AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಬಿಸಿಲ ಬೇಗೆ; ಗರಿಷ್ಠ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್ ದಾಖಲಿಸಿದ ದೆಹಲಿ

ಐಎಂಡಿಯ ಮುನ್ಸೂಚನೆಯು ಮುಂಬರುವ ದಿನಗಳಲ್ಲಿ ಇಲ್ಲಿ ಬಿಸಿಲ ಕಾವು ಏರಬಹುದು ಎಂಬುದನ್ನು ಸೂಚಿಸುತ್ತದೆ. "ಪಂಜಾಬ್, ಹರ್ಯಾಣ ಮತ್ತು ಚಂಡೀಗಢದ ಹೆಚ್ಚಿನ ಸ್ಥಳಗಳಲ್ಲಿ, ದೆಹಲಿ, ಉತ್ತರ ಪ್ರದೇಶ, ಮತ್ತು ರಾಜಸ್ಥಾನದ ಮೇಲೆ ಮತ್ತು ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿಲು ಹೆಚ್ಚಾಗಬಹುದು. 

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಬಿಸಿಲ ಬೇಗೆ; ಗರಿಷ್ಠ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್ ದಾಖಲಿಸಿದ ದೆಹಲಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 29, 2024 | 5:51 PM

Share

ದೆಹಲಿ ಮೇ 29: ಭಾರತದ ಹವಾಮಾನ ಇಲಾಖೆ (IMD) ಪ್ರಕಾರ, ದೆಹಲಿಯಲ್ಲಿ (Delhi) ತಾಪಮಾನವು (Temperature) 52.3 ಡಿಗ್ರಿ ಸೆಲ್ಸಿಯಸ್‌ಗೆ ಏರಿದೆ. ಇದು ದಾಖಲೆ ಆಗಿದ್ದು ದೆಹಲಿಯ ಉಪನಗರವಾದ ಮುಂಗೇಶ್‌ಪುರದಲ್ಲಿ ಇಷ್ಟೊಂದು ಬಿಸಿಲು ದಾಖಲಾಗಿದೆ. ನಗರದ ಇತಿಹಾಸದಲ್ಲಿ ಮೊದಲ ಬಾರಿಗೆ ತಾಪಮಾನವು 50 ಡಿಗ್ರಿ ಸೆಲ್ಸಿಯಸ್ ದಾಟಿದೆ. ಮುಂಗೇಶಪುರದ ಹವಾಮಾನ ಕೇಂದ್ರವು 52.3 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿದರೆ, ನರೇಲಾದಲ್ಲಿ ಮಧ್ಯಾಹ್ನ 2.30 ಕ್ಕೆ 47.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮಂಗಳವಾರ, ವಾಯುವ್ಯ ದೆಹಲಿ ಪ್ರದೇಶದ ಹವಾಮಾನ ಕೇಂದ್ರವು 49.9 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ಇದು ದೆಹಲಿಯಲ್ಲಿ ಇದುವರೆಗೆ ದಾಖಲಾದ ಗರಿಷ್ಠ ತಾಪಮಾನವಾಗಿದೆ ಎಂದು ಐಎಂಡಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಐಎಂಡಿಯ ಮುನ್ಸೂಚನೆಯು ಮುಂಬರುವ ದಿನಗಳಲ್ಲಿ ಇಲ್ಲಿ ಬಿಸಿಲ ಕಾವು ಏರಬಹುದು ಎಂಬುದನ್ನು ಸೂಚಿಸುತ್ತದೆ. “ಪಂಜಾಬ್, ಹರ್ಯಾಣ ಮತ್ತು ಚಂಡೀಗಢದ ಹೆಚ್ಚಿನ ಸ್ಥಳಗಳಲ್ಲಿ, ದೆಹಲಿ, ಉತ್ತರ ಪ್ರದೇಶ, ಮತ್ತು ರಾಜಸ್ಥಾನದ ಮೇಲೆ ಮತ್ತು ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿಲು ಹೆಚ್ಚಾಗಬಹುದು.  ಪಂಜಾಬ್, ಹರ್ಯಾಣ, ಚಂಡೀಗಢ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ರಾತ್ರಿ ಹೊತ್ತು ಸೆಖೆ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆಯಿದೆ. ಎಲ್ಲಾ ವಯಸ್ಸಿನವರಿಗೂ ಶಾಖದ ಕಾಯಿಲೆ ಮತ್ತು ಹೀಟ್ ಸ್ಟ್ರೋಕ್ ಆಗುವ ಸಾಧ್ಯತೆ ಇದೆ. ದುರ್ಬಲ ಜನರು ತೀವ್ರ ಕಾಳಜಿ ವಹಿಸಬೇಕು ಎಂದು ಐಎಂಡಿ ಹೇಳಿದೆ.

ಬಿಸಿಲ ಧಗೆ ಏರಿದ್ದು , ಕೆಲವು ಪ್ರದೇಶಗಳಿಗೆ ಸರಬರಾಜನ್ನು ಕಡಿತಗೊಳಿಸುವುದರಿಂದ ನವದೆಹಲಿ ಅಧಿಕಾರಿಗಳು ನೀರಿನ ಕೊರತೆಯ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ನೀರನ್ನು ವ್ಯರ್ಥ ಮಾಡದೇ ಇರುವುದು “ಸಾಮೂಹಿಕ ಜವಾಬ್ದಾರಿ” ಎಂದು ದೆಹಲಿ ಜಲ ಸಚಿವೆ ಅತಿಶಿ ಕರೆ ನೀಡಿದ್ದಾರೆ.

ಇದನ್ನೂ ಓದಿ: ‘ಮೋದಿಯನ್ನು ಸೋಲಿಸಿ’ ಎಂದು ಬಹಿರಂಗ ಕರೆ ನೀಡಿದ ಪಾಕಿಸ್ತಾನದ ಮಾಜಿ ಸಚಿವ

ಮೇ 30 ರಿಂದ ಚಾಲ್ತಿಯಲ್ಲಿರುವ ಶಾಖದ ಅಲೆಯ ಪರಿಸ್ಥಿತಿಗಳು ಕ್ರಮೇಣ ಕಡಿಮೆಯಾಗುವ ಮುನ್ಸೂಚನೆಯಿರುವುದರಿಂದ ವಾಯುವ್ಯ ಮತ್ತು ಮಧ್ಯ ಭಾರತದ ನಿವಾಸಿಗಳು ಸ್ವಲ್ಪ ಬಿಡುವು ನಿರೀಕ್ಷಿಸಬಹುದು. ಈ ಪ್ರದೇಶಗಳಲ್ಲಿ ಮುಂದಿನ 3-4 ದಿನಗಳಲ್ಲಿ ಗರಿಷ್ಠ ತಾಪಮಾನವು 3-4 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆ ಆಗಲಿದೆ.

ನಾಳೆಯಿಂದ ಪಂಜಾಬ್, ಹರ್ಯಾಣ-ಚಂಡೀಗಢ-ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಬಿಸಿಗಾಳಿಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ. ಪರಿಸ್ಥಿತಿ ಸ್ವಲ್ಪ ಸುಧಾರಿಸಿದರೂ ಜೂನ್ 1 ರವರೆಗೆ ಪ್ರತ್ಯೇಕ ಪ್ರದೇಶಗಳಲ್ಲಿ ಶಾಖದ ಅಲೆ ಇದ್ದೇ ಇರುತ್ತದೆ ಎಂದು ಐಎಂಡಿ ಹೇಳಿದೆ.

ದೆಹಲಿ ನಗರ ಹಾಗೂ ಎನ್‌ಸಿಆರ್ ಸುತ್ತಮುತ್ತ ತುಂತುರು ಮಳೆ

ದಾಖಲೆ ತಾಪಮಾನದಿಂದ ತತ್ತರಿಸಿದ್ದ ದೆಹಲಿಯಲ್ಲಿ ಬುಧವಾರ ಸಂಜೆ ಹೊತ್ತಿಗೆ ತುಂತುರು ಮಳೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Wed, 29 May 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!