AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಕತ್ತು ಹಿಸುಕಿ ಕೊಂದು ಚರಂಡಿಗೆ ಎಸೆದ ಟೈಲರ್

ದೆಹಲಿಯ ಚರಂಡಿಯಲ್ಲಿ ಹಣದ ವಿಚಾರದಲ್ಲಿ ಜಗಳವಾಡಿದ ಟೈಲರ್ ಮಹಿಳೆಯ ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಆಕೆಯ ಮೃತದೇಹವನ್ನು ಚರಂಡಿಗೆ ಎಸೆದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ 35 ವರ್ಷದ ಟೈಲರ್ ಅನ್ನು ಬಂಧಿಸಲಾಗಿದೆ. ಮಹಿಳೆ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಮಹಿಳೆಯ ಕತ್ತು ಹಿಸುಕಿ ಕೊಂದು ಚರಂಡಿಗೆ ಎಸೆದ ಟೈಲರ್
Crime News
ಸುಷ್ಮಾ ಚಕ್ರೆ
|

Updated on:Aug 25, 2025 | 3:33 PM

Share

ನವದೆಹಲಿ, ಆಗಸ್ಟ್ 25: ಹಣದ ವಿಚಾರದಲ್ಲಿ ಉಂಟಾದ ಜಗಳದಿಂದಾಗಿ ದೆಹಲಿಯಲ್ಲಿ (Delhi Crime)  ಮಹಿಳೆಯ ಕತ್ತು ಹಿಸುಕಿ ಆಕೆಯ ಮೃತದೇಹವನ್ನು ಚರಂಡಿಗೆ ಎಸೆದ ಘಟನೆ ನಡೆದಿದೆ. ಈ ಕೊಲೆ ಮಾಡಿದ 35 ವರ್ಷದ ಟೈಲರ್ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಂದಾಪುರ ನಿವಾಸಿಯಾಗಿರುವ ಮೃತ ಮಹಿಳೆ ಆಗಸ್ಟ್ 21ರಂದು ನಾಪತ್ತೆಯಾಗಿದ್ದಾರೆ ಎಂದು ಆಕೆಯ ತಾಯಿ ದೂರು ನೀಡಿದ್ದರು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆ ಮಹಿಳೆಯ ಕೊನೆಯ ಚಲನವಲನಗಳನ್ನು ಪತ್ತೆಹಚ್ಚಲು ಪ್ರಯತ್ನಿಸಿದ್ದಾರೆ.

ಆಗಸ್ಟ್ 23ರಂದು ಮಧ್ಯಾಹ್ನ 2.54ರ ಸುಮಾರಿಗೆ ಪೊಲೀಸ್ ಠಾಣೆಗೆ ಯಾರೋ ಮೃತದೇಹವನ್ನು ಕಂಡವರು ಫೋನ್ ಮಾಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಆ ಮೃತದೇಹವನ್ನು ಪತ್ತೆಹಚ್ಚಿದ ಪೊಲೀಸರು ತನಿಖೆ ನಡೆಸಿದ್ದಾರೆ.

ಪ್ರಾಥಮಿಕ ತನಿಖೆಯ ನಂತರ ಆ ಮೃತದೇಹ ಕಾಣೆಯಾದ ಮಹಿಳೆಯದ್ದಾಗಿದ್ದು, ಆಗಸ್ಟ್ 21ರಂದು ಆಕೆಯ ತಾಯಿ ತನ್ನ ಮಗಳು ಕಾಣೆಯಾಗಿರುವುದಾಗಿ ದೂರು ನೀಡಿದ್ದರು.

ಇದನ್ನೂ ಓದಿ: ಅಪಾರ್ಟ್​​ಮೆಂಟ್​ನ ಲಿಫ್ಟ್​​ ಒಳಗೆ ಸಿಲುಕಿ 5 ವರ್ಷದ ಬಾಲಕ ಸಾವು

ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶಿಲಿಸಿ, ತಾಂತ್ರಿಕ ಕಣ್ಗಾವಲು ಬಳಸಿ ಆ ಮಹಿಳೆಯ ಕೊನೆಯ ಚಲನವಲನಗಳನ್ನು ಪತ್ತೆಹಚ್ಚಿದರು. ಆಗಸ್ಟ್ 21ರಂದು ಕೊನೆಯ ಬಾರಿಗೆ ಆಕೆಯ ಮನೆಗೆ ಟೈಲರ್ ಬಂದಿದ್ದ. ಆತ ಉತ್ತರ ಪ್ರದೇಶದ ಹಾರ್ಡೋಯ್ ಮೂಲದ ಸಲೀಮ್ ಎಂದು ಗುರುತಿಸಲಾಗಿದೆ. ಆತನ ವಿಚಾರಣೆ ನಡೆಸಿದಾಗ ಕೊಲೆಯ ಸಂಗತಿ ಬೆಳಕಿಗೆ ಬಂದಿದೆ.

“ಬಳಿಕ, ಆ ಆರೋಪಿಯು ಅಡಗಿಸಿಟ್ಟ ಮಹಿಳೆಯ ಶವದೊಂದಿಗೆ ಆ ಕಟ್ಟಡದಿಂದ ಹೊರಬರುತ್ತಿರುವುದು ಕಂಡುಬಂದಿದೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಏನಿದು ಅಸಹ್ಯ, ಬೇಕರಿಯಲ್ಲಿ ಬಾಲಕಿಗೆ ಮುತ್ತಿಟ್ಟು, ಬಾಯೊಳಗೆ ಬೆರಳು ಹಾಕಿದ ವ್ಯಕ್ತಿ

ಸಲೀಮ್ ಮತ್ತು ಆ ಮಹಿಳೆ ಪರಸ್ಪರ ಪರಿಚಿತರಾಗಿದ್ದರು. ಅವರಿಬ್ಬರೂ ಸಾಕಷ್ಟು ತಿಂಗಳಿಂದ ಸಂಪರ್ಕದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆ ಮಹಿಳೆ ತನಗೆ ನೀಡಬೇಕಿದ್ದ ಹಣವನ್ನು ವಾಪಾಸ್ ಕೊಡುವಂತೆ ಕೇಳುತ್ತಿದ್ದರು. ಇದು ಅವರಿಬ್ಬರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು ಎನ್ನಲಾಗಿದೆ.

“ಕೋಪದ ಭರದಲ್ಲಿ ಆ ಟೈಲರ್ ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಬೈಕ್​ನಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗಿ ಚರಂಡಿಗೆ ಎಸೆದಿದ್ದಾನೆ. ಆದರೆ ಅದನ್ನು ಕೆಲವರು ನೋಡಿದ್ದರಿಂದ ಹೆಸರಿದ ಸಲೀಮ್ ಆ ಸ್ಥಳದಿಂದ ಪರಾರಿಯಾಗಿದ್ದಾನೆ” ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Mon, 25 August 25

Follow Us
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ