AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ನಕಲಿ ಕೆವೈಸಿ ಮೂಲಕ ಚಹಾ ವ್ಯಾಪಾರಿಗೆ 90,000 ರೂ. ವಂಚನೆ; ಮೂವರ ಬಂಧನ

ದೆಹಲಿಯಲ್ಲಿ ಚಹಾ ವ್ಯಾಪಾರಿಯೊಬ್ಬರಿಗೆ ಕೆವೈಸಿ (KYC) ಅಪ್‌ಡೇಟ್ ಮಾಡುವ ನೆಪದಲ್ಲಿ 90,000 ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ದೊಡ್ಡ ಮಟ್ಟದ ಅಂತರರಾಜ್ಯ ಸೈಬರ್ ಜಾಲವನ್ನು ಪತ್ತೆಹಚ್ಚಿದ್ದಾರೆ. ವಂಚಕನೊಬ್ಬ ತಾನು ಪ್ರಮುಖ ಡಿಜಿಟಲ್ ಪೇಮೆಂಟ್ ಕಂಪನಿಯೊಂದರ ಉದ್ಯೋಗಿ ಎಂದು ಪರಿಚಯಿಸಿಕೊಂಡು ಚಹಾ ಅಂಗಡಿಗೆ ಬಂದಿದ್ದನು. ವ್ಯಾಪಾರಿಯ ಮೊಬೈಲ್‌ನಲ್ಲಿ ಪೇಮೆಂಟ್ ಆಪ್‌ನ ಸೆಟ್ಟಿಂಗ್ಸ್ ಸರಿಪಡಿಸಿಕೊಡುವ ಮತ್ತು ಕೆವೈಸಿ (KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ನೆಪದಲ್ಲಿ ಆತನ ವಿಶ್ವಾಸ ಗಳಿಸಿದ್ದ.

ದೆಹಲಿಯಲ್ಲಿ ನಕಲಿ ಕೆವೈಸಿ ಮೂಲಕ ಚಹಾ ವ್ಯಾಪಾರಿಗೆ 90,000 ರೂ. ವಂಚನೆ; ಮೂವರ ಬಂಧನ
Crime News Image Credit source: TV9
ಸುಷ್ಮಾ ಚಕ್ರೆ
|

Updated on: May 27, 2026 | 8:09 PM

Share

ನವದೆಹಲಿ, ಮೇ 27: ಮೊಬೈಲ್ ಆಪ್‌ಗಳಲ್ಲಿ ಕೆವೈಸಿ (KYC) ಅಪ್‌ಡೇಟ್ ಮಾಡುವ ನೆಪದಲ್ಲಿ ಚಹಾ ವ್ಯಾಪಾರಿಯೊಬ್ಬರಿಂದ 90,000 ರೂ. ಹಣ ದೋಚಿದ್ದ ಅಂತಾರಾಜ್ಯ ಸೈಬರ್ ವಂಚಕರ ಜಾಲವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚಕನೊಬ್ಬ ತಾನು ಪ್ರಮುಖ ಡಿಜಿಟಲ್ ಪೇಮೆಂಟ್ ಕಂಪನಿಯೊಂದರ ಉದ್ಯೋಗಿ ಎಂದು ಪರಿಚಯಿಸಿಕೊಂಡು ಚಹಾ ಅಂಗಡಿಗೆ ಬಂದಿದ್ದ. ಆತ ವ್ಯಾಪಾರಿಯ ಮೊಬೈಲ್‌ನಲ್ಲಿ ಪೇಮೆಂಟ್ ಆಪ್‌ನ ಸೆಟ್ಟಿಂಗ್ಸ್ ಸರಿಪಡಿಸಿಕೊಡುವ ಮತ್ತು ಕೆವೈಸಿ (KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ನೆಪದಲ್ಲಿ ಆತನ ನಂಬಿಕೆ ಗಳಿಸಿದ್ದ.

ದೆಹಲಿಯ ಸೌತ್ ಪಟೇಲ್ ನಗರದ ಚಹಾ ವ್ಯಾಪಾರಿಯೊಬ್ಬರು ಈ ವಂಚನೆಗೆ ಒಳಗಾಗಿದ್ದಾರೆ. ಡಿಜಿಟಲ್ ಪೇಮೆಂಟ್ ಕಂಪನಿಯೊಂದರ ಉದ್ಯೋಗಿಯಂತೆ ನಟಿಸಿ ಬಂದಿದ್ದ ವ್ಯಕ್ತಿಯೊಬ್ಬ, ವ್ಯಾಪಾರಿಯ ಮೊಬೈಲ್‌ನಲ್ಲಿ ಕೆವೈಸಿ (KYC) ಪ್ರಕ್ರಿಯೆ ಮತ್ತು ಆಪ್ ಸೆಟ್ಟಿಂಗ್ಸ್ ಸರಿಪಡಿಸಿಕೊಡುವುದಾಗಿ ನಂಬಿಸಿದ್ದ. ವ್ಯಾಪಾರಿಯ ವಿಶ್ವಾಸಗಳಿಸಿ ಆತನ ಮೊಬೈಲ್ ಪಡೆದುಕೊಂಡ ವಂಚಕ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 90,000 ರೂ. ಹಣವನ್ನು ವರ್ಗಾಯಿಸಿಕೊಂಡು ಪರಾರಿಯಾಗಿದ್ದ.

ಇದನ್ನೂ ಓದಿ: ದಿನಕ್ಕೆ 400 ರೂ. ಆಸೆ ತೋರಿಸಿ 13 ಸಾವಿರ ಜನರನ್ನು ಲೂಟಿ ಮಾಡಿದ ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

ಆ ವ್ಯಾಪಾರಿ ಮೇ 15ರಂದು ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಸ್ಥಳೀಯರ ಮಾಹಿತಿ ಆಧಾರದ ಮೇಲೆ ಹರಿಯಾಣದ ಪಂಚಕುಲ, ಪಂಜಾಬ್‌ನ ಜಿರಾಕ್‌ಪುರ ಸೇರಿದಂತೆ ಹಲವು ಕಡೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಲಾಯಿತು. ಬಂಧಿತರನ್ನು ಹರಿಯಾಣದ ಪಂಚಕುಲ ನಿವಾಸಿಗಳಾದ ವಿಶೇಷ್ ಸಿಂಗ್, ಸಚಿನ್ ಮೌರ್ಯ (22) ಮತ್ತು ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಆಶಿಶ್ ಶರ್ಮಾ (27) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸೈಬರ್ ವಂಚನೆಗೆ ಬಳಸುತ್ತಿದ್ದ ಮೊಬೈಲ್ ಫೋನ್‌ಗಳು ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಮಂಡ್ಯ: ಪತ್ನಿಗೆ ಶ್ರೀಮಂತಿಕೆ ತೋರಿಸಲು ಕಳ್ಳತನಕ್ಕಿಳಿದ ಪತಿ! ಕೃತ್ಯ ನಿಲ್ಲಿಸಿದ ವರ್ಷದ ಬಳಿಕ ಮೂವರು ಸಹಚರರೊಂದಿಗೆ ಅಂದರ್

ಬ್ಯಾಂಕ್ ಖಾತೆಗಳ ಅಕ್ರಮ ಜಾಲ:

ಪೊಲೀಸ್ ಅಧಿಕಾರಿಗಳ ಪ್ರಕಾರ, ಈ ಬಂಧಿತರು ಕೇವಲ ಸ್ಥಳೀಯ ವಂಚಕರಲ್ಲ. ಇವರು ದೇಶದ ವಿವಿಧ ರಾಜ್ಯಗಳಲ್ಲಿ ಸೈಬರ್ ಅಪರಾಧ ಎಸಗುವ ದೊಡ್ಡ ಸಿಂಡಿಕೇಟ್‌ಗಳಿಗೆ ನಕಲಿ/ಬಾಡಿಗೆ ಬ್ಯಾಂಕ್ ಖಾತೆಗಳು (Mule Accounts), ಸಿಮ್ ಕಾರ್ಡ್‌ಗಳು ಮತ್ತು ಎಟಿಎಂ ಕಾರ್ಡ್‌ಗಳನ್ನು ಪೂರೈಸುವ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನುಳಿದ ಆರೋಪಿಗಳ ಪತ್ತೆಗೆ ಹಾಗೂ ಹಣ ವರ್ಗಾವಣೆಯ ಸಂಪೂರ್ಣ ಜಾಲವನ್ನು ಭೇದಿಸಲು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us