AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣ ಬಿಸಿಲಿಗೆ ಉತ್ತರ ಭಾರತ ತತ್ತರ! ದಕ್ಷಿಣಕ್ಕೂ ಕಾದಿದೆಯಾ ಅಪಾಯ?

ದೆಹಲಿ: ಕೊರೊನಾ ಭೀತಿಯಿಂದ ತತ್ತರಿಸಿ ಕಳೆದ 2 ತಿಂಗಳಿನಿಂದ ಮನೆಗಳಲ್ಲೇ ಬಂಧಿಯಾಗಿದ್ದ ಜನರು ಮನೆಯಿಂದ ಹೊರಗೆ ಓಡಾಡೋ ಲೆಕ್ಕಾಚಾರದಲ್ಲಿದ್ರು. ಆದ್ರೆ ದೆಹಲಿ ಸೇರಿ ಉತ್ತರದ ಹಲವು ರಾಜ್ಯಗಳಲ್ಲಿ ಬೀಸುತ್ತಿರೋ ಬಿಸಿಗಾಳಿಗೆ ಜನರು ಬೆಚ್ಚಿಬಿದ್ದಿದ್ದಾರೆ. ಬೆಂಕಿಯನ್ನೇ ಉಗುಳುತ್ತಿರೋ ಬಿಸಿ ತಾಪಮಾನಕ್ಕೆ ಉತ್ತರ ಭಾರತ ಕಂಪ್ಲೀಟ್ ತತ್ತರಿಸಿಹೋಗಿದೆ. ಬರೀ ಉತ್ತರ ಮಾತ್ರವಲ್ಲ ದಕ್ಷಿಣಕ್ಕೂ ಅಪಾಯ ತಂದೊಡ್ಡೋ ಸಾಧ್ಯತೆಯಿದೆ. ಕೊರೊನಾ ಬೆಂಕಿ ಭಯಕ್ಕೆ ತುಪ್ಪ ಸುರಿಯುತ್ತಿದೆ ಬಿಸಿಗಾಳಿ..! ಇಡೀ ದೇಶ ಮುಂಗಾರಿಗೆ ಸಿದ್ಧವಾಗ್ತಿದ್ರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿರು ಬೇಸಿಗೆ ಶುರುವಾಗಿದೆ. […]

ರಣ ಬಿಸಿಲಿಗೆ ಉತ್ತರ ಭಾರತ ತತ್ತರ! ದಕ್ಷಿಣಕ್ಕೂ ಕಾದಿದೆಯಾ ಅಪಾಯ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: May 25, 2020 | 7:53 AM

Share

ದೆಹಲಿ: ಕೊರೊನಾ ಭೀತಿಯಿಂದ ತತ್ತರಿಸಿ ಕಳೆದ 2 ತಿಂಗಳಿನಿಂದ ಮನೆಗಳಲ್ಲೇ ಬಂಧಿಯಾಗಿದ್ದ ಜನರು ಮನೆಯಿಂದ ಹೊರಗೆ ಓಡಾಡೋ ಲೆಕ್ಕಾಚಾರದಲ್ಲಿದ್ರು. ಆದ್ರೆ ದೆಹಲಿ ಸೇರಿ ಉತ್ತರದ ಹಲವು ರಾಜ್ಯಗಳಲ್ಲಿ ಬೀಸುತ್ತಿರೋ ಬಿಸಿಗಾಳಿಗೆ ಜನರು ಬೆಚ್ಚಿಬಿದ್ದಿದ್ದಾರೆ. ಬೆಂಕಿಯನ್ನೇ ಉಗುಳುತ್ತಿರೋ ಬಿಸಿ ತಾಪಮಾನಕ್ಕೆ ಉತ್ತರ ಭಾರತ ಕಂಪ್ಲೀಟ್ ತತ್ತರಿಸಿಹೋಗಿದೆ. ಬರೀ ಉತ್ತರ ಮಾತ್ರವಲ್ಲ ದಕ್ಷಿಣಕ್ಕೂ ಅಪಾಯ ತಂದೊಡ್ಡೋ ಸಾಧ್ಯತೆಯಿದೆ.

ಕೊರೊನಾ ಬೆಂಕಿ ಭಯಕ್ಕೆ ತುಪ್ಪ ಸುರಿಯುತ್ತಿದೆ ಬಿಸಿಗಾಳಿ..! ಇಡೀ ದೇಶ ಮುಂಗಾರಿಗೆ ಸಿದ್ಧವಾಗ್ತಿದ್ರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿರು ಬೇಸಿಗೆ ಶುರುವಾಗಿದೆ. ಕಳೆದ ಗುರುವಾಗದಿಂದ ಸತತ 3 ದಿನಗಳ ಕಾಲ 42ರಿಂದ 44 ಡಿಗ್ರಿ ಸೆಲ್ಸಿಯಸ್ ನಷ್ಟು ಗರಿಷ್ಟ ತಾಪಮಾನ ದಾಖಲಾಗಿದೆ. ನಿನ್ನೆ ಭಾನುವಾರ ಒಂದೇ ದಿನ 46 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕೆಂಡದಂಥಾ ಬಿಸಿಲಿನ ಜೊತೆಗೆ ಬಿಸಿ ಗಾಳಿ ಬೀಸುತ್ತಿರೋದು ದಿಲ್ಲಿ ಜನರನ್ನ ಹೈರಾಣಿಗಿಸಿದೆ.

ಲಾಕ್‌ಡೌನ್ 4.O ರೂಲ್ಸ್ ಸಡಿಲಿಕೆ ಮಾಡಿದ್ದರಿಂದ ಜನ ಫುಲ್ ಖುಸಿಯಾಗಿದ್ರು. ಮನೆಯಿಂದ ಹೊರಹೋಗಿ ಮತ್ತೆ ಕೆಲ್ಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಅಂದುಕೊಂಡಿದ್ರು. ಆದ್ರೆ ಕಾದಕಾವಲಿಯಂಥಾದ ರಣ ಬಿಸಿಲು ಕಂಡ ಮತ್ತಷ್ಟು ದಿನ ಮನೆಯಲ್ಲಿರೋದೇ ಲೇಸು ಅಂದುಕೊಳ್ತಿದ್ದಾರೆ.

ಉತ್ತರದಲ್ಲಿ ಸೂರ್ಯದೇವನ ರುದ್ರ ನರ್ತನ..! ದೆಹಲಿಯಷ್ಟೇ ಅಲ್ಲ.. ಹರಿಯಾಣ, ಪಂಚಾಬ್, ರಾಜಸ್ಥಾನ, ಉತ್ತರಪ್ರದೇಶ, ಬಿಹಾರ ಸೇರಿದಂತೆ ಸುತ್ತಮುತ್ತಲಿನ ಅನೇಕ ರಾಜ್ಯಗಳಲ್ಲಿ ಬಿಸಿಲಿನ ಬೇಗೆ ಹೆಚ್ಚುತ್ತಲೇ ಸಾಗಿದೆ. ಮುಂದಿನ ವಾರಾಂತ್ಯದವರೆಗೂ ಇದೇ ತಾಪಮಾನ ಮುಂದುವರಿಯೋ ಸಾಧ್ಯತೆ ಇದೆ. ಜನ ಬೆಳಗ್ಗೆ 10 ರಿಂದ ಮಧ್ಯಾಹ್ನ 4ರವರೆಗೂ ಮನೆಯಿಂದ ಹೊರಬರಬಾರದಂತೆ ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.

ಸದ್ಯ ಉತ್ತರಭಾರತದಲ್ಲಿ ಹೆಚ್ಚಾಗಿರೋ ಗರಿಷ್ಟ ತಾಪಮಾನ ಹಾಗೂ ಬಿಸಿ ಗಾಳಿ ಮುಂದೆ ದಕ್ಷಿಣದ ರಾಜ್ಯಗಳಿಗೂ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಧ್ಯಪ್ರದೇಶ, ಗುಜರಾತ್, ಚತ್ತೀಸ್‌ಗಢ ಹಾಗೂ ದಕ್ಷಿಣದ ತೆಲಂಗಾಣ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲೂ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬರಲಿದ್ದು, ಬಿಸಿಗಾಳಿ ಬೀಸಲಿದೆ. ಅದೇನೆ ಇರ್ಲಿ ಕೊರೊನಾ ಹೊಡೆತಕ್ಕೆ ಕಂಗಾಲಾಗಿರೋ ದೇಶದ ನಾಗರಿಕರು ಮತ್ತೆ ಬಿರುಬಿಸಿಲಿನಿಂದ ಬಳಲಿ ಬೆಂಡಾಗ್ತಿರೋದಂತೂ ಸತ್ಯ.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು