Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

ಭಾರತ ಹಾಗೂ ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ್ದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಾಗಿದೆ. ದೆಹಲಿಯ ಶಾಲೆಯೊಂದರ 4 ವಿದ್ಯಾರ್ಥಿಗಳು, ತಮ್ಮ ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ಶಿಕ್ಷಕಿಯೊಬ್ಬರು ಅನ್ಯ ಕೋಮಿನ ವಿದ್ಯಾರ್ಥಿಯೊಬ್ಬರಿಗೆ ಕಪಾಳಮೋಕ್ಷ ಮಾಡಿಸಿದ್ದರು, ತೃಪ್ತಿ ತ್ಯಾಗಿ ಎಂಬ ಶಿಕ್ಷಕಿಯ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು. ಇದೀಗ 9ನೇ ತರಗತಿ ವಿದ್ಯಾರ್ಥಿಗಳ ಕುಟುಂಬದವರು ನೀಡಿರುವ ಹೇಳಿಕೆ ಮೇರೆಗೆ ದೆಹಲಿ ಪೊಲೀಸರು ಗಾಂಧಿನಗರದ ಸರ್ಕಾರಿ ಸರ್ವೋದಯ ಬಾಲ […]

ಭಾರತ-ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು
ಶಾಲೆImage Credit source: NDTV
Follow us
ನಯನಾ ರಾಜೀವ್
|

Updated on: Aug 29, 2023 | 12:20 PM

ಭಾರತ ಹಾಗೂ ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ್ದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಾಗಿದೆ. ದೆಹಲಿಯ ಶಾಲೆಯೊಂದರ 4 ವಿದ್ಯಾರ್ಥಿಗಳು, ತಮ್ಮ ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ಶಿಕ್ಷಕಿಯೊಬ್ಬರು ಅನ್ಯ ಕೋಮಿನ ವಿದ್ಯಾರ್ಥಿಯೊಬ್ಬರಿಗೆ ಕಪಾಳಮೋಕ್ಷ ಮಾಡಿಸಿದ್ದರು, ತೃಪ್ತಿ ತ್ಯಾಗಿ ಎಂಬ ಶಿಕ್ಷಕಿಯ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು.

ಇದೀಗ 9ನೇ ತರಗತಿ ವಿದ್ಯಾರ್ಥಿಗಳ ಕುಟುಂಬದವರು ನೀಡಿರುವ ಹೇಳಿಕೆ ಮೇರೆಗೆ ದೆಹಲಿ ಪೊಲೀಸರು ಗಾಂಧಿನಗರದ ಸರ್ಕಾರಿ ಸರ್ವೋದಯ ಬಾಲ ವಿದ್ಯಾಲಯದ ಶಿಕ್ಷಕಿ ಹೇಮಾ ಗುಲಾಟೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಭಜನೆಯ ಸಮಯದಲ್ಲಿ, ನೀವು ಪಾಕಿಸ್ತಾನಕ್ಕೆ ಹೋಗಲಿಲ್ಲ, ನೀವು ಭಾರತದಲ್ಲಿಯೇ ಇದ್ದೀರಿ, ಭಾರತದ ಸ್ವಾತಂತ್ರ್ಯದಲ್ಲಿ ನಿಮ್ಮ ಕೊಡುಗೆ ಇಲ್ಲ ಎಂದು ಹೇಳಿದ್ದಾಗಿ ವಿದ್ಯಾರ್ಥಿಗಳು ದೂರಿದ್ದಾರೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಮಕ್ಕಳಿಗೆ ಸೂಚಿಸಿದ ಶಿಕ್ಷಕಿ, ಇದು ಕೋಮುವಾದ ಎಂದ ನೆಟ್ಟಿಗರು

ಇಂತಹ ಹೇಳಿಕೆಗಳು ಶಾಲೆಯಲ್ಲಿ ವೈಷಮ್ಯಕ್ಕೆ ಕಾರಣವಾಗುತ್ತವೆ ಮತ್ತು ಶಿಕ್ಷಕರನ್ನು ವಜಾಗೊಳಿಸಬೇಕೆಂದು ವಿದ್ಯಾರ್ಥಿಗಳ ಕುಟುಂಬಗಳು ಒತ್ತಾಯಿಸಿವೆ. ಇದು ಸಂಪೂರ್ಣವಾಗಿ ತಪ್ಪು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಶಿಕ್ಷಕರು ಯಾವುದೇ ಧಾರ್ಮಿಕ ಅಥವಾ ಪವಿತ್ರ ಸ್ಥಳದ ವಿರುದ್ಧ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಕೂಡದು ಎಂದು ಶಾಸಕ ಅನಿಲ್ ಕುಮಾರ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು