AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಕಲ್ಲು ಮಳೆಯಿಂದ ಇಂಡಿಗೋ ವಿಮಾನದ ಮುಂಭಾಗಕ್ಕೆ ಹಾನಿ; ಪ್ರಯಾಣಿಕರ ಕಿರುಚಾಟದ ಮಧ್ಯೆ ತುರ್ತು ಭೂಸ್ಪರ್ಶ

ಹವಾಮಾನ ವೈಪರೀತ್ಯದಿಂದಾಗಿ ದೆಹಲಿ-ಶ್ರೀನಗರ ಇಂಡಿಗೋ ವಿಮಾನದ ಮುಂಭಾಗಕ್ಕೆ ಹಾಬಿಯಾಗಿದೆ. ಆಲಿಕಲ್ಲು ಮಳೆಯಿಂದಾಗಿ ದೆಹಲಿಯಿಂದ ಶ್ರೀನಗರಕ್ಕೆ 227 ಜನರನ್ನು ಹೊತ್ತೊಯ್ಯುತ್ತಿದ್ದ ಇಂಡಿಗೋ ವಿಮಾನವು ಗಾಳಿಯಲ್ಲಿ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತು. ಇದರಿಂದ ಗಾಬರಿಯಾದ ಪ್ರಯಾಣಿಕರು ವಿಮಾನದೊಳಗೆ ಕುಳಿತು ಕಿರುಚಾಡುತ್ತಾ, ದೇವರಲ್ಲಿ ಪ್ರಾರ್ಥನೆ ಮಾಡುತ್ತಾ ಗೋಳಾಡುವ ವಿಡಿಯೋಗಳನ್ನು ಪ್ರಯಾಣಿಕರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಕ್ಷಣ ಇಂಡಿಗೋ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ಆಲಿಕಲ್ಲು ಮಳೆಯಿಂದ ಇಂಡಿಗೋ ವಿಮಾನದ ಮುಂಭಾಗಕ್ಕೆ ಹಾನಿ; ಪ್ರಯಾಣಿಕರ ಕಿರುಚಾಟದ ಮಧ್ಯೆ ತುರ್ತು ಭೂಸ್ಪರ್ಶ
Indigo Flight
ಸುಷ್ಮಾ ಚಕ್ರೆ
|

Updated on: May 21, 2025 | 10:34 PM

Share

ನವದೆಹಲಿ, ಮೇ 21: ದೆಹಲಿಯಿಂದ ಶ್ರೀನಗರಕ್ಕೆ 227 ಜನರನ್ನು ಹೊತ್ತು ಹೋಗುತ್ತಿದ್ದ ಇಂಡಿಗೋ ವಿಮಾನವು ಇಂದು ಆಕಾಶದಲ್ಲಿ ಆಲಿಕಲ್ಲು ಮಳೆಗೆ ಸಿಲುಕಿದ ನಂತರ ತುರ್ತು ಭೂಸ್ಪರ್ಶ ಮಾಡಿತು. ಹವಾಮಾನ ವೈಪರೀತ್ಯದಿಂದ ಲ್ಯಾಂಡ್ ಆಗಲು ಪರದಾಡಿದ ವಿಮಾನ ಕೊನೆಗೆ ಸಂಜೆ 6.30ಕ್ಕೆ ಸುರಕ್ಷಿತವಾಗಿ ಕೆಳಗೆ ಇಳಿಯಿತು. ಹವಾಮಾನದ ತೊಂದರೆಯಿಂದಾಗಿ ಪೈಲಟ್ ಶ್ರೀನಗರದ ವಾಯು ಸಂಚಾರ ನಿಯಂತ್ರಣ (ಎಟಿಸಿ)ಗೆ ತುರ್ತು ಪರಿಸ್ಥಿತಿ ಘೋಷಿಸಿದರು. ಈ ಭಯಾನಕ ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ವಿಮಾನವು ತೀವ್ರವಾಗಿ ಅಲುಗಾಡುತ್ತಿದ್ದಂತೆ ಪ್ರಯಾಣಿಕರು ಕಿರುಚುವುದು, ಅಳುವುದು ಮತ್ತು ಪ್ರಾರ್ಥಿಸುವುದನ್ನು ನೋಡಬಹುದು.

ಈ ಭಯಾನಕ ಪರಿಸ್ಥಿತಿಯ ಹೊರತಾಗಿಯೂ ಇಂಡಿಗೋ ವಿಮಾನವು ಸಂಜೆ 6.30ಕ್ಕೆ ಶ್ರೀನಗರದಲ್ಲಿ ಸುರಕ್ಷಿತವಾಗಿ ಇಳಿಯಿತು. ಇಲ್ಲಿಯವರೆಗೆ ಯಾವುದೇ ಅಧಿಕೃತ ಗಾಯಗಳು ವರದಿಯಾಗಿಲ್ಲ. ಆರಂಭಿಕ ವರದಿಗಳು ವಿಮಾನದ ಮುಂಭಾಗ ಜಖಂ ಆಗಿದೆ ಎಂದು ಹೇಳಿವೆ. ಅದರ ಫೋಟೋ ಕೂಡ ಹರಿದಾಡುತ್ತಿದೆ.

ಬಹುಶಃ ಹಾರಾಟದ ಸಮಯದಲ್ಲಿ ಹವಾಮಾನ ಸಂಬಂಧಿತ ಪರಿಣಾಮದಿಂದಾಗಿ ಈ ಹಾನಿ ಉಂಟಾಗಿರಬಹುದು.

“ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ 6E2142 ಕೆಟ್ಟ ಹವಾಮಾನ (ಆಲಿಕಲ್ಲು ಮಳೆ) ಅನುಭವಿಸಿತು. ಇದನ್ನು ಪೈಲಟ್ ATC SXR (ಶ್ರೀನಗರ)ಕ್ಕೆ ವರದಿ ಮಾಡಿದ್ದಾರೆ” ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಎಲ್ಲಾ ವಿಮಾನ ಸಿಬ್ಬಂದಿ ಮತ್ತು 227 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ” ಎಂದು ಅಧಿಕಾರಿ ದೃಢಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!