್ರಕರಣದ ವರದಿಯಲ್ಲಿ ರಾಜ್ ಕುಮಾರ್ ಆನಂದ್ ಅವರ ಹೆಸರು ಕೂಡ ಉಲ್ಲೇಖಿಸಲಾಗಿತ್ತು. ಇಡಿ ಅವರ ಮನೆಯ ಮೇಲೆಯೂ ದಾಳಿಯನ್ನು ನಡೆಸಿತ್ತು. ಈ ಬಗ್ಗೆ ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಜಾರಿ ನಿರ್ದೇಶನಾಲಯದ ವಿರುದ್ಧ ದೂರು ಕೂಡ ನೀಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Wed, 10 April 24

Follow Us
Web contact
Web contact

TV9 Kannada

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ